ಹಾಗಾದರೆ, ಕೇಂದ್ರ ಮತ್ತು ರಾಜ್ಯ ಸರಕಾರ ರಾಜ್ಯದ ಜನತೆಯ ಮೂಗಿಗೆ ತುಪ್ಪ ಸವರಿತೇ?

ಬೆಂಗಳೂರು, ಜುಲೈ 20: ಮೇಕೆದಾಟು ಯೋಜನೆಯ ವಿಚಾರದಲ್ಲಿ ರಾಜ್ಯ ಸರಕಾರ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೀಡುತ್ತಿರುವ ಹೇಳಿಕೆ ಒಂದಕ್ಕೊಂದು ತಾಳೆಯಾಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಈ ಸಂಬಂಧ ಎಚ್ಡಿಕೆ ಸಾಲುಸಾಲು ಟ್ವೀಟ್ ಮಾಡಿದ್ದಾರೆ. "'ಮೇಕೆದಾಟು ಯೋಜನೆ ಆರಂಭವಾಗದು' ಎಂದು ಪ್ರಧಾನಿ, ಜಲಶಕ್ತಿ ಸಚಿವ ಭರವಸೆ ಕೊಟ್ಟಿರುವುದಾಗಿ ತಮಿಳುನಾಡು ಸಿಎಂ @mkstalin ಹೇಳಿದ್ದಾರೆ. ಹಾಗಿದ್ದರೆ, ಯೋಜನೆ ವಿಚಾರದಲ್ಲಿ ಕೇಂದ್ರವು ಕರ್ನಾಟಕಕ್ಕೆ ಅಭಯ ನೀಡಿದೆ ಎಂಬ ಸಿಎಂ, ಬಿಜೆಪಿ ನಾಯಕರ ಹೇಳಿಕೆಗಳು ಸುಳ್ಳೇ? ಕೇಂದ್ರ-ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಆಗುವ ಲಾಭ ಇದೇನಾ?" ಎಂದು ಎಚ್ಡಿಕೆ ಪ್ರಶ್ನಿಸಿದ್ದಾರೆ.

"ಮೇಕೆದಾಟು ವಿಚಾರದಲ್ಲಿ ರಾಜ್ಯ ಸರ್ಕಾರ ಬಿಜೆಪಿ ಹೈಕಮಾಂಡ್‌ ಹೇಳಿದಂತೆ ಕೇಳುತ್ತಿದೆ. ಬಿಜೆಪಿ ಯೋಜನೆಯ ವಿರುದ್ಧವಿದೆ. ಯೋಜನೆ ತಡೆಯಲು ತಮಿಳುನಾಡು ನಡೆಸುತ್ತಿರುವ ಸಾಂಘಿಕ ಹೋರಾಟದಂತೆ, ಯೋಜನೆ ಜಾರಿಗೆ ರಾಜ್ಯ ಸರ್ಕಾರ ಕಾರ್ಯತಂತ್ರ ರೂಪಿಸುತ್ತಿಲ್ಲ. ಆದರೆ, 'ಯೋಜನೆ ಜಾರಿ ಶತಸಿದ್ಧ' ಎನ್ನುವ ಮೂಲಕ ಕನ್ನಡಿಗರ ಮೂಗಿಗೆ ತುಪ್ಪ ಸವರುತ್ತಿದೆ" ಎಂದು ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

"ಮೇಕೆದಾಟಿನ ಡ್ಯಾಂನಿಂದ ತಮಿಳುನಾಡಿಗೆ ಯಾವ ನಷ್ಟವೂ ಇಲ್ಲ. ಆದರೂ ಡ್ಯಾಂ ನಿರ್ಮಾಣ ಆಗದಂತೆ ತಡೆಯಲು ಶತಪ್ರಯತ್ನ ಮಾಡುತ್ತಿದೆ. ಸರ್ವಪಕ್ಷ ಸಭೆ ಮಾಡಿ ಮುಂದಿನ ಕಾರ್ಯತಂತ್ರ ರೂಪಿಸಿದೆ, ಪ್ರಧಾನಿ, ಸಚಿವರ ಬಳಿಗೆ ಸರ್ವಪಕ್ಷ ನಿಯೋಗ ಕೊಂಡೊಯ್ದು ಒತ್ತಡ ಹಾಕಿದೆ. ಆದರೆ, ಯೋಜನೆಯಿಂದ ಅನುಕೂಲ ಪಡೆಯಲಿರುವ ರಾಜ್ಯ ಸರ್ಕಾರ ಈವರೆಗೆ ಏನೇನು ಮಾಡಿದೆ?"

ತಮಿಳುನಾಡು 6 ತಿಂಗಳ ಹಿಂದೆ ನದಿ ಜೋಡಣೆ ಆರಂಭಿಸಿತು

"ಹೆಚ್ಚುವರಿ ನೀರಿನ ಮೇಲೆ ಕಣ್ಣಿಟ್ಟು ತಮಿಳುನಾಡು 6 ತಿಂಗಳ ಹಿಂದೆ ನದಿ ಜೋಡಣೆ ಆರಂಭಿಸಿತು. ತಮಿಳುನಾಡಿನ ಈ ಯೋಜನೆ ವಿರುದ್ಧ ಕರ್ನಾಟಕ ಆಕ್ಷೇಪಣೆ ಸಲ್ಲಿಸಿದ್ದು ಮಾತ್ರ ನೆನ್ನೆ.ಈ ಹೆಚ್ಚುವರಿ ನೀರು ಈಗ ಡ್ಯಾಂ ನಿರ್ಮಾಣಕ್ಕೆ ತೊಡಕಾಗಿದೆ. ಇದರ ಆಧಾರದಲ್ಲಿ ರೂಪಿತವಾದ ನದಿ ಜೋಡಣೆ ಯೋಜನೆಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರ ವಿಳಂಬ ಮಾಡಿತ್ತು" ಕುಮಾರಸ್ವಾಮಿ ಟ್ವೀಟ್.

 ಮೇಕೆದಾಟಿನಲ್ಲಿ ಡ್ಯಾಂ ನಿರ್ಮಾಣ ಮಾಡುವುದೂ ಒಂದು ವ್ಯಾಜ್ಯವಾಗಿ ಉಳಿದು ಹೋಗಲಿದೆ

ಮೇಕೆದಾಟಿನಲ್ಲಿ ಡ್ಯಾಂ ನಿರ್ಮಾಣ ಮಾಡುವುದೂ ಒಂದು ವ್ಯಾಜ್ಯವಾಗಿ ಉಳಿದು ಹೋಗಲಿದೆ

"ಮೇಕೆದಾಟು ಯೋಜನೆ ವಿಚಾರದಲ್ಲಿ ಸರ್ಕಾರ ತನ್ನಿಷ್ಟದಂತೆ ನಡೆದುಕೊಳ್ಳುವುದನ್ನು ಬಿಟ್ಟು ಎಲ್ಲರ ಅಭಿಪ್ರಾಯ ಸಂಗ್ರಹಿಸಲಿ. ಕಗ್ಗಂಟಾಗುತ್ತಿರುವ ಈ ಯೋಜನೆಯನ್ನು ದಕ್ಕಿಸಿಕೊಳ್ಳಲು ಸಾಂಘಿಕವಾಗಿ ಹೋರಾಡಬೇಕು. ಇಲ್ಲವಾದರೆ ಕಾವೇರಿ ನೀರಿನ ವ್ಯಾಜ್ಯದಂತೇ, ಮೇಕೆದಾಟಿನಲ್ಲಿ ಡ್ಯಾಂ ನಿರ್ಮಾಣ ಮಾಡುವುದೂ ಒಂದು ವ್ಯಾಜ್ಯವಾಗಿ ಉಳಿದು ಹೋಗಲಿದೆ" ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

 ಅನುಮೋದನೆ ಸಿಕ್ಕ ಯೋಜನೆಗೆ ವಿವಿಧ ಇಲಾಖೆಗಳ ಅನುಮತಿ ಬೇಕು

ಅನುಮೋದನೆ ಸಿಕ್ಕ ಯೋಜನೆಗೆ ವಿವಿಧ ಇಲಾಖೆಗಳ ಅನುಮತಿ ಬೇಕು

"ರಾಜ್ಯದ ಜನರು ಗಮನಸಿಬೇಕಾಗದ ಒಂದು ಸಂಗತಿ ಇದೆ. ದಶಕಗಳಿಂದಲೂ ನನೆಗುದಿಗೆ ಬಿದ್ದಿದ್ದ ಯೋಜನೆಗೆ ಅನುಮೋದನೆ ಸಿಕ್ಕಿದ್ದು ಜೆಡಿಎಸ್‌ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ. ರಾಷ್ಟ್ರೀಯ ಪಕ್ಷಗಳು ಅಧಿಕಾರದಲ್ಲಿದ್ದಾಗ ಅಲ್ಲ. ಅನುಮೋದನೆ ಸಿಕ್ಕ ಯೋಜನೆಗೆ ವಿವಿಧ ಇಲಾಖೆಗಳ ಅನುಮತಿ ಬೇಕು. ರಾಷ್ಟ್ರೀಯ ಪಕ್ಷವಿದ್ದರೂ ಅನುಮತಿ ಸಿಗುತ್ತಿಲ್ಲ" ಕುಮಾರಸ್ವಾಮಿ ಟ್ವೀಟ್.

 ಬಿಜೆಪಿಗೆ ತಮಿಳುನಾಡಿನಲ್ಲಿ ತನ್ನ ನೆಲೆ ವಿಸ್ತರಿಸಿಕೊಳ್ಳುವ ತವಕ

ಬಿಜೆಪಿಗೆ ತಮಿಳುನಾಡಿನಲ್ಲಿ ತನ್ನ ನೆಲೆ ವಿಸ್ತರಿಸಿಕೊಳ್ಳುವ ತವಕ

"ಕರ್ನಾಟಕದಲ್ಲಿ ಈಗಾಗಲೇ ಅಧಿಕಾರದಲ್ಲಿರುವ ಬಿಜೆಪಿಗೆ ತಮಿಳುನಾಡಿನಲ್ಲಿ ತನ್ನ ನೆಲೆ ವಿಸ್ತರಿಸಿಕೊಳ್ಳುವ ತವಕ. ಹೀಗಾಗಿ ಬಿಜೆಪಿ ತಮಿಳುನಾಡಿನ ಹಿತಾಸಕ್ತಿ ಕಾಯುತ್ತಿದೆ. ಯೋಜನೆ ತಡೆಯುವ ಪ್ರಯತ್ನದ ವಿರುದ್ಧ ಹೋರಾಡಬೇಕಿದ್ದ ಕಾಂಗ್ರೆಸ್‌ ತಮಿಳುನಾಡು ಸರ್ಕಾರದ ಪಾಲುದಾರ ಪಕ್ಷ. ಹೀಗಾಗಿ ಜೆಡಿಎಸ್‌ ಒಂದೇ ಈಗ ಮೇಕೆದಾಟು ಯೋಜನೆಗೆ ಪರಿಹಾರ" ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+