ಬೆಂಗಳೂರು- ಮೈಸೂರು ಹೆದ್ದಾರಿ ಕಳಪೆ ಕಾಮಗಾರಿ ಬಗ್ಗೆ ಮಾಜಿ ಸಿಎಂ ಆಕ್ರೋಶ
ಬೆಂಗಳೂರು, ಆ. 30: ಉತ್ತಮವಾದ ಕೆಲಸ ಏನಾಗಿದೆ ಎಂಬುದನ್ನು ಪ್ರತಾಪಸಿಂಹ ಬಂದು ನೋಡಲಿ. ಅವರೇ ನಿಂತು ಫೋಟೊ ತೆಗೆಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಾಕಿಸಿಕೊಂಡಿದ್ದರಲ್ಲ?, ಅವರೇ ರಸ್ತೆ ನಿರ್ಮಾಣ ಮಾಡಿರುವ ರೀತಿ ಫೋಟೊ ತೆಗೆಸಿಕೊಂಡಿದ್ದರು. ಬಿಡದಿ ಬಳಿ ಬಂದು ಅಧಿಕಾರಿಗಳ ಸಭೆ ಮಾಡಿದ್ದರು. ಇಲ್ಲಿಯೇ ಬಂದು ಮಧ್ಯಸ್ಥಿಕೆ ವಹಿಸಿದ್ದರಲ್ಲ, ಈಗ ಬಂದು ನೋಡಲಿ, ಸಂಗಬಸಪ್ಪನದೊಡ್ಡಿ ಬಳಿ ಬಂದು ಸ್ವಿಮ್ಮಿಂಗ್ ಮಾಡಬಹುದು!
ಸಂಸದ ಪ್ರತಾಪ್ ಸಿಂಹ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಚಲಿಸುತ್ತಿದ್ದ ಕಾರಿನ ಮೇಲೆ ಆಲದ ಮರ ಉರುಳಿಬಿದ್ದು ದುರ್ಮರಣಕ್ಕೀಡಾದ ಬಿಡದಿಯ ಇಟ್ಟಮಡು ನಿವಾಸಿ ಬೋರೆಗೌಡರ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ದುಃಖತಪ್ತ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಆ ಬಳಿಕ ಮಾಧ್ಯಮಗಳ ಜತೆ ಮಾತನಾಡಿದರು. ರಸ್ತೆ ತುಂಬಾ ಚೆನ್ನಾಗಿದೆ ಎಂದು ಪೋಟೋ ಹಾಕಿಸಿಕೊಂಡಿರುವ ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಹರಿಹಾಯ್ದರು.
ಸೋಮವಾರ ಪ್ರತಾಪ ಸಿಂಹ ಅವರೇ ಸಂಗ ಬಸಪ್ಪನ ದೊಡ್ಡಿ ಹೈವೇಗೆ ಬಂದಿದ್ದರೆ ಸ್ವತಃ ಸ್ವಿಮ್ ಮಾಡಬಹುದಿತ್ತು. ಚೆನ್ನಾಗಿ ನೀರು ನಿಂತಿತ್ತು. ವಾಹನಗಳು ಸಂಚಾರ ಮಾಡಲಿಕ್ಕೆ ರಸ್ತೆ ಮಾಡಿ ಅಂದರೆ ಹೆದ್ದಾರಿಯಲ್ಲಿ ಸ್ವಿಮ್ಮಿಂಗ್ ಪೂಲ್ ನಿರ್ಮಾಣ ಮಾಡಿದ್ದಾರೆ. ಅವರಿಗೆ ಕಣ್ಣಿದ್ದರೆ ಬಂದು ನೋಡಲಿ ಎಂದು ಕಿಡಿಕಾರಿದರು.

''ಉತ್ತಮವಾದ ಕೆಲಸ ಏನಾಗಿದೆ ಎಂಬುದನ್ನು ಪ್ರತಾಪಸಿಂಹ ಬಂದು ನೋಡಲಿ. ಅವರೇ ನಿಂತು ಫೋಟೊ ತೆಗೆಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹಾಕಿಸಿಕೊಂಡಿದ್ದರಲ್ಲ, ಅವರೇ ರಸ್ತೆ ನಿರ್ಮಾಣ ಮಾಡಿರುವ ರೀತಿ ಫೋಟೊ ತೆಗೆಸಿಕೊಂಡಿದ್ದರು. ಬಿಡದಿ ಬಳಿ ಬಂದು ಅಧಿಕಾರಿಗಳ ಸಭೆ ಮಾಡಿದ್ದರು. ಇಲ್ಲಿಯೇ ಬಂದು ಮಧ್ಯಸ್ಥಿಕೆ ವಹಿಸಿದ್ದರಲ್ಲ, ಈಗ ಬಂದು ನೋಡಲಿ, ಸಂಗಬಸಪ್ಪನದೊಡ್ಡಿ ಬಳಿ ಬಂದು ಸ್ವಿಮ್ಮಿಂಗ್ ಮಾಡಬಹುದು'' ಎಂದು ಮಾಜಿ ಮುಖ್ಯಮಂತ್ರಿಗಳು ಹರಿಹಾಯ್ದರು.
ನಿನ್ನೆ ಅವರೇ ಅವರೇ ಸಂಗಬಸಪ್ಪನದೊಡ್ಡಿ ಹೈವೆಗೆ ಬಂದಿದ್ದರೆ ಸ್ವತಃ ಸ್ವಿಮ್ ಮಾಡಬಹುದಿತ್ತು. ಚೆನ್ನಾಗಿ ನೀರು ನಿಂತಿತ್ತು. ವಾಹನಗಳು ಸಂಚಾರ ಮಾಡಲಿಕ್ಕೆ ರಸ್ತೆ ಮಾಡಿ ಅಂದರೆ ಹೆದ್ದಾರಿಯಲ್ಲಿ ಸ್ವಿಮ್ಮಿಂಗ್ ಪೂಲ್ ನಿರ್ಮಾಣ ಮಾಡಿದ್ದಾರೆ. ಅವರಿಗೆ ಕಣ್ಣಿದ್ದರೆ ಬಂದು ನೋಡಲಿ ಎಂದು ಕಿಡಿಕಾರಿದರು.
ಕೆರೆ ಒಡೆದಿದ್ದರಿಂದ ಈ ರೀತಿ ಪ್ರವಾಹ ಆಗಿದೆ ಎಂದು ಅವರು ಹೇಳಿದ್ದಾರೆ. ಒಬ್ಬ ಜವಾಬ್ದಾರಿಯುತ ವ್ಯಕ್ತಿ ಹೀಗೆ ಮಾತನಾಡುವುದಲ್ಲ. ಶಾಶ್ವತವಾದ ಕೆಲಸ ಆಗಬೇಕು. ಸರ್ಟಿಫಿಕೇಟ್ ಕೊಡೋದಕ್ಕಲ್ಲ ಇವರು ಇರುವುದು. ಕಾಮಗಾರಿ ತಪ್ಪಾಗಿದ್ದರೆ ಸರಿಪಡಿಸಬೇಕು. ಪ್ರತಾಪ್ ಸಿಂಹ ಬರೀ ಪ್ರಚಾರ ತೆಗೆದುಕೊಳ್ಳೋದು ನಿಲ್ಲಿಸಲಿ. ಮೊದಲು ಜನರ ಕೆಲಸ ಮಾಡಲಿ ಎಂದು ಅವರು ಟಾಂಗ್ ಕೊಟ್ಟರು.

ಮೃತನ ಮನೆಗೆ ಭೇಟಿ: ಚಲಿಸುತ್ತಿದ್ದ ಕಾರಿನ ಮೇಲೆ ಆಲದ ಮರ ಉರುಳಿಬಿದ್ದು ದುರ್ಮರಣಕ್ಕೀಡಾದ ಬಿಡದಿಯ ಇಟ್ಟಮಡು ನಿವಾಸಿ ಬೋರೆಗೌಡರ ನಿವಾಸಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ದುಃಖತಪ್ತ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಸಂತ್ರಸ್ತ ಕುಟುಂಬಕ್ಕೆ ಐದು ಲಕ್ಷ ರೂ. ನೆರವಿನ ಚೆಕ್ ನೀಡಿದರು. ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ ಎಂದು ಮನೆಯವರಿಗೆ ಧೈರ್ಯ ತುಂಬಿದ ಅವರು, ನಿನ್ನೆಯ ದಿನ ಅವಘಡದಲ್ಲಿ ಬೋರೆಗೌಡರು ನಿಧನ ಹೊಂದಿದ್ದರು. ಅವರದ್ದು ಕಷ್ಟಪಟ್ಟು ಜೀವನ ಮಾಡುತ್ತಿರುವ ಕುಟುಂಬ. ಸರಕಾರದ ವತಿಯಿಂದ 5 ಲಕ್ಷ ರೂ. ಪರಿಹಾರ ನೀಡಲಾಗಿದೆ. ನಮ್ಮ ಒಡನಾಟದಲ್ಲಿ ಬೋರೇಗೌಡರು ಇದ್ದರು. ನಮ್ಮ ಜತೆಗೂಡಿ ಕೆಲಸ ಮಾಡುತ್ತಿದ್ದರು. ಅವರ ನಿಧನ ಅತ್ಯಂತ ನೋವಿನ ಸಂಗತಿ ಎಂದು ಹೇಳಿದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications