ಸಿದ್ದರಾಮಯ್ಯ ಅವರು ವಿತಂಡ ವಾದ ಮಾಡುವುದರಲ್ಲಿ ನಿಸ್ಸೀಮರು: ಮಾಜಿ ಸಿಎಂ ಹೇಳಿದ್ದೇನು?

ಬೆಂಗಳೂರು, ಜನವರಿ 04: ಸಿದ್ದರಾಮಯ್ಯ ಅವರು ವಿತಂಡ ವಾದ ಮಾಡುವುದರಲ್ಲಿ ನಿಸ್ಸೀಮರು. ಅವರಿಗೆ ಹರಿಪ್ರಸಾದ್ ಮೇಲೆ ನಂಬಿಕೆ ಇಲ್ಲ. ಆದರೆ, ವಿತಂಡ ವಾದ ಮಾಡುವುದೇ ಅವರ ಸ್ವಭಾವ‌ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಮ ಮಂದಿರ ನಿರ್ಮಾಣ ಮಾಡುವುದರಲ್ಲಿ ಯಾವುದೇ ಸಾಮಾನ್ಯ ಜನರು ರಾಜಕಾರಣ ಮಾಡುತ್ತಿಲ್ಲ.‌ ತಲೆ‌ಕೆಡಿಸಿಕೊಂಡಿಲ್ಲ. ಕಾಂಗ್ರೆಸ್ ‌ನವರು ಮಾತ್ರ ರಾಜಕಾರಣ ಮಾಡುತ್ತಿದ್ದಾರೆ. ರಾಮಮಂದಿರ ಉದ್ಘಾಟನೆಗೆ ಕೇವಲ ಪ್ರಧಾನಿ ಮೋದಿ ಹೊಗುತ್ತಿಲ್ಲ. ರಾಮ ಮಂದಿರಕ್ಕಾಗಿ ಯಾರು ಸೇವೆ ಸಹಾಯ ಮಾಡಿದ್ದಾರೊ ಅವರನ್ನು ರಾಮ ಮಂದಿರ ಸಮಿತಿಯವರು ಕರೆದಿದ್ದಾರೆ ಎಂದು ಹೇಳಿದರು.

Former Chief Minister Basavaraj Bommai Lashed Out Against Chief Minister Siddaramaiah

ಕಾಂಗ್ರೆಸ್ ನವರು ಅದರಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಗುಜರಾತಿನ ಸೋಮನಾಥ ಮಂದಿರ ಅತ್ಯಂತ ಅದ್ಬುತ ಮಂದಿರ ಆಗಿನ ಪ್ರಧಾನಿ ನೆಹರು ಹೋಗಿರಲಿಲ್ಲ. ಹಾಗಾಗಿ ವಲ್ಲಭಬಾಯಿ ಪಟೇಲರು ಹೋಗಿದ್ದರು. ಈಗಿನ ಪ್ರಧಾನಿಗಳು ಆಸ್ತಿಕರಿದ್ದಾರೆ. ರಾಮನ ಭಕ್ತರಿದ್ದಾರೆ‌. ಹೀಗಾಗಿ ಅವರು ಉದ್ಘಾಟನೆ ಮಾಡುತ್ತಿದ್ದಾರೆ ಎಂದು ಹೇಳಿದರು.

ರಾಜ್ಯದಲ್ಲಿ ಬಹುತೆಕ ತಾಲುಕುಗಳು ಬರ ಅಂತ ಆಗಿದೆ. ಮುಂಗಾರು, ಹಿಂಗಾರು ವಿಫಲವಾಗಿದೆ. ರಾಜ್ಯ ಸರ್ಕಾರ ಬರ ನಿರ್ವಹಣೆಗೆ ಯಾವುದೇ ಹಣ ಬಿಡುಗಡೆ ಮಾಡಿಲ್ಲ. ಯಾವುದೇ ಕಾಮಗಾರಿ ಆರಂಭಿಸಿಲ್ಲ. ಆರು ತಿಂಗಳು ಕಳೆದರೂ ಯಾವುದೇ ಕೆಲಸ ಮಾಡದ ಸರ್ಕಾರ ಸಿದ್ದರಾಮಯ್ಯ ಸರ್ಕಾರ.

Former Chief Minister Basavaraj Bommai Lashed Out Against Chief Minister Siddaramaiah

ಆಹಾರ ಉತ್ಪಾದನೆ ಕಡೆಮೆಯಾಗಲಿದೆ ಅಂತ ಕೃಷಿ ಇಲಾಖೆ ವರದಿ ಹೇಳುತ್ತಿದೆ. ಹೀಗಿದ್ದಾಗೂ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿಲ್ಲ. ಮಾತೆತ್ತಿದರೆ ಕೇಂದ್ರ ಸರ್ಕಾರದ ಕಡೆ ಬೆರಳು ತೋರಿಸುತ್ತಾರೆ. ಹಿಂದೆ ಎಲ್ಲ ಸರ್ಕಾರಗಳು ಕೇಂದ್ರದ ದಾರಿ ಕಾಯದೇ ಮೊದಲು ಜನರ ಸಂಕಷ್ಟಕ್ಕೆ ಸ್ಪಂದಿಸುವ‌ ಕೆಲಸ ಮಾಡುತ್ತಿವೆ.

ಸಿಎಂ ಬೆಳಗಾವಿ ಅಸೆಂಬ್ಲಿ ಅಧಿವೇಶನಕ್ಕೆ ಮುಂದೆ ರೈತರ ಪ್ರತಿ ಹೆಕ್ಟೇಕರ್ ಗೆ 2000 ರೂ. ಹಾಕುವುದಾಗಿ ಹೇಳಿದ್ದೀರಿ, ಈಗ ಆಧಾರ ಲಿಂಕ್ ಮಾಡುವುದಾಗಿ ಹೇಳುತ್ತಿದ್ದೀರಿ. ಈಗಾಗಲೇ ಫ್ರುಟ್ಸ್ ಸಾಪ್ಟ್ ವೇರ್ ನಲ್ಲಿ ಸುಮಾರು 69. ಲಕ್ಷ ರೈತರ ಆಧಾರ ಲಿಂಕ್ ಇರುವ ದಾಖಲೆ ಇದೆ. ಅದನ್ನು ಮರೆ ಮಾಚಿ ಸರ್ಕಾರದ ಆರ್ಥಿಕ ದುಸ್ಥಿತಿ ಮರೆ ಮಾಚಲು ತಾಂತ್ರಿಕ ಕಾರಣ ಹೇಳುತ್ತಿದ್ದೀರಿ. ನಿಮಗೆ ರೈತರ ಬಗ್ಗೆ ಕಾಳಜಿ ಇದ್ದರೆ‌ ತಕ್ಷಣ 2000 ರೂ. ರೈತರ ಖಾತೆಗೆ ಜಮಾ ಮಾಡಬೇಕು. ರೈತರು ತಿರುಗಿ ಬಿದ್ದರೆ ಯಾವ ಸರ್ಕಾರವೂ ನಡೆಯುವುದು ಕಷ್ಟವಾಗಲಿದೆ.

ಇನ್ನೊಂದು ಗೃಹ ಸಚಿವ ಪರಮೇಶ್ವರ್ ಅವರು ಹರಿ ಪ್ರಸಾದ ಅವರ ಹೇಳಿಕೆ ಬಗ್ಗೆ ಇಲಾಖೆಗೆ ಮಾಹಿತಿ ಇಲ್ಲ ಅಂತ ಹೇಳಿದ್ದಾರೆ. ಗೋದ್ರಾ ಮಾದರಿ ಹಿಂಸೆ ನಡೆಯಬಹುದು ಅಂತ ಸ್ಪಷ್ಟವಾಗಿ ಹೇಳಿದ್ದಾರೆ. ಒಬ್ಬ ಎಂ ಎಲ್ ಸಿ ಗೆ ಇರುವ .ಅಹಿತಿ ಗೃಹ ಇಲಾಖೆಗೆ ಇಲ್ಲ ಎಂದರೆ ಇಂಟ್ಲಿಜೆನ್ಸ್ ವಿಫಲವಾಗಿದೆ ಎಂದು ಹೇಳಿದರು.

ಗೃಹ ಸಚಿವರು ಅಗತ್ಯ ಬಿದ್ದರೆ ಅವರನ್ನು ಕರೆದು ಮಾತನಾಡುತ್ತೇನೆ ಎಂದು ಹೇಳಿದ್ದಾರೆ. ಪ್ರಚೋದನಾತ್ಮಕವಾಗಿ ಹೇಳಿಕೆ ನೀಡಿದ್ದು, ಬೇರೆಯವರು ಮಾಡಿದ್ದರೆ ಇಷ್ಟೊತ್ತಿಗೆ ಬಂಧಿಸುತ್ತಿದ್ದರು. ಬಿಜೆಪಿಯವರು ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಇವರ ಅವಧಿಯಲ್ಲಿ ಅಪರಾಧ ಪ್ರಕರಣ ಹೆಚ್ಚಾಗಿತ್ರಿವೆ. ಮಹಿಳೆಯರ ಮೇಲೆ ದೌರ್ಜನ್ಯ, ಅಕ್ರಮ ಸಾರಾಯಿ ದಂಧೆ, ಇಸ್ಪೀಟ್ ಅಡ್ಡೆಗಳು ಅವ್ಯಾಹತವಾಗಿ ನಡೆಯುತ್ರಿವೆ. ಗೃಹ ಇಲಾಖೆ ಮುಖ್ಯಸ್ಥರಾಗಿ ಕ್ರಮ ಕೈಗೊಳ್ಳಬೇಕು.

ಶ್ರೀಕಾಂತ ಪೂಜಾರಿ ವಿರುದ್ದ ಎಷ್ಟೇ ಪ್ರಕರಣ ಇರಲಿ ಅವು‌ಕೋರ್ಟ್ ನಲ್ಲಿ ಇವೆ. ಆದರೆ ,ಈ ಸಂದರ್ಭದಲ್ಲಿ ಕರಸೇವಕರ ಆರೋಪದ ಪ್ರಕರಣದಲ್ಲಿ ಬಂಧಿಸುವ ಉದ್ದೇಶವೇನಿತ್ತು. ಹುಬ್ಬಳ್ಳಿಯಲ್ಲಿ ಅನೇಕ ಕರ ಸೇವೆಕರು ಗಡಿ ಪಾರ್ ಆದವರು ಇದ್ದಾರೆ. ಇವರೊಬ್ಬರ ಮೇಲೆ ಏಕೆ ಈ ಸಂದರ್ಭದಲ್ಲಿ ಕ್ರಮ ಕೈಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+