ಸಿದ್ದರಾಮಯ್ಯನವರ ಕುತಂತ್ರ ನೆನಪಿಸುವ ಎಚ್ಚರಿಕೆ ನೀಡಿದ ಕುಮಾರಸ್ವಾಮಿ
ಬೆಂಗಳೂರು, ಫೆ 12: ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸದೇ ಇರುವ ತೀರ್ಮಾನಕ್ಕೆ ಬಂದಿರುವುದನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದರು. ಇದಕ್ಕೆ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ತಿರುಗೇಟು ನೀಡಿದ್ದಾರೆ.
ಉಪ ಚುನಾವಣೆಯಲ್ಲಿ ನಾವು ಯಾವುದೇ ಕ್ಷೇತ್ರಕ್ಕೂ ಅಭ್ಯರ್ಥಿಗಳನ್ನು ಹಾಕುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಅದನ್ನು ಉಲ್ಲೇಖಿಸಿದ ಮಾಜಿ ಪ್ರಧಾನಿ ದೇವೇಗೌಡರು, "ಚುನಾವಣೆಗೆ ನಮ್ಮ ಪಕ್ಷದ ಅಭ್ಯರ್ಥಿಗಳನ್ನ ಹಾಕುವುದಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಇದು ಸೂಕ್ತ ನಿರ್ಧಾರ" ಎಂದು ದೇವೇಗೌಡರು ಸ್ಪಷ್ಟಪಡಿಸಿದ್ದರು. ಇದನ್ನು ಸಿದ್ದರಾಮಯ್ಯ ಲೇವಡಿ ಮಾಡಿದ್ದರು. ಅದಕ್ಕೆ ಎಚ್ಡಿಕೆ ಟ್ವೀಟ್ ಮೂಲಕ ಕೊಟ್ಟ ತಿರುಗೇಟು ಹೀಗಿದೆ:
"ಸಿದ್ದರಾಮಯ್ಯನವರು ಸ್ವತಂತ್ರ ಪಕ್ಷ ಕಟ್ಟಿ, ತಾವೂ ಸೇರಿದಂತೆ 5 ಸ್ಥಾನಗಳನ್ನು ಗೆದ್ದು ತೋರಿಸಿ ಆಮೇಲೆ ಜೆಡಿಎಸ್ ಬಗ್ಗೆ, ಜೆಡಿಎಸ್ ನಾಯಕತ್ವದ ಬಗ್ಗೆ ಮಾತಾಡಬೇಕು ಎಂದು ಸವಾಲು ಹಾಕುತ್ತಲೇ ಬಂದಿದ್ದೇನೆ. ಸವಾಲು ಸ್ವೀಕರಿಸಲಾಗದ ಸಿದ್ದರಾಮಯ್ಯ, ಜೆಡಿಎಸ್ ಅನ್ನು ಟೀಕಿಸುವುದರಲ್ಲೇ ತಮ್ಮ ಶಕ್ತಿಯ ಪರೀಕ್ಷೆ ಮಾಡಿಕೊಳ್ಳುತ್ತಿರುವಂತಿದೆ"
"ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸುವುದಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ. ಆದರೆ, ಬೇರೆ ಪಕ್ಷಗಳಿಗೆ ಬೆಂಬಲ ನೀಡುತ್ತೇವೆ ಎಂದೇನಾದರೂ ಹೇಳಿದ್ದಾರಾ? ಉಪಚುನಾವಣೆಯಲ್ಲಿ ಬಿಜೆಪಿಗೆ ಸಹಾಯ ಮಾಡಿದ ಇತಿಹಾಸ ಇರುವುದು ಜೆಡಿಎಸ್ಸಿಗೆ ಅಲ್ಲ, ತಮಗೆ? 2008ರಲ್ಲಿ ನಡೆದ ಆಪರೇಷನ್ ಕಮಲದ ಉಪಚುನಾವಣೆಗಳಲ್ಲಿ ನೀವು ಮಾಡಿದ ಕುತಂತ್ರಗಳನ್ನು ನೆನಪಿಸಲೇ?"

ದೇವೇಗೌಡರು ಜಾತ್ಯತೀತ ನಿಲುವಿಗೆ ಕಟ್ಟುಬಿದ್ದು ಕಾಂಗ್ರೆಸ್ ಬೆಂಬಲಿಸಿದ್ದರು
ಜೆಡಿಎಸ್ ಕಣದಿಂದ ಹಿಂದೆ ಸರಿಯುವುದನ್ನು ಗೇಲಿ ಮಾಡುವ ಮುನ್ನ ಸಿದ್ದರಾಮಯ್ಯರಿಗೆ ಗುಂಡ್ಲುಪೇಟೆ, ನಂಜನಗೂಡು ನೆನಪಾಗಬೇಕಿತ್ತು? ಅಂದು ದೇವೇಗೌಡರು ಜಾತ್ಯತೀತ ನಿಲುವಿಗೆ ಕಟ್ಟುಬಿದ್ದು ಕಾಂಗ್ರೆಸ್ ಬೆಂಬಲಿಸಿದ್ದರು. ಆ ಕ್ಷೇತ್ರಗಳಲ್ಲಿ ಜೆಡಿಎಸ್ಸಿಗೆ ಸಾಕಷ್ಟು ಬಲವಿತ್ತು. ನಂಜನಗೂಡಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯೇ ಜೆಡಿಎಸ್ ನವರಾಗಿದ್ದರು.

ಸಿದ್ದರಾಮಯ್ಯ ಉಡಾಫೆ ಬಿಟ್ಟು ಪ್ರಬುದ್ಧರಾಗಿ ಮಾತಾಡಲಿ
ಉಪಚುನಾವಣೆಗಳು ಅಧಿಕಾರಸ್ಥರ, ದುಡ್ಡಿರುವವರ ಚುನಾವಣೆಗಳು. ಈ ಚುನಾವಣೆಗಳು ನಡೆಯುವ ರೀತಿಯೇ ಬೇರೆ. ಪ್ರತಿಷ್ಠೆಯ ಈ ಹೋರಾಟದಲ್ಲಿ ಸ್ಪರ್ಧಿಸದೇ ಇರುವ ಪಕ್ಷವೊಂದರ ನಿಲುವನ್ನು ಟೀಕಿಸುವ ಮುನ್ನ ಯಾರೇ ಆದರೂ ಯೋಚಿಸಬೇಕು. ಇಲ್ಲವಾದರೆ ಟೀಕೆಯೇ ಅವರಿಗೆ ಮುಳುವಾಗುತ್ತದೆ. ಸಿದ್ದರಾಮಯ್ಯ ಉಡಾಫೆ ಮಾತುಗಳನ್ನು ಬಿಟ್ಟು ಪ್ರಬುದ್ಧರಾಗಿ ಮಾತಾಡಲಿ.

ಜೆಡಿಎಸ್ ನ ಸಾಮರ್ಥ್ಯ ತೋರಿಸುವ ಕೆಲಸ ಮಾಡೋಣ
ಉತ್ತರ ಕರ್ನಾಟಕದಲ್ಲಿ ಜೆಡಿಎಸ್ಸಿಗೆ ಇರುವ ಶಕ್ತಿ ಮತ್ತು ಸಾಮರ್ಥ್ಯ ಪ್ರದರ್ಶನಕ್ಕೆ ಇನ್ನೂ ಸಮಯವಿದೆ. ವೇದಿಕೆಯೂ ಸಿಗಲಿದೆ. ಆಗ ಸಿದ್ದರಾಮಯ್ಯನವರು ನಮ್ಮ ಜೊತೆ ಚರ್ಚೆಗೆ, ಸೆಣಸಾಟಕ್ಕೆ ಬರಲಿ. ಒಂದುವೇಳೆ ಅವರೇ ಒಂದು ಪಕ್ಷವನ್ನೇನಾದರೂ ಕಟ್ಟಿದರೆ ಅದಕ್ಕೂ ಜೆಡಿಎಸ್ ನ ಸಾಮರ್ಥ್ಯ ತೋರಿಸುವ ಕೆಲಸ ಮಾಡೋಣವಂತೆ. ಅಲ್ಲಿಯವರೆಗೆ ಅವರು ತಾಳಲಿ.
Recommended Video

ಸಿದ್ದರಾಮಯ್ಯನವರಿಗೆ ಜೆಡಿಎಸ್ ಬಗ್ಗೆ ಮಾತಾಡುವ ನೈತಿಕತೆ ಇಲ್ಲ
ಜೆಡಿಎಸ್ ನಲ್ಲಿ ಇದ್ದುಕೊಂಡೇ ಪಕ್ಷ ವಿರೋಧಿ ಚಟುವಟಿಕೆ ನಡೆಸಿ, ಪಕ್ಷವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಸಿ, ಹೊರಬಿದ್ದ ಮೇಲೆ ಸಿದ್ದರಾಮಯ್ಯನವರಿಗೆ ಜೆಡಿಎಸ್ ಬಗ್ಗೆ ಮಾತಾಡುವ ನೈತಿಕತೆ ಇಲ್ಲ.
ಜೆಡಿಎಸ್ಸಿಗೆ ಶಕ್ತಿ ಎಲ್ಲಿದೆ ಎಂಬ ಅವರ ಹೇಳಿಕೆಗಳು, ಜೆಡಿಎಸ್ಸಿಗೆ ಅವರು ಬಗೆದ ದ್ರೋಹದ ಪ್ರತೀಕ. ನಮ್ಮ ಬಗ್ಗೆ ಮಾತಾಡುವ ಅಧಿಕಾರ ಅವರಿಗಿಲ್ಲ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications