ಪಠ್ಯಪುಸ್ತಕ ಸಿದ್ಧಪಡಿಸಲು ಸ್ವಾಯುತ್ತ ಸಮಿತಿ ರಚಿಸಿ: ದೇವನೂರು ಮಹದೇವ
ಮೈಸೂರು, ಜೂನ್ 2: ಪಠ್ಯ ಪುಸ್ತಕರ ರಚನೆ ಬಗ್ಗೆ ಸರ್ಕಾರ ಬದಲಾದಾಗಲೆಲ್ಲ ಈ ವಿಷಯ ವಿವಾದವಾಗುತ್ತಿರುವುದರಿಂದ ಸರ್ಕಾರ ಸ್ವಾಯತ್ತ ಸಮಿತಿ ರಚನೆ ಮಾಡಬೇಕು ಎಂದು ಲೇಖಕ ದೇವನೂರು ಮಹಾದೇವ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ದೇವನೂರು ಮಹದೇವ, ಸ್ವಾಯತ್ತ ಸಮಿತಿಯಲ್ಲಿ ಯಾರ ಹಸ್ತಕ್ಷೇಪವೂ ಆಗಬಾರದು. ಕಳೆದ ಸಮಿತಿಯಲ್ಲಿ ಶಿಕ್ಷಣ ತಜ್ಞರೇ ಇರಲಿಲ್ಲ. ಆದರೆ, ಅದು ಸಿದ್ಧಪಡಿಸಿದ ಪುಸ್ತಕಗಳನ್ನು ಈಗಾಗಲೇ ವಿದ್ಯಾರ್ಥಿಗಳಿಗೆ ವಿತರಿಸಲಾಗಿದೆ ಎಂದರು.

ಹೀಗಾಗಿ ಸಂವಿಧಾನದ ಉದ್ದೇಶಗಳಿಗೆ ವಿರುದ್ಧವಾದ ಪಾಠಗಳನ್ನು ಪರೀಕ್ಷೆಗೆ ಪರಿಗಣಿಸದಂತೆ ಸರ್ಕಾರ ಸುತ್ತೋಲೆ ಹೊರಡಿಸಬೇಕು. ಹಿಂದಿನ ಪರಿಷ್ಕರಣೆಯಲ್ಲಿ ಹಿಂದುತ್ವದ ಕಾರ್ಯಸೂಚಿಯ ಮೇಲೆ ಹೆಚ್ಚಿನ ಒತ್ತಡವಿತ್ತು. ಪಠ್ಯಪುಸ್ತಕಗಳ ಕೊರತೆಯಾಗದಂತೆ ಹಿಂದಿನ ಸಮಿತಿಯ ತಪ್ಪುಗಳನ್ನು ಸರಿಪಡಿಸಲು ಪಾಠಗಳನ್ನು ಪರಿಷ್ಕರಿಸಲು ಸರ್ಕಾರ ಆರು ತಿಂಗಳಲ್ಲಿ ತಜ್ಞರ ಸಮಿತಿಯನ್ನು ರಚಿಸಬೇಕು ಎಂದು ಹೇಳಿದರು.
ದೇವನೂರು ಮಹಾದೇವ ಅವರು ರೋಹಿತ್ ಚಕ್ರತೀರ್ಥ ನೇತೃತ್ವದ ಹಿಂದಿನ ಸಮಿತಿಯ ವಿರುದ್ಧ ಪ್ರತಿಭಟಿಸಿದ್ದಲ್ಲದೆ ಪಠ್ಯಪುಸ್ತಕಗಳಲ್ಲಿ ತಮ್ಮ ಬರಹವನ್ನು ಬಳಸದಂತೆ ಸರ್ಕಾರಕ್ಕೆ ಪತ್ರ ಬರೆದಿದ್ದರು. ಸಿದ್ದರಾಮಯ್ಯ ಅವರು ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಮರಳಿರುವುದರಿಂದ, ಪಠ್ಯಪುಸ್ತಕಗಳನ್ನು ಪರಿಶೀಲಿಸಲು ಕ್ರಮಕೈಗೊಳ್ಳುವಂತೆ ಒತ್ತಾಯಿಸಲು ಕೆಲವು ಶಿಕ್ಷಣ ತಜ್ಞರು ಮತ್ತು ಸಾಹಿತಿಗಳು ಈಗಾಗಲೇ ಅವರನ್ನು ಒಂದೆರಡು ಬಾರಿ ಭೇಟಿ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಹೇಳಿ ಅಧಿಕಾರಕ್ಕೆ ಬಂದಿದ್ದು, ಈ ಯೋಜನೆಗಳನ್ನು ಜಾರಿ ಮಾಡಲು ಸರ್ಕಾರ ಗಂಭೀರವಾಗಿ ಚಿಂತನೆ ಮಾಡುತ್ತಿದೆ. ಇದನ್ನು ಎಲ್ಲರೂ ಗಮನಿಸುತ್ತಿದ್ದಾರೆ. ಆದರೆ ಬಿಜೆಪಿಯವರು ಆತುರ ತೋರಿಸುತ್ತಿದ್ದಾರೆ. ಜೆಡಿಎಸ್ ಅವರು ಸಹ ಆತುರಪಡುತ್ತಿದ್ದಾರೆ. ಇವರಿಗೆ ಆತ್ಮಸಾಕ್ಷಿ ಇದೆಯೇ?. ಗ್ಯಾರಂಟಿ ಜಾರಿ ಮಾಡಲು ಸ್ವಲ್ಪ ಸಮಯಾವಕಾಶ ಕೊಡಬೇಕು ಎಂದರು.

ಕಳೆದ ಸರ್ಕಾರದಲ್ಲಿ ಸಾಹಿತಿಗಳು ಹಾಗೂ ಹೋರಾಟಗಾರರ ಮೇಲೆ ಹಾಕಿರುವ ಪ್ರಕರಣಗಳನ್ನು ಸರ್ಕಾರ ಪರಿಶೀಲನೆ ನಡೆಸಿ, ನಿಜವಾಗಿದ್ದರೆ ವಾಪಸ್ ತೆಗೆದುಕೊಳ್ಳಲಿ. ಈ ಬಗ್ಗೆ ಸರಿಯಾಗಿ ಪರಿಶೀಲನೆ ಮಾಡುವುದು ಅಗತ್ಯ. ಕೇಂದ್ರ ಸರ್ಕಾರ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಜೊತೆ ನಡೆದುಕೊಳ್ಳುತ್ತಿರುವ ರೀತಿಯನ್ನು ನೋಡಿದರೆ ಕರುಳು ಕಿವುಚಿದ ಹಾಗೆ ಆಗುತ್ತದೆ. ಶೇಮ್ ಲೆಸ್, ಇವತ್ತಿನ ನಾಯಕರುಗಳನ್ನು ನೋಡಿದರೆ ನಾಚಿಕೆಯಾಗುತ್ತದೆ. ಇವರಿಗೆ ಮನುಷ್ಯತ್ವವೂ ಇಲ್ಲ, ನಾಚಿಕೆಯೂ ಇಲ್ಲ ಪ್ರಜಾಪ್ರಭುತ್ವ ಇರುವ ದೇಶದಲ್ಲಿ ಈ ರೀತಿ ನಡೆದಿರುವುದು ಎಲ್ಲರೂ ತಲೆ ತಗ್ಗಿಸುವಂಥದ್ದು ಎಂದು ತೀವ್ರ ಬೇಸರ ವ್ಯಕ್ತಪಡಿಸಿದರು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ












Click it and Unblock the Notifications