Get Updates
Get notified of breaking news, exclusive insights, and must-see stories!

ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಲ್ಲಿ ವಿಧಿವಶ

ಬೆಂಗಳೂರು, ನವೆಂಬರ್ 17 : ಬೀದರ್ ಕ್ಷೇತ್ರದ ಕೆಜೆಪಿ ಶಾಸಕ ಮತ್ತು ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಲ್ಲಿ ವಿಧಿವಶರಾಗಿದ್ದಾರೆ. ಚಳಿಗಾಲದ ವಿಧಾನಸಭೆ ಅಧಿವೇಶನದಲ್ಲಿ ಪಾಲ್ಗೊಳ್ಳಲು ನಾಗಮಾರಪಲ್ಲಿ ಅವರು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದರು.

ಮಂಗಳವಾರ ಮುಂಜಾನೆ 5 ಗಂಟೆ ಸುಮಾರಿಗೆ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಹೃದಯಾಘಾತದಿಂದಾಗಿ ಗುರುಪಾದಪ್ಪ ನಾಗಮಾರಪಲ್ಲಿ (74) ಮೃತಪಟ್ಟಿದ್ದಾರೆ. ಸೋಮವಾರ ಬೆಂಗಳೂರಿಗೆ ಆಗಮಿಸಿದ್ದ ಅವರು ಅನಾರೋಗ್ಯದ ಹಿನ್ನಲೆಯಲ್ಲಿ ಕಲಾಪಕ್ಕೆ ಹಾಜರಾಗಿರಲಿಲ್ಲ. [ಬಿಜೆಪಿಗೆ ಸವಾಲು ಹಾಕಿದ ಗುರುಪಾದಪ್ಪ ನಾಗಮಾರಪಲ್ಲಿ]

Gurupadappa Nagamarapalli

ಮೂರು ಬಾರಿ ಸಚಿವರಾಗಿದ್ದ ಗುರುಪಾದಪ್ಪ ನಾಗಮಾರಪಲ್ಲಿ ಅವರು 2013ರ ವಿಧಾನಸಭೆ ಚುನಾವಣೆಯಲ್ಲಿ ಬೀದರ್ ಕ್ಷೇತ್ರದಿಂದ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ್ದರು. ಶಾಸಕರಾಗಿ ಮಾತ್ರವಲ್ಲದೇ ಸಹಕಾರಿ ಕ್ಷೇತ್ರದಲ್ಲಿ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಬೀದರ್‌ನಲ್ಲಿ ಅಂತ್ಯಕ್ರಿಯೆ : ಬೆಂಗಳೂರಿನ ಆರ್‌.ಟಿ.ನಗರದಲ್ಲಿರುವ ನಿವಾಸದಲ್ಲಿದ್ದ ಗುರುಪಾದಪ್ಪ ನಾಗಮಾರಪಲ್ಲಿ ಅವರಿಗೆ ಮಂಗಳವಾರ ಮುಂಜಾನೆ 3 ಗಂಟೆ ಸುಮಾರಿಗೆ ಎದೆನೋವು ಕಾಣಿಸಿಕೊಂಡಿತ್ತು. ಅವರು ಈ ಕುರಿತು ಕುಟುಂಬದವರಿಗೆ ಮಾಹಿತಿ ನೀಡಿದರು. ತಕ್ಷಣ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಹೃಯಯಘಾತದಿಂದ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ವಿಶೇಷ ವಿಮಾನದಲ್ಲಿ ಗುರುಪಾದಪ್ಪ ನಾಗಮಾರಪಲ್ಲಿ ಅವರ ಮೃತದೇಹವನ್ನು ಬೀದರ್‌ಗೆ ತೆಗೆದುಕೊಂಡು ಹೋಗಲಾಗುತ್ತದೆ. ಬುಧವಾರ ಔರಾದ್ ತಾಲೂಕಿನ ಚಿಂತಾಕಿ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಬಿಎಸ್‌ವೈ ಜೊತೆ ಕೆಜೆಪಿ ಸೇರಿದ್ದರು : 7 ಬಾರಿ ಶಾಸಕರಾಗಿದ್ದ ಗುರುಪಾದಪ್ಪ ನಾಗಮಾರಪಲ್ಲಿ ಅವರು ಮೊದಲು ಕಾಂಗ್ರೆಸ್ ಪಕ್ಷದಲ್ಲಿದ್ದರು. ನಂತರ ಬಿಜೆಪಿ ಸೇರಿದ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೆಜೆಪಿ ಕಟ್ಟಿದಾಗ ಕೆಜೆಪಿ ಸೇರಿದ್ದರು. 2013ರ ವಿಧಾನಸಭೆ ಚುನಾವಣೆಯಲ್ಲಿ ಕೆಜೆಪಿ ಅಭ್ಯರ್ಥಿಯಾಗಿ ಬೀದರ್ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+