ಅರಣ್ಯ ಸಂರಕ್ಷಣೆಗೆ ಬರಲಿದೆ ಶ್ವಾನ ಪಡೆ, ತರಬೇತಿ ಆರಂಭ
ಬೆಂಗಳೂರು, ಫೆಬ್ರವರಿ 18: ಗಣ್ಯ ವ್ಯಕ್ತಿಗಳ ಭದ್ರತೆ, ಬಾಂಬ್ ನಿಷ್ಕ್ರಿಯ ದಳದಲ್ಲಿ ಶ್ವಾನಗಳ ಕಾರ್ಯ ವೈಖರಿಯನ್ನು ನಾವು ನೋಡಿದ್ದೇವೆ. ಕರ್ನಾಟಕದಲ್ಲಿ ಅರಣ್ಯ ಸಂರಕ್ಷಣೆಗೆ ಸಹ ಶ್ವಾನದಳ ಸ್ಥಾಪನೆಯಾಗುತ್ತಿದೆ. ಅರಣ್ಯ ಪ್ರದೇಶಗಳಲ್ಲಿ ಕಳ್ಳ ಸಾಗಣೆ ತಡೆಯಲು ರಾಜ್ಯದಲ್ಲಿ ಶ್ವಾನದಳ ಕಾರ್ಯ ನಿರ್ವಹಣೆ ಮಾಡಲಿದೆ. ಇದಕ್ಕಾಗಿ ಚಾಮರಾಜನಗರದಲ್ಲಿ ಈಗಾಗಲೇ ನಾಯಿಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ.
ಅರಣ್ಯ ಪ್ರದೇಶದಲ್ಲಿ ಕಳ್ಳಬೇಟೆ, ಮರಗಳ್ಳತನ ಮುಂತಾದ ಅಪರಾಧಗಳನ್ನು ತಡೆಯಲು ಅರಣ್ಯ ಇಲಾಖೆ ಶ್ವಾನದಳವನ್ನು ಬಳಕೆ ಮಾಡಿಕೊಳ್ಳಲಿದೆ. ಇದಕ್ಕಾಗಿ 10 ಬೆಲ್ಜಿಯಂ ಮಾಲಿನಾಯ್ಸ್ ತಳಿಯ ನಾಯಿಗಳಿಗೆ ತರಬೇತಿ ನೀಡಲಾಗುತ್ತಿದೆ. ಸುಮಾರು 10 ತಿಂಗಳ ತರಬೇತಿ ಬಳಿಕ ನಾಯಿಗಳು ಕಾರ್ಯಚರಣೆ ಆರಂಭಿಸಲಿವೆ.

ರಾಜ್ಯದ ವಿವಿಧ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಮೊದಲು ಶ್ವಾನದಳವನ್ನು ನಿಯೋಜನೆ ಮಾಡಲಾಗುತ್ತದೆ. ಇದಕ್ಕಾಗಿ ಕರ್ನಾಟಕದಲ್ಲಿಯೇ ಅತಿ ಹೆಚ್ಚು ಹುಲಿ, ಆನೆಗಳು ಇರುವ ಬಂಡೀಪುರ ಅರಣ್ಯದಲ್ಲಿ ಶ್ವಾನಗಳಿಗೆ ತರಬೇತಿಯನ್ನು ಪ್ರಾರಂಭಿಸಲಾಗಿದೆ.
ಹೇಗೆ ಕಾರ್ಯ ನಿರ್ವಹಣೆ ಮಾಡಲಿದೆ ದಳ?: ಬಂಡೀಪುರ ಅರಣ್ಯದಲ್ಲಿ ರಾಜ್ಯದ ಮೊದಲ ಟ್ರ್ಯಾಕರ್ ಡಾಗ್ ತರಬೇತಿ ಕೇಂದ್ರವನ್ನು ಆರಂಭಿಸಲಾಗಿದೆ. ಅರಣ್ಯದಲ್ಲಿ ಮರಗಳ್ಳತನ, ದಂತಕ್ಕಾಗಿ ಆನೆಗಳ ಹತ್ಯೆ, ಅರಣ್ಯ ಸಂಪತ್ತುಗಳ ಕಳ್ಳಸಾಗಣೆ ಮುಂತಾದ ಅಪರಾಧಗಳನ್ನು ಪತ್ತೆ ಹಚ್ಚಲು ಶ್ವಾನದಳವನ್ನು ಬಳಕೆ ಮಾಡಲಾಗುತ್ತದೆ.
ಮಾದಕ ವಸ್ತು, ಅನಿಲ ಸೋರಿಕೆ ಮುಂತಾದವುಗಳನ್ನು ಪತ್ತೆ ಹಚ್ಚುವಲ್ಲಿ ಹೆಚ್ಚು ಚಾಣಾಕ್ಷವಾಗಿರುವ ಬೆಲ್ಜಿಯಂ ಮಾಲಿನಾಯ್ಸ್ ತಳಿಯ ನಾಯಿಗಳನ್ನು ಅರಣ್ಯ ಶ್ವಾನದಳಕ್ಕೆ ಸೇರಿಸಿಕೊಳ್ಳಲಾಗುತ್ತದೆ. ಆದ್ದರಿಂದ ನುರಿತ ತರಬೇತುದಾರರ ಮೂಲಕ ನಾಯಿಗಳನ್ನು ಅರಣ್ಯಕ್ಕೆ ಕರೆದುಕೊಂಡು ಬಂದು ಅವುಗಳಿಗೆ ತರಬೇತಿಯನ್ನು ನೀಡಲಾಗುತ್ತಿದೆ.
ಈ ಶ್ವಾನಗಳ ಪಾಲನೆ, ಪೋಷಣೆಗೆ ಒಂದು ಶ್ವಾನಕ್ಕೆ ಇಬ್ಬರನ್ನು ನಿಯೋಜನೆ ಮಾಡಲಾಗಿದೆ. ಈ ಹ್ಯಾಂಡ್ಲರ್ಗಳಿಗೆ ಸಹ ತರಬೇತಿಯನ್ನು ನೀಡಲಾಗುತ್ತಿದೆ. ಶ್ರೀಗಂಧ, ರಕ್ತ ಚಂದನ ಮುಂತಾದ ಮರಗಳನ್ನು ಗುರುತಿಸುವುದು. ಪ್ರಾಣಿಗಳ ಮೂಳೆ, ಉಗುರು, ದಂತ, ಚರ್ಮಗಳ ಮೂಲಕ ಅವುಗಳನ್ನು ಪತ್ತೆ ಹಚ್ಚುವ ತರಬೇತಿಯನ್ನು ಶ್ವಾನಗಳು ಪಡೆಯುತ್ತಿವೆ.
ತರಬೇತಿ ಪೂರ್ಣಗೊಂಡ ಬಳಿಕ ಮೊದಲ ಹಂತದಲ್ಲಿ ಎರಡು ಶ್ವಾನಗಳನ್ನು ಬಂಡೀಪುರ, ನಾಗರಹೊಳೆ, ಕಾಳಿ, ಭದ್ರಾ ಮತ್ತು ಬಿಟಿಆರ್ ಹುಲಿ ಸಂರಕ್ಷಿತ ಪ್ರದೇಶಗಳಿಗೆ ನಿಯೋಜನೆ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ದೇಶದಲ್ಲಿಯೇ ಮೊದಲು ಅರಣ್ಯ ಸಂರಕ್ಷಣೆಗೆ ಶ್ವಾನದಳವನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇದಕ್ಕಾಗಿಯೇ ಬಂಡೀಪುರ ಅರಣ್ಯದಲ್ಲಿ ಟ್ರ್ಯಾಕರ್ ಡಾಗ್ ತರಬೇತಿ ಶಾಲೆ ಆರಂಭಿಸಲಾಗಿದೆ. ಈಗ ತರಬೇತಿ ಪಡೆಯುತ್ತಿರುವ 10 ನಾಯಿಗಳು ಹೇಗೆ ಕಾರ್ಯ ನಿರ್ವಹಣೆ ಮಾಡಲಿವೆ? ಎಂಬುದನ್ನು ತಿಳಿದುಕೊಂಡು ಬಳಿಕ ಇನ್ನಷ್ಟು ನಾಯಿಗಳನ್ನು ದಳಕ್ಕೆ ಸೇರ್ಪಡೆ ಮಾಡಿಕೊಳ್ಳಲು ಅರಣ್ಯ ಇಲಾಖೆ ಚಿಂತನೆ ನಡೆಸಿದೆ.
ಅರಣ್ಯಗಳ ಸಂರಕ್ಷಣೆಯಲ್ಲಿ ಇಲಾಖೆಯ ಸಿಬ್ಬಂದಿಗಳಿಗೆ ಮರಗಳ್ಳತನ, ಆನೆಗಳ ಹತ್ಯೆ, ಅರಣ್ಯ ಸಂಪತ್ತುಗಳ ಕಳ್ಳಸಾಗಣೆ ತಡೆಯುವುದು ಪ್ರಮುಖ ಸವಾಲಾಗಿದೆ. ದಟ್ಟವಾದ ಕಾಡಿನಲ್ಲಿ ಶ್ವಾನದಳದ ಸಹಾಯದಿಂದ ಇಂತಹ ಕಾರ್ಯಾಚರಣೆ ಮಾಡಲು ಇಲಾಖೆ ಶ್ವಾನಗಳಿಗೆ ತರಬೇತಿಯನ್ನು ನೀಡುತ್ತಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications