ಜೆಡಿಎಸ್ ಎದುರು ನಡುಬಗ್ಗಿಸಿ ಬಂದ ಕಾಂಗ್ರೆಸ್ಸಿನ ಅತಿರಥ ಮಹಾರಥರು: ಎಚ್ಡಿಕೆ ವಾಗ್ದಾಳಿ

ಬೆಂಗಳೂರು, ಜುಲೈ 29: ಕಳೆದ ಕೆಲವು ದಿನಗಳಿಂದ ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ದ ಕಿಡಿಕಾರುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮತ್ತೆ, "ಕಾಂಗ್ರೆಸ್ಸಿನ ಅತಿರಥ ಮಹಾರಥರು ಪಕ್ಷದ ಟ್ವಿಟರ್ ಖಾತೆ ಮೂಲಕ ದಾಳಿ ಮಾಡಿ ಓಡಿ ಹೋಗಿದ್ದಾರೆ"ಎಂದು ವ್ಯಂಗ್ಯವಾಡಿದ್ದಾರೆ.

Recommended Video

      DK Shivakumar ಇಂದು ಮಂಗಳಮುಖಿಯರ ಕಷ್ಟಕ್ಕೆ ಕಿವಿ ಕೊಟ್ಟರು | Oneindia Kannada

      ಎಚ್ಡಿಕೆ ಮಾಡಿದ ಟ್ವೀಟಿನ ಯಥಾವತ್ ಕಾಪಿ ಹೀಗಿದೆ: "ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು CM ಆದಾಗ ಕಾಂಗ್ರೆಸ್ ನೈತಿಕತೆ ಚೆನ್ನಾಗಿತ್ತೆ ಎಂದು @INCKarnataka ಟ್ವೀಟ್ ಮಾಡಿದೆ. ನನ್ನನ್ನು ನೇರವಾಗಿ ಪ್ರಶ್ನಿಸಲಾಗದ ಕಾಂಗ್ರೆಸ್ಸಿನ ಅತಿರಥ ಮಹಾರಥರು ಪಕ್ಷದ ಟ್ವಿಟರ್ ಖಾತೆ ಮೂಲಕ ದಾಳಿ ಮಾಡಿ ಓಡಿ ಹೋಗಿದ್ದಾರೆ. ಆಯ್ತು, ಚರ್ಚೆ ಆರಂಭವಾಗಿದೆ. ಅದನ್ನು ನಾನು ಪೂರ್ತಿಗೊಳಿಸುತ್ತೇನೆ".

      "ಕಾಂಗ್ರೆಸ್ ಹೈಕಮಾಂಡ್ ಮತ್ತು ರಾಜ್ಯದ ನಾಯಕರು ಜೆಡಿಎಸ್ ಎದುರು ನಡು ಬಗ್ಗಿಸಿ ನಾವು ಬೇಡವೆಂದರೂ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂರಿಸಿದಿರಿ. ಆನಂತರ ಒತ್ತಡಗಳನ್ನು ಹೇರಿ ಬ್ಯಾಕ್ ಸೀಟ್ ಡ್ರೈವಿಂಗ್ ಮಾಡಿದಾಗ ಕಾಂಗ್ರೆಸ್ಸಿನ ನೈತಿಕತೆ ಎಲ್ಲಿತ್ತು?".

      "ರೈತರ ಸಾಲ ಮನ್ನಾ ಮಾಡಿ ರಾಜಧರ್ಮ ಪಾಲಿಸಬೇಕಿತ್ತು. ನಿಮ್ಮೆಲ್ಲಾ ಆಟಗಳು ಗೊತ್ತಿದ್ದು ಕೂಡ ರಾಜ್ಯದ ಜನತೆಯ ಹಿತಕ್ಕಾಗಿ ನಾನು ಕೂಡ ಚಾಣಕ್ಯ ನೀತಿಯನ್ನು ಪ್ರದರ್ಶಿಸಿ ರೈತರ ಹಿತ ರಕ್ಷಿಸಿದೆ. ಇದರಲ್ಲಿ ನನ್ನ ವೈಯಕ್ತಿಕ ಲಾಭವೇನಿಲ್ಲ".

      ಬೇಡವೆಂದರೂ ನಮ್ಮ ಮನೆ ಬಾಗಿಲಿಗೆ ಬಂದವರು ನೀವು

      ಬೇಡವೆಂದರೂ ನಮ್ಮ ಮನೆ ಬಾಗಿಲಿಗೆ ಬಂದವರು ನೀವು

      "ಬೇಡವೆಂದರೂ ನಮ್ಮ ಮನೆ ಬಾಗಿಲಿಗೆ ಬಂದವರು ನೀವು. ನಾನು ಅಮಾಯಕನಾಗಿರಲಿಲ್ಲ. ಕಾಂಗ್ರೆಸ್ಸಿನವರು ತಮ್ಮ ಬೇಳೆ ಬೇಯಿಸಿಕೊಳ್ಳಲು ನನ್ನನ್ನು ಪೆದ್ದು ಮಾಡಲು ಮುಂದಾದಿರಿ. ಆದರೆ ನಾಡಿನ ರೈತರ ಹಿತ ಕಾಯಲು ನಾನು ಜಾಣತನ ಪ್ರದರ್ಶಿಸಿದೆ ಎಂಬುದು ನೆನಪಿರಲಿ".

      ಖರ್ಗೆ ಸಿಎಂ ಆಗುವುದನ್ನು ಕಾಂಗ್ರೆಸ್ ಒಳಗಿನ ನಾಯಕರೇ ತಡೆದರು

      ಖರ್ಗೆ ಸಿಎಂ ಆಗುವುದನ್ನು ಕಾಂಗ್ರೆಸ್ ಒಳಗಿನ ನಾಯಕರೇ ತಡೆದರು

      "ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಾಗ ಕಾಂಗ್ರೆಸ್ಸಿನ ರಾಷ್ಟ್ರ, ರಾಜ್ಯ ನಾಯಕರು ಇದ್ದ ಸಭೆಯಲ್ಲಿ ದೇವೇಗೌಡರು ಕಾಂಗ್ರೆಸ್ಸಿಗೆ ಸಲಹೆ ನೀಡಿ @kharge CM ಆಗಲಿ ಎಂದರು. ಖರ್ಗೆ ಸಿಎಂ ಆಗುವುದನ್ನು ಕಾಂಗ್ರೆಸ್ ಒಳಗಿನ ನಾಯಕರೇ ತಡೆದರು"‌.

      ದೇಶದ ಎಷ್ಟು ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರಸ್ತುತವಾಗಿದೆ?

      ದೇಶದ ಎಷ್ಟು ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರಸ್ತುತವಾಗಿದೆ?

      "ಆ ನಾಯಕರುಗಳು ಯಾರ್ಯಾರೆಂದು ಕಾಂಗ್ರೆಸ್ ಹುಡುಕಿಕೊಳ್ಳಲಿ. ಆಗ ಅವರ ನೈತಿಕತೆ ಪ್ರಶ್ನೆಗೆ ಅವರದೇ ನಾಯಕರಿಂದ ಉತ್ತರ ಸಿಗಬಹುದು. ಕುಮಾರಸ್ವಾಮಿ ಅಜ್ಞಾತ, ಅಪ್ರಸ್ತುತರಾಗಿದ್ದಾರೆ ಎಂದೂ ಕಾಂಗ್ರೆಸ್ಸಿನ ನಾಯಕರು ಪಕ್ಷದ ಟ್ವಿಟರ್ ಮೂಲಕ ದಾಳಿ ಮಾಡಿದ್ದಾರೆ. ದೇಶದ ಎಷ್ಟು ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರಸ್ತುತವಾಗಿದೆ? ಪ್ರತ್ಯಕ್ಷವಾಗಿ ರಾಜಕಾರಣ ಮಾಡುತ್ತಿದೆ? ಅನಾಥವಾಗಿದೆ? ಇದಕ್ಕೆ ಉತ್ತರಿಸಲು ನಾಯಕರ್ಯಾರಾದರೂ ಇದ್ದಾರೋ? ಇಲ್ಲ ಕಾಂಗ್ರೆಸ್ಸಿನ ಟ್ವಿಟರ್ ಖಾತೆಗೆ ಸೀಮಿತವೋ?

      ಬಿಜೆಪಿ ಅವರ ಆಪರೇಷನ್ ಅಸ್ತ್ರ

      ಬಿಜೆಪಿ ಅವರ ಆಪರೇಷನ್ ಅಸ್ತ್ರ

      "ಬೇರೆ ಪಕ್ಷದ ಶಾಸಕರಿಗೆ ಸ್ವಯಂ ಸೇರ್ಪಡೆಯ 'ಮಾರುವೇಶ' ಹಾಕಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವುದಕ್ಕೂ ಬಿಜೆಪಿ ಅವರು ಆಪರೇಷನ್ ಅಸ್ತ್ರ ಬಳಸಿ ಸರ್ಕಾರವೊಂದನ್ನು ಬುಡಮೇಲು ಮಾಡುವುದಕ್ಕೂ ಅಂತಹ ವ್ಯತ್ಯಾಸವೇನಿಲ್ಲ. ಒಂದು ತೆಳುಗೆರೆಯಷ್ಟೇ ಅಂತರ".

      ಕಾಂಗ್ರೆಸ್ ಇದರ ಅರ್ಥ ತಿಳಿಯದಷ್ಟು ಕುಬ್ಜ ಸ್ಥಿತಿ ತಲುಪಿರುವುದು ಚೋದ್ಯ

      ಕಾಂಗ್ರೆಸ್ ಇದರ ಅರ್ಥ ತಿಳಿಯದಷ್ಟು ಕುಬ್ಜ ಸ್ಥಿತಿ ತಲುಪಿರುವುದು ಚೋದ್ಯ

      "ಕಾಂಗ್ರೆಸ್ ಇದರ ಅರ್ಥ ತಿಳಿಯದಷ್ಟು ಕುಬ್ಜ ಸ್ಥಿತಿ ತಲುಪಿರುವುದು ಚೋದ್ಯವೆನಿಸಿದೆ. ಟೀಕೆಗಾಗಿ ಟೀಕೆ ಮಾಡುವ ಇಂತಹ ಮನಸ್ಥಿತಿಯಿಂದಾಗಿಯೇ ಕಾಂಗ್ರೆಸ್ ಇಂದು ಇಂತಹ ದುಃಸ್ಥಿತಿಗೆ ತಲುಪಿದೆ. ಕಪಟ ರಾಜಕಾರಣವನ್ನು ಯಾವ ಬಾಗಿಲಿನಿಂದ ಮಾಡಿದರೂ ಅದು ಅನೀತಿಯೇ ಆಗಿದೆ. ತನ್ನರಿದೆ ಅರಿವೆಂತುಂಟೊ? ತನ್ನ ಮರೆದ ಮರೆಹೆಂತಂಟೊ? ಅರೆದು ಮರೆದವರು ನಿಮ್ಮ ಪ್ರತಿಬಿಂಬದಂತಿಪ್ಪರು ಕಾಣಾ, ಗುಹೇಶ್ವರಾ"

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+