ನಾನು ನಂಬಿಕಸ್ತ ಗೆಳೆಯನನ್ನು ಕಳೆದುಕೊಂಡಿದ್ದೇನೆ: ಸಿದ್ದರಾಮಯ್ಯ!
ಬೆಂಗಳುರು, ನ. 25: ರಾಜಕೀಯದ ಹೊರತಾಗಿಯೂ ವೈಯಕ್ತಿಕ ಸಂಬಂಧಗಳಿಗೆ ಮಹತ್ವ ಕೊಡುವ ವ್ಯಕ್ತಿ ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರು. ತಮ್ಮ ರಾಜಕೀಯ ಜಿವನದಲ್ಲಿ ಹಲವು ಏಳು-ಬೀಳುಗಳನ್ನು ಕಂಡವರು. ಕಷ್ಟದ ಸಂದರ್ಭದಲ್ಲಿ ಕೈಹಿಡಿದವರನ್ನು ಮರೆಯುವ ಸ್ವಭಾವ ಸಿದ್ದರಾಮಯ್ಯ ಅವರದ್ದಲ್ಲ. ಹೀಗಾಗಿ ಅಗಲಿದ ಹಿರಿಯ ಗೆಳೆಯ ಕಾಂಗ್ರೆಸ್ ಹಿರಿಯ ನಾಯಕ, ಎಐಸಿಸಿ ಖಜಾಂಚಿ ಅಹ್ಮದ್ ಪಟೇಲ್ ಅವರನ್ನು ನೆನೆದೆ ಸಿದ್ದರಾಮಯ್ಯ ಅವರು ಭಾವುಕರಾಗಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಮತ್ತು ನನಗೆ ಆತ್ಮೀಯ ಸ್ನೇಹಿತರಾಗಿದ್ದ ರಾಜ್ಯಸಭಾ ಸದಸ್ಯ ಅಹ್ಮದ್ ಪಟೇಲ್ ನಿಧನದಿಂದ ಆಘಾತಕ್ಕಿಡಾಗಿದ್ದೇನೆ. ನಮ್ಮ ಪಕ್ಷದ ಅಧ್ಯಕ್ಷರಾದ ಸೋನಿಯಾಗಾಂಧಿಯವರಿಗೆ ಸುದೀರ್ಘಕಾಲ ರಾಜಕೀಯ ಕಾರ್ಯದರ್ಶಿಯಾಗಿ ಪಕ್ಷವನ್ನು ಸೋಲು-ಗೆಲುವುಗಳ ಕಾಲದಗೆಖೆತನವನ್ನುಲ್ಲಿ ನಿರ್ವಾಜ್ಯ ನಿಷ್ಠೆಯಿಂದ ಮುನ್ನಡೆಸಿದ್ದ ಅಹ್ಮದ್ ಪಟೇಲ್ ತಮ್ಮ ಇಡೀ ಬದುಕನ್ನೇ ಪಕ್ಷಕ್ಕೆ ಮುಡಿಪಾಗಿಟ್ಟವರು ಎಂದು ಸಿದ್ದರಾಮಯ್ಯ ಅವರು ಪಟೇಲ್ ಅವರನ್ನು ನೆನೆದಿದ್ದಾರೆ.
ಪ್ರಚಾರದ ಬೆಳಕಿನಲ್ಲಿ ಹೆಚ್ಚು ಕಾಣಿಸಿಕೊಳ್ಳದೆ, ರಾಜಕೀಯ ಅಧಿಕಾರಕ್ಕಾಗಿ ಹೆಚ್ಚು ಆಸೆ ಪಡದೆ, ಪಕ್ಷವನ್ನೇ ತನ್ನ ಕುಟುಂಬವೆಂದು ತಿಳಿದುಕೊಂಡು ದುಡಿಯುತ್ತಿದ್ದ ಪಟೇಲ್ ಅವರ ರಾಜಕೀಯ ಬದುಕು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರಿಗೆಲ್ಲ ಮಾದರಿಯಾದದ್ದು. ಸೋನಿಯಾಗಾಂಧಿಯವರು ಮೊದಲ ಬಾರಿ ಪಕ್ಷದ ಅಧ್ಯಕ್ಷರಾದ ದಿನದಿಂದ ತನ್ನ ಕೊನೆದಿನದ ವರೆಗೆ ಅವರ ರಾಜಕೀಯ ಕಾರ್ಯದರ್ಶಿಯಾಗಿ ಅವರೆಲ್ಲ ದು:ಖ ದುಮ್ಮಾನಗಳನ್ನು ಹಂಚಿಕೊಂಡು ಬೆಂಗಾವಲಿಗೆ ನಿಂತಿದ್ದವರು ಅಹ್ಮದ್ ಪಟೇಲ್. ಈ ಸಾವಿನಿಂದಾಗಿ ಸೋನಿಯಾಗಾಂಧಿಯವರಿಗಾಗಿರುವ ದುಃಖವನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ.

ಅಹ್ಮದ್ ಪಟೇಲ್ ಅವರ ನಿಧನದಿಂದ ವೈಯಕ್ತಿಕವಾಗಿ ನಾನು ನಂಬಿಕಸ್ತ ಗೆಳೆಯನನ್ನು, ಬಿಕ್ಕಟ್ಟಿನ ಸಂದರ್ಭದಲ್ಲಿ ಕೈಹಿಡಿದು ಧೈರ್ಯ ತುಂಬುತ್ತಿದ್ದ ಹಿತೈಷಿಯನ್ನು ಕಳೆದುಕೊಂಡಿದ್ದೇನೆ. ನನ್ನ ರಾಜಕೀಯ ಬದುಕಿನ ಪ್ರಮುಖ ನಿರ್ಧಾರಕ್ಕೆ ಕಾರಣಕರ್ತರಾಗಿದ್ದ ಅಹ್ಮದ್ ಪಟೇಲ್ ಕೊನೆಯ ವರೆಗೆ ನನ್ನ ಹಿತಚಿಂತಕರಾಗಿದ್ದರು.
ನನ್ನ ದು:ಖ ಮಾತುಗಳನ್ನು ಮೀರಿದ್ದು. ಅಹ್ಮದ್ ಪಟೇಲ್ ಅವರನ್ನು ಕಳೆದುಕೊಂಡಿರುವ ಅವರ ಕುಟುಂಬದ ಶೋಕದಲ್ಲಿ ನಾನು ಭಾಗಿಯಾಗಿದ್ದೇನೆ. ಕೊರೊನಾ ಸೋಂಕಿನ ನಿರ್ಬಂಧಗಳಿಂದಾಗಿ ಪಟೇಲ್ ಅವರ ಅಂತಿಮ ದರ್ಶನವನ್ನು ಮಾಡುವ ಅವಕಾಶ ಸಿಗುತ್ತೋ ಇಲ್ಲವೋ ಗೊತ್ತಿಲ್ಲ. ಅಹ್ಮದ್ ಪಟೇಲ್ ಅವರಿಗೆ ನನ್ನ ಶ್ರದ್ದಾಂಜಲಿ ಎಂದು ಸಿದ್ದರಾಮಯ್ಯ ಅವರು ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications