ಪ್ರೀತಂ ಗೌಡ ಮನೆ ಮೇಲೆ ದಾಳಿ: ಸಿದ್ದರಾಮಯ್ಯ ಖಂಡನೆ
Recommended Video
ಬೆಂಗಳೂರು, ಫೆಬ್ರವರಿ 13: ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಕುರಿತು ಕೀಳಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಹಾಸನ ಶಾಸಕ ಪ್ರೀತಂ ಗೌಡ ಅವರ ಮನೆಯ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ತೂರಿದ ಘಟನೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ.
ಕಾರ್ಯಕರ್ತರು ಸಂಯಮದಿಂದ ವರ್ತಿಸಬೇಕು ಮತ್ತು ಈ ಘಟನೆ ವಿಚಾರದಲ್ಲಿ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ದೇವೇಗೌಡ ಬಗ್ಗೆ ಆಕ್ಷೇಪಾರ್ಹ ಮಾತು: ಬಿಜೆಪಿ ಶಾಸಕನ ಮನೆ ಮುಂದೆ ಪ್ರತಿಭಟನೆ
ಹಾಗೆಯೇ, ದೇವೇಗೌಡರ ಸಾವಿನ ಕುರಿತು ಪ್ರೀತಂ ಗೌಡ ನೀಡಿದ ಹೇಳಿಕೆಯನ್ನು ಸಹ ಅವರು ಖಂಡಿಸಿದ್ದಾರೆ. ಈ ಬಗ್ಗೆ ಅವರು ಸರಣಿ ಟ್ವೀಟ್ಗಳನ್ನು ಮಾಡಿದ್ದಾರೆ.
Array |
ಹಿಂಸಾನಂದ ಮನಸ್ಥಿತಿ
ರಾಜಕೀಯ ಭಿನ್ನಾಭಿಪ್ರಾಯಗಳನ್ನು ಹೊಂದುವುದು ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಸಹಜ. ಆದರೆ, ವಿರೋಧ ಪಕ್ಷದ ನಾಯಕರಿಗೆ ಅವರ ವೈಯಕ್ತಿಕ ಬದುಕಿನಲ್ಲಿ ಕೆಡುಕನ್ನು ಬಯಸುವುದು ಹಿಂಸಾನಂದ ಮನಸ್ಥಿತಿಯುಳ್ಳ ಜನರಿಂದ ಮಾತ್ರ ಸಾಧ್ಯ. ಈ ಹಿಂದೆ ಈ ಪದಗಳನ್ನು ಜನಾರ್ದನ ರೆಡ್ಡಿ ಅವರ ಬಾಯಿಯಿಂದ ಕೇಳಿದ್ದೆವು.
ಎಚ್ಡಿಕೆ-ರೇವಣ್ಣ ವಿರುದ್ಧ ಕೊಲೆ ಸಂಚಿನ ಆರೋಪ ಹೊರಿಸಿದ ಬಿಜೆಪಿ ಶಾಸಕ ಪ್ರೀತಂಗೌಡ
Array |
ಪಾರ್ಥೇನಿಯಂ ಕಿತ್ತುಹಾಕಬೇಕಿದೆ
ಈಗ ಬಿಜೆಪಿಯ ವಿದೂಷಕನ ಮಾತುಗಳು. ಅದು ಯಾರೇ ಇರಲಿ ವೈಯಕ್ತಿಕ ದ್ವೇಷವನ್ನು ಪ್ರಕಟಿಸುವುದು ಬಿಜೆಪಿಯ ಡಿಎನ್ಎದಲ್ಲಿಯೇ ಇದೆ ಎನ್ನುವುದು ಸ್ಪಷ್ಟವಾದ ಸಂಗತಿ. ಈ ಪಾರ್ಥೇನಿಯಂ ಕಳೆಯನ್ನು ಕಿತ್ತುಹಾಕುವ ಅಗತ್ಯವಿದೆ. ಈ ಹಿಂದೆ ಮಹಾತ್ಮಾ ಗಾಂಧೀಜಿ ಮತ್ತು ಈಗ ವಿರೋಧ ಪಕ್ಷಗಳ ನಾಯಕರು.
ಬಿಜೆಪಿ ಶಾಸಕ ಪ್ರೀತಂ ಹಾಗೂ ಟ್ವೀಟ್ ವಿರುದ್ಧ ಪ್ರಜ್ವಲ್ ಫ್ಯಾನ್ಸ್ ಗರಂ
Array |
ಆಗ ಜನಾರ್ದನ ರೆಡ್ಡಿ, ಈಗ...
ವಿರೋಧಿಗಳ ಸಾವು ಬಯಸುವಷ್ಟು ರಾಜಕಾರಣಿಗಳು ಅಧೋಗತಿಗೆ ಇಳಿಯಬಾರದು. ಈದುರ್ಬುದ್ದಿ ಬಿಜೆಪಿ ರಕ್ತದಲ್ಲಿದೆ. ಹಿಂದೆ ಜನಾರ್ದನ ರೆಡ್ಡಿ ನನ್ನ ಕುಟುಂಬದ ಬಗ್ಗೆ ಹೇಳಿದ್ದ ಮಾತನ್ನೇ ಈಗ ಬಿಜೆಪಿ ನಾಯಕರು ದೇವೇಗೌಡ ಕುಟುಂಬದ ಬಗ್ಗೆ ಹೇಳಿದ್ದಾರೆ. ಖಂಡನೀಯ ನಡವಳಿಕೆ ಎಂದಿರುವ ಸಿದ್ದರಾಮಯ್ಯ, ಮಾತಾಡು ಬಿಜೆಪಿ ಮಾತಾಡು ಎಂಬ ಹ್ಯಾಷ್ ಟ್ಯಾಗ್ ಬಳಸಿದ್ದಾರೆ.
'ಯಾರದೋ ಟ್ಯಾಕ್ಸ್ ದುಡ್ಡು, ದೇವೇಗೌಡ್ರ ಮೊಮ್ಮಕ್ಕಳ ಮೋಜು': ಬಿಜೆಪಿ
|
ಘಟನೆ ಖಂಡನೀಯ
ಹಾಸನದ ಶಾಸಕರ ಮನೆ ಮುಂದೆ ನಡೆದಿರುವ ಘಟನೆ ಖಂಡನೀಯ. ಇಂತಹ ಸಂದರ್ಭಗಳನ್ನು ದುಷ್ಕರ್ಮಿಗಳು ದುರ್ಬಳಕೆ ಮಾಡಲು ಪೋಲಿಸರು ಅವಕಾಶ ನೀಡಬಾರದು. ಘಟನೆ ಬಗ್ಗೆ ಪೋಲಿಸರು ನಿಷ್ಪಕ್ಷಪಾತ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಕಾರ್ಯಕರ್ತರು ಸಂಯಮದಿಂದ ವರ್ತಿಸಬೇಕು ಎಂದು ಅವರು ಪ್ರೀತಂ ಗೌಡ ಅವರ ಮನೆಯ ಮೇಲೆ ಕಲ್ಲು ತೂರಾಟ ನಡೆಸಿರುವುದನ್ನು ಖಂಡಿಸಿದ್ದಾರೆ.