Get Updates
Get notified of breaking news, exclusive insights, and must-see stories!

Pratap Simha: ಕಾಂಗ್ರೆಸ್‌ ಸೇರುವ ಬಗ್ಗೆ ಪ್ರತಾಪ್‌ ಸಿಂಹ ಹೇಳಿದ್ದೇನು?

ಮೈಸೂರಿನ ರಸ್ತೆಯೊಂದಕ್ಕೆ ಸಿಎಂ ಸಿದ್ದರಾಮಯ್ಯ ಅವರ ಹೆಸರು ನಾಮಕರಣ ಮಾಡುವ ವಿಚಾರಕ್ಕೆ ಬೆಂಬಲ ಸೂಚಿಸಿದ್ದ ಬಿಜೆಪಿ ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು ಅಚ್ಚರಿ ಮೂಡಿಸಿದ್ದರು. ಇದರ ಬೆನ್ನಲ್ಲೇ ಪ್ರತಾಪ್‌ ಸಿಂಹ ಅವರು ಕಾಂಗ್ರೆಸ್‌ ಸೇರಲಿದ್ದಾರೆ ಎನ್ನುವ ಚರ್ಚೆಗಳು ಕೂಡ ಎಲ್ಲೆಡೆ ನಡೆಯುತ್ತಿವೆ. ಈ ಬಗ್ಗೆ ಪ್ರತಾಪ್‌ ಸಿಂಹ ಅವರೇ ಸ್ಪಷ್ಟನೆ ನೀಡಿದ್ದಾರೆ.

ಮೈಸೂರು ಪಾಲಿಕೆಯು ಕೆಆರ್‌ಎಸ್‌ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರು ನಾಮಕರಣ ಮಾಡಲು ಮುಂದಾಗಿದ್ದು, ಈ ಬಗ್ಗೆ ಪ್ರತಾಪ್‌ ಸಿಂಹ ಕೂಡ ಸಹಮತ ವ್ಯಕ್ತಪಡಿಸಿದ್ದರು. ಸಿದ್ದರಾಮಯ್ಯ ಅವರು ಮೈಸೂರಿಗೆ ಹಲವು ಕೊಡುಗೆಗಳನ್ನು ನೀಡಿದ್ದಾರೆ. ಹಾಗಾಗಿ ಅವರ ಹೆಸರು ಇಡುವುದರಲ್ಲಿ ತಪ್ಪಿಲ್ಲ ಎನ್ನುವ ಮೂಲಕ ಸಂಚಲನ ಸೃಷ್ಟಿಸಿದ್ದರು.

Former BJP MP Pratap Simha Clarifies Rumors About Joining Congress Party

ಇದರ ನಂತರ ಪ್ರತಾಪ್‌ ಸಿಂಹ ಅವರು ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದಾರೆ. ಹಾಗಾಗಿಯೇ ಅವರು ಸಿದ್ದರಾಮಯ್ಯ ಪರವಾಗಿ ಮಾತನಾಡಿದ್ದಾರೆ ಎಂದು ಹೇಳಲಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿರುವ ಪ್ರತಾಪ್‌ ಸಿಂಹ, ನಾನು ಕಾಂಗ್ರೆಸ್‌ ಸೇರುವುದು ಸುಳ್ಳು, ನಾನು ಕಾಂಗ್ರೆಸ್‌ ಸೇರಲ್ಲ ಎಂದಿದ್ದಾರೆ.

ಕೆಆರ್‌ಎಸ್‌ ರಸ್ತೆಗೆ ಪ್ರಿನ್ಸಸ್ ಎಂದು ಮಹರಾಜರ ಕಾಲದಲ್ಲೇ ಹೆಸರಿತ್ತು ಎನ್ನುವುದಾದರೆ, ಬದಲಾವಣೆ ಮಾಡುವುದು ಬೇಡ ಎಂದೂ ಪ್ರತಾಪ್‌ ಸಿಂಹ ಯೂಟರ್ನ್‌ ಹೊಡೆದಿದ್ದಾರೆ. ಸ್ಥಳೀಯ ಶಾಸಕ ಹರೀಶ್ ಗೌಡ ಅವರಿಗೆ ನಾನೇ ಮನವಿ ಮಾಡುತ್ತೇನೆ. ಆ ರಸ್ತೆಗೆ ಯಾವುದೇ ಹೆಸರಿಲ್ಲ ಎನ್ನುವ ಕಾರಣಕ್ಕೆ ಸಿದ್ದರಾಮಯ್ಯ ಅವರ ಹೆಸರು ಇಡಲಿ ಎಂದು ಹೇಳಿದ್ದೆ. ಇದಕ್ಕೆ ನಾನು ಕಾಂಗ್ರೆಸ್‌ ಸೇರುತ್ತೇನೆ ಎಂದೆಲ್ಲ ವಂದಂತಿ ಹಬ್ಬಿದೆ ಎಂದಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ನನ್ನ ಮೇಲೆ ಕಳೆದ 3 ತಿಂಗಳಲ್ಲಿ 5 ಎಫ್‌ಐಆರ್‌ ಹಾಕಿದೆ. ನನ್ನ ಬದ್ಧತೆ ಪ್ರಶ್ನಿಸುವವರು ನನ್ನ ಟ್ರ್ಯಾಕ್ ರೆಕಾರ್ಡ್ ಒಮ್ಮೆ ನೋಡಿ ಎಂದು ವದಂತಿ ಹಬ್ಬಿಸಿದವರಿಗೆ ಟಾಂಗ್‌ ನೀಡಿದ್ದಾರೆ. ರಸ್ತೆಗೆ ಹೆಸರಿಡುವ ಈ ವಿಚಾರವನ್ನು ದೊಡ್ಡದು ಮಾಡುವುದು ಬೇಡ. ಇದನ್ನು ವಿವಾದ ಮಾಡುವುದು ಬೇಡ. ಇದನ್ನು ಇಲ್ಲಿಗೆ ನಿಲ್ಲಿಸೋಣ ಎಂದೂ ಪ್ರತಾಪ್‌ ಸಿಂಹ ಯೂಟರ್ನ್‌ ಹೊಡೆದಿದ್ದಾರೆ.

Former BJP MP Pratap Simha Clarifies Rumors About Joining Congress Party

ಮೈಸೂರಿಗೆ ಮಹಾರಾಜರ ಕೊಡುಗೆಯೂ ಸಾಕಷ್ಟಿದೆ. ಜನಪ್ರತಿನಿಧಿಗಳ ಕೊಡುಗೆಯೂ ಇದೆ. ಆದರೆ ಈಗಾಗಲೇ ಇಟ್ಟಿರುವ ಹೆಸರನ್ನು ಬದಲಾಯಿಸುವುದು ಬೇಡ. ಇದಕ್ಕೆ ಬದಲಾಗಿ ಯಾವುದಾದರೂ ಹೊಸ ಬಡಾವಣೆ ನಿರ್ಮಿಸಿ ಅದಕ್ಕೆ ಸಿದ್ದರಾಮಯ್ಯ ಅವರ ಹೆಸರು ಇಡಲಿ. ಯಾವುದಾದರೂ ರಸ್ತೆಗೆ ಸಿಎಂ ಹೆಸರಿಡಲಿ ಎಂದಿದ್ದಾರೆ. ಮುಡಾದಿಂದಲೇ ಈ ಕೆಲಸ ನಡೆದರೆ ಇದು ಇನ್ನೂ ಅರ್ಥಪೂರ್ಣವಾದದ್ದು ಎಂದು ಪ್ರತಾಪ್‌ ಸಿಂಹ ಹೇಳಿದ್ದಾರೆ.

ಈ ಹಿಂದೆ ಇದೇ ವಿಚಾರವಾಗಿ ಮಾತನಾಡಿದ್ದ ಪ್ರತಾಪ್ ಸಿಂಹ, ಸಿದ್ದರಾಮಯ್ಯ ಅವರನ್ನು ನಾನು ಸೈದ್ಧಾಂತಿಕವಾಗಿ ಈಗಲೂ ಮತ್ತು ಮುಂದೆಯೂ ವಿರೋಧಿಸುತ್ತೇನೆ. ಆದರೆ ರಸ್ತೆಗೆ ಅವರ ಹೆಸರು ಇಡುವ ವಿಚಾರದಲ್ಲಿ ಸಣ್ಣತನ ಬೇಡ ಎಂದಿದ್ದರು. ಮಹಾರಾಜರ ನಂತರವೂ ಅನೇಕ ಸಾಧಕರು ಮೈಸೂರಿನಲ್ಲಿ ಬಂದಿದ್ದಾರೆ ಎಂದು ಪ್ರತಾಪ್‌ ಸಿಂಹ ಹೇಳಿದ್ದರು. ಇದೀಗ ಅವರು ಯೂಟರ್ನ್‌ ಹೊಡೆದಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+