ಲಸಿಕೆ ಅಭಾವದ ಹಿಂದೆ ಕಾಂಗ್ರೆಸ್ ನಾಯಕರ 'ಕೈವಾಡ' ವಿವರಿಸಿದ ಎಚ್ಡಿಕೆ
ಬೆಂಗಳೂರು, ಮೇ 18: ದೇಶದಲ್ಲೆಲ್ಲೂ ಲಸಿಕೆ ಅಭಾವದ ಹಿಂದೆ ಕಾಂಗ್ರೆಸ್ ನಾಯಕರ ಸಣ್ಣತನದ ರಾಜಕಾರಣವೂ ಪ್ರಮುಖ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಕುಮಾರಸ್ವಾಮಿ, "ನೂರು ಕೋಟಿ ಲಸಿಕೆಕಾಗಿ ದುಡ್ಡು ಕೊಡುತ್ತೇನೆ ಎಂದು ಹೇಳುವ ಕಾಂಗ್ರೆಸ್ ನಾಯಕರು, ಮನೆಯಿಂದ ದುಡ್ಡು ತಂದು ಕೊಡುವುದಿಲ್ಲ. ಇವರಿಗೆ ಸರಕಾರದಿಂದ ಸಿಗುತ್ತಿರುವ ಫಂಡ್ ನಿಂದ ಕೊಡಲು ಮುಂದಾಗಿದ್ದಾರೆ"ಎಂದು ಲೇವಡಿ ಮಾಡಿದರು.
"ಇದೇ ಕಾಂಗ್ರೆಸ್ಸಿನ ನಾಯಕರು ಲಸಿಕೆ ಕಂಡು ಹಿಡಿದಂತಹ ಸಂದರ್ಭದಲ್ಲಿ ಮತ್ತು ಕೇಂದ್ರ ಸರಕಾರ ಅಂತಿಮ ತೀರ್ಮಾನ ತೆಗೆದುಕೊಳ್ಳಲು ಹೋದಾಗ, ಇದು ವ್ಯಾಕ್ಸಿನ್ ಅಲ್ಲ, ಡ್ರಾಮಾ ಮಾಡುತ್ತಿದ್ದಾರೆಂದು, ಕಾಂಗ್ರೆಸ್ ನಾಯಕರು ದೂರಿದ್ದರು"ಎಂದು ಕುಮಾರಸ್ವಾಮಿ ಕಿಡಿಕಾರಿದರು.

"ಈಗ ಕಂಡು ಹಿಡಿದಂತಹ ಲಸಿಕೆ ಡಿಸ್ಟಿಲ್ಲರಿ ವಾಟರಿಗೆ ಸಮ. ಇದನ್ನು ಯಾರೂ ತೆಗೆದುಕೊಳ್ಳಬೇಡಿ ಎಂದು ಅಪಪ್ರಚಾರ ಮಾಡಿದರು. ಇದೇ ಕಾಂಗ್ರೆಸ್ ನಾಯಕರು ಮೊನ್ನೆ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ"ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದರು.
"ಆರಂಭದಲ್ಲಿ ವ್ಯಾಕ್ಸಿನ್ ತೆಗೆದುಕೊಳ್ಳಬೇಡಿ, ಮೋದಿ ನಿದ್ದೆ ಮಾಡುತ್ತಿದ್ದಾರೆಂದು ಪ್ರಚಾರ ಮಾಡಿದವರು ನೀವು. ನಿಮ್ಮ ಅಪಪ್ರಚಾರದಿಂದ ಅಂದು ಉತ್ಪಾದನೆಯಾಗಿದ್ದ ಲಸಿಕೆಯನ್ನು ಪಡೆಯಲು ಯಾರೂ ಮುಂದಾಗಲಿಲ್ಲ"ಎಂದು ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡರು.
"ಅಂದು ಪ್ರೊಡಕ್ಷನ್ ಆಗಿದ್ದ ಲಸಿಕೆ ವೇಸ್ಟ್ ಆಗಬಾರದು ಎನ್ನುವ ಕಾರಣಕ್ಕಾಗಿ ಕೇಂದ್ರ ಸರಕಾರ ವಿದೇಶಕ್ಕೆ ಕಳುಹಿಸುವ ತೀರ್ಮಾನಕ್ಕೆ ಬಂತು. ಕಾಂಗ್ರೆಸ್ ನಾಯಕರ ಅಂದಿನ ಸಣ್ಣತನದ ರಾಜಕಾರಣದ ಎಫೆಕ್ಟ್ ಈಗಿನ ಲಸಿಕೆ ಅಭಾವಕ್ಕೆ ಕಾರಣ. ಹಾಗಾಗಿ ಲಸಿಕೆ ಹಾಹಾಕಾರಕ್ಕೆ ಕಾಂಗ್ರೆಸ್ಸಿನ ಮೂಲವೂ ಇದೆ"ಎಂದು ಎಚ್.ಡಿ.ಕುಮಾರಸ್ವಾಮಿ ವ್ಯಾಖ್ಯಾನಿಸಿದ್ದಾರೆ.
-
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ












Click it and Unblock the Notifications