Get Updates
Get notified of breaking news, exclusive insights, and must-see stories!

ಲಸಿಕೆ ಅಭಾವದ ಹಿಂದೆ ಕಾಂಗ್ರೆಸ್ ನಾಯಕರ 'ಕೈವಾಡ' ವಿವರಿಸಿದ ಎಚ್ಡಿಕೆ

ಬೆಂಗಳೂರು, ಮೇ 18: ದೇಶದಲ್ಲೆಲ್ಲೂ ಲಸಿಕೆ ಅಭಾವದ ಹಿಂದೆ ಕಾಂಗ್ರೆಸ್ ನಾಯಕರ ಸಣ್ಣತನದ ರಾಜಕಾರಣವೂ ಪ್ರಮುಖ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಕುಮಾರಸ್ವಾಮಿ, "ನೂರು ಕೋಟಿ ಲಸಿಕೆಕಾಗಿ ದುಡ್ಡು ಕೊಡುತ್ತೇನೆ ಎಂದು ಹೇಳುವ ಕಾಂಗ್ರೆಸ್ ನಾಯಕರು, ಮನೆಯಿಂದ ದುಡ್ಡು ತಂದು ಕೊಡುವುದಿಲ್ಲ. ಇವರಿಗೆ ಸರಕಾರದಿಂದ ಸಿಗುತ್ತಿರುವ ಫಂಡ್ ನಿಂದ ಕೊಡಲು ಮುಂದಾಗಿದ್ದಾರೆ"ಎಂದು ಲೇವಡಿ ಮಾಡಿದರು.

"ಇದೇ ಕಾಂಗ್ರೆಸ್ಸಿನ ನಾಯಕರು ಲಸಿಕೆ ಕಂಡು ಹಿಡಿದಂತಹ ಸಂದರ್ಭದಲ್ಲಿ ಮತ್ತು ಕೇಂದ್ರ ಸರಕಾರ ಅಂತಿಮ ತೀರ್ಮಾನ ತೆಗೆದುಕೊಳ್ಳಲು ಹೋದಾಗ, ಇದು ವ್ಯಾಕ್ಸಿನ್ ಅಲ್ಲ, ಡ್ರಾಮಾ ಮಾಡುತ್ತಿದ್ದಾರೆಂದು, ಕಾಂಗ್ರೆಸ್ ನಾಯಕರು ದೂರಿದ್ದರು"ಎಂದು ಕುಮಾರಸ್ವಾಮಿ ಕಿಡಿಕಾರಿದರು.

HD Kumaraswamy slams Congress leaders for vaccine shortage in india

"ಈಗ ಕಂಡು ಹಿಡಿದಂತಹ ಲಸಿಕೆ ಡಿಸ್ಟಿಲ್ಲರಿ ವಾಟರಿಗೆ ಸಮ. ಇದನ್ನು ಯಾರೂ ತೆಗೆದುಕೊಳ್ಳಬೇಡಿ ಎಂದು ಅಪಪ್ರಚಾರ ಮಾಡಿದರು. ಇದೇ ಕಾಂಗ್ರೆಸ್ ನಾಯಕರು ಮೊನ್ನೆ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ"ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು.

"ಆರಂಭದಲ್ಲಿ ವ್ಯಾಕ್ಸಿನ್ ತೆಗೆದುಕೊಳ್ಳಬೇಡಿ, ಮೋದಿ ನಿದ್ದೆ ಮಾಡುತ್ತಿದ್ದಾರೆಂದು ಪ್ರಚಾರ ಮಾಡಿದವರು ನೀವು. ನಿಮ್ಮ ಅಪಪ್ರಚಾರದಿಂದ ಅಂದು ಉತ್ಪಾದನೆಯಾಗಿದ್ದ ಲಸಿಕೆಯನ್ನು ಪಡೆಯಲು ಯಾರೂ ಮುಂದಾಗಲಿಲ್ಲ"ಎಂದು ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡರು.

"ಅಂದು ಪ್ರೊಡಕ್ಷನ್ ಆಗಿದ್ದ ಲಸಿಕೆ ವೇಸ್ಟ್ ಆಗಬಾರದು ಎನ್ನುವ ಕಾರಣಕ್ಕಾಗಿ ಕೇಂದ್ರ ಸರಕಾರ ವಿದೇಶಕ್ಕೆ ಕಳುಹಿಸುವ ತೀರ್ಮಾನಕ್ಕೆ ಬಂತು. ಕಾಂಗ್ರೆಸ್ ನಾಯಕರ ಅಂದಿನ ಸಣ್ಣತನದ ರಾಜಕಾರಣದ ಎಫೆಕ್ಟ್ ಈಗಿನ ಲಸಿಕೆ ಅಭಾವಕ್ಕೆ ಕಾರಣ. ಹಾಗಾಗಿ ಲಸಿಕೆ ಹಾಹಾಕಾರಕ್ಕೆ ಕಾಂಗ್ರೆಸ್ಸಿನ ಮೂಲವೂ ಇದೆ"ಎಂದು ಎಚ್.ಡಿ.ಕುಮಾರಸ್ವಾಮಿ ವ್ಯಾಖ್ಯಾನಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+