ರಮೇಶ್ ಕುಮಾರ್ ವಿರುದ್ದ ಅಕ್ಷರಶಃ ಬೆಂಕಿ ಉಗುಳಿದ ಕುಮಾರಸ್ವಾಮಿ
ಬೆಂಗಳೂರು, ಆಗಸ್ಟ್ 6: ಕೋಲಾರ ಜಿಲ್ಲೆಯ ಯರಗೊಳ್ ಯೋಜನೆಯ ಬಗ್ಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಅಶ್ಲೀಲ ಹೇಳಿಕೆ ನೀಡುವುದರ ಜತೆ ತಮ್ಮ ಬಗ್ಗೆ ಅಸಂಬದ್ಧವಾಗಿ ನಾಲಿಗೆ ಜಾರಿರುವ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಎಚ್ಡಿಕೆ, "ಮಾಜಿ ಸ್ಪೀಕರ್ ಅವರನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ. ವಿಕೃತ, ಕೊಳಕು ಮನಃಸ್ಥಿತಿಯ ಮಾಜಿ ಸ್ಪೀಕರ್ ರಮೇಶ್ ಕುಮಾರ್, ನಾಲಿಗೆ ಮತ್ತು ಮಿದುಳಿನ ನಡುವಿನ ಸಂಪರ್ಕ ಕಳೆದುಕೊಂಡು ಅಸಹಜವಾಗಿ ವರ್ತಿಸುತ್ತಿದ್ದಾರೆ. ಅವರ ವಿಕಾರಗಳಿಗೆ ಕೊನೆಯೇ ಇಲ್ಲದಾಗಿದೆ. ಯರಗೊಳ್ ಯೋಜನೆಗೆ ಅನುಮತಿ ನೀಡಿದ್ದೇ ನಾನು. ಮಾಡಿದ್ದನ್ನೇ ನಾನು ಹೇಳಿದ್ದೇನೆ. ಬೇಕಾದರೆ ರಮೇಶ್ ಕುಮಾರ್ ಅವರು ದಾಖಲೆಗಳನ್ನು ನೋಡಿಕೊಳ್ಳಲಿ"ಎಂದು ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.
"ಕೆಆರ್ಎಸ್, ಎತ್ತಿನಹೊಳೆ, ಕೆಸಿ ವ್ಯಾಲಿ, ಹೆಚ್ಎಎಲ್, ಹೆಚ್ ಎಂಟಿಗಳನ್ನು ನಾನೇ ಮಾಡಿದ್ದು ಎಂದು ಎಲ್ಲಾದರೂ ಹೇಳಿದ್ದೇನೆಯೇ? ಹೇಳಿದ್ದರೆ ಅವರು ಹೇಳಲಿ. ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ. ಬಾಲಂಗೋಚಿ ಆಗದಿದ್ದರೆ ರಾಜಕೀಯ ಉಳಿಗಾಲವಿಲ್ಲ. ಪರಾವಾಲಂಬಿ ರಾಜಕಾರಣದ ಕೇರ್ ಆಫ್ ಅಡ್ರೆಸ್ ಆಗಿರುವ ನೀವು ಯಾರ ಕೃಪೆಯಲ್ಲಿದ್ದಿರಿ ಎನ್ನುವುದನ್ನು ಬಿಡಿಸಿ ಹೇಳಬೇಕೆ"ಎಂದು ಕುಮಾರಸ್ವಾಮಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

"ಕೋಲಾರ ಜಿಲ್ಲೆಗೆ ನೀವು ಮಾಡಿದ ಘೋರ ಅನ್ಯಾಯ, ಎಸಗಿದ ಪಾಪ ಕಣ್ಮುಂದೆಯೇ ಇದೆ. ಎತ್ತಿನಹೊಳೆ ಹರಿಸುತ್ತೇನೆ ಎಂದು ನಂಬಿಸಿ ಕೆರೆಗಳ ತುಂಬಾ ವಿಷವನ್ನು ತುಂಬಿಸಿದ ಧೂರ್ತ ಕೃತ್ಯಕ್ಕೆ ಕಾರಣರು ಯಾರು? ಕೆಸಿ ವ್ಯಾಲಿ ಎತ್ತುವಳಿ ಲೆಕ್ಕ ತೆಗೆದರೆ ಮುಖ ಎಲ್ಲಿ ಇಟ್ಟುಕೊಳ್ಳುತ್ತೀರಿ ಸ್ವಯಂ ಘೋಷಿತ ಸಂವಿಧಾನ ತಜ್ಞರೇ" ಎಂದು ರಮೇಶ್ ಕುಮಾರ್ʼಗೆ ಕುಮಾರಸ್ವಾಮಿ ಚಾಟಿ ಬೀಸಿದ್ದಾರೆ.
"3 ವರ್ಷಗಳಲ್ಲಿ ನೀರು ಹರಿಸುತ್ತೇವೆ ಎಂದು ಬೂಸಿಬಿಟ್ಟು, ಜನಕ್ಕೆ ಮಂಕುಬೂದಿ ಎರಚಿ ಎತ್ತಿನಹೊಳೆ ಹೆಸರಿನಲ್ಲಿ ನಡೆಸಿದ ಎತ್ತುವಳಿಕಾಂಡವನ್ನು ಬಿಚ್ಚಿಡಬೇಕೆ? ಗುತ್ತಿಗೆದಾರರ ಹಿಂದೆ ಸುತ್ತಿದ ಬೇತಾಳ ಕಥೆಯನ್ನು ಹೇಳಬೇಕೆ? ಇದೆಲ್ಲವನ್ನು ಅಧ್ಯಾಯಗಳಂತೆ ಆರಂಭಿಸಬೇಕೆ? ಬೆಳಗಾವಿ ಅಧಿವೇಶನದಲ್ಲಿ ಲಜ್ಜೆಗೆಟ್ಟು ಆಡಿದ ಮಾತಿಗೆ ಸ್ವಪಕ್ಷದ ಶಾಸಕಿಯರಿಂದಲೇ ಛೀಮಾರಿ ಹಾಕಿಸಿಕೊಂಡ ಸ್ವಯಂ ಘೋಷಿತ ಸಂವಿಧಾನ ಪಂಡಿತರೇ, ಅಧಿವೇಶನದಲ್ಲಿ ಅದ ಗರ್ವಭಂಗವನ್ನು ಮರೆತಿರಾ"ಎಂದು ಕುಮಾರಸ್ವಾಮಿ ಕೆಂಡಕಾರಿದ್ದಾರೆ.

ಗಾಂಧಿಗಳ ಹೆಸರೇಳಿಕೊಂಡು ತಲೆಮಾರುಗಳಿಗೆ ಆಗುವಷ್ಟು ಮಾಡಿಕೊಂಡಿದ್ದನ್ನು ನೀವೇ ಒಪ್ಪಿಕೊಂಡಿದ್ದೀರಿ. ಇದಕ್ಕೆ ನಿಮ್ಮ ಕೃಪಾಪೋಷಿತ ಸಿದ್ಧಸೂತ್ರಧಾರರೇ ಸಾಕ್ಷಿ. ಹೀಗೆ ಮಾಡಿಕೊಂಡಿದ್ದರಲ್ಲಿ ಎತ್ತಿನಹೊಳೆ, ಕೆಸಿ ವ್ಯಾಲಿ ಎತ್ತುವಳಿಯೂ ಸೇರಿದೆಯಾ?ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ ಎನ್ನುವುದನ್ನು ದಾಸಶ್ರೇಷ್ಠ ಶ್ರೀ ಪುರಂದರದಾಸರು ನಿಮ್ಮಂತಹ ವಿಕಾರಿಗಳನ್ನು ನೋಡಿಯೇ ಈ ಪದವನ್ನು ಬರೆದಿರಬಹುದು" ಎಂದು ಕುಮಾರಸ್ವಾಮಿಯವರು ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ದ ಬೆಂಕಿ ಉಗುಳಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications