ಮಾಜಿ ಮುಖ್ಯಮಂತ್ರಿ ಜೆ. ಎಚ್. ಪಟೇಲ್ ಪತ್ನಿ ವಿಧಿವಶ
ಬೆಂಗಳೂರು, ನವೆಂಬರ್ 10 : ಮಾಜಿ ಮುಖ್ಯಮಂತ್ರಿ ಜೆ. ಎಚ್. ಪಟೇಲ್ ಪತ್ನಿ ಸರ್ವಮಂಗಳ ಪಟೇಲ್ ನಿಧನ ವಿಧಿವಶರಾದರು. ಮೃತರ ಅಂತ್ಯಕ್ರಿಯೆ ದಾವಣಗೆರೆಯಲ್ಲಿ ಭಾನುವಾರ ಸಂಜೆ ನಡೆಯಲಿದೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸರ್ವಮಂಗಳ ಪಟೇಲ್ (84) ಬೆಂಗಳೂರಿನ 'ಪುಣ್ಯ' ನಿವಾಸದಲ್ಲಿ ಶನಿವಾರ ರಾತ್ರಿ ನಿಧನ ಹೊಂದಿದರು. ಮೂವರು ಗಂಡು ಮಕ್ಕಳು ಮತ್ತು ಅಪಾರ ಅಭಿಮಾನಿಗಳನ್ನು ಅವರು ಅಗಲಿದ್ದಾರೆ.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾರಿಗನೂರಿನಲ್ಲಿರುವ ಜೆ. ಎಚ್. ಪಟೇಲ್ ಸಮಾಧಿ ಪಕ್ಕದಲ್ಲಿಯೇ ಸರ್ವಮಂಗಳ ಪಟೇಲ್ ಅವರ ಅಂತ್ಯಕ್ರಿಯೆ ಭಾನುವಾರ ಸಂಜೆ ನಡೆಯಲಿದೆ.

ಜೆ. ಎಚ್. ಪಟೇಲ್ ರಾಜಕೀಯ ಜೀವನದಲ್ಲಿ ಮಹತ್ವದ ಪಾತ್ರವನ್ನು ಸರ್ವಮಂಗಳ ಪಟೇಲ್ ವಹಿಸಿದ್ದರು. ಅಸಿಸ್ಟೆಂಟ್ ಕಮೀಷನರ್ ಮಗಳಾಗಿದ್ದರೂ ಮನೆಗೆ ಬಂದ ಜನರೊಂದಿಗೆ ಗೌರವದಿಂದ ನಡೆದುಕೊಳ್ಳುತ್ತಿದ್ದರು.
ಸರ್ವಮಂಗಳ ಪಟೇಲ್ ನಿಧನಕ್ಕೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಸಂಸದೆ ಶೋಭಾ ಕರಂದ್ಲಾಜೆ ಮುಂತಾದವರು ಸಂತಾಪ ಸೂಚಿಸಿದ್ದಾರೆ. ಯಡಿಯೂರಪ್ಪ 'ಪುಣ್ಯ' ನಿವಾಸಕ್ಕೆ ಭೇಟಿ ನೀಡಿ ಮೃತರಿಗೆ ಅಂತಿಮ ನಮನ ಸಲ್ಲಿಸಿದರು.
ಮಾಜಿ ಮುಖ್ಯಮಂತ್ರಿ ಜೆ.ಎಚ್. ಪಟೇಲರ ಪತ್ನಿ ಶ್ರೀಮತಿ ಸರ್ವಮಂಗಳ ಪಟೇಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
— CM of Karnataka (@CMofKarnataka) November 9, 2019
ಸರಳತೆ, ಸಜ್ಜನಿಕೆಯ ಸಾಕಾರ ಮೂರ್ತಿ ಯಾಗಿದ್ದ ಸರ್ವಮಂಗಳ ಅವರು, ಪಟೇಲರ ಬದುಕಿನ ಎಲ್ಲ ಮಜಲುಗಳಲ್ಲಿ ಬೆಂಬಲವಾಗಿ ನಿಂತವರು.
ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ.
ಮಾಜಿ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರ ಪತ್ನಿ ಶ್ರೀಮತಿ ಸರ್ವಮಂಗಳ ಪಟೇಲ್ ಅವರ ನಿಧನದ ಸುದ್ದಿ ಆಘಾತವನ್ನುಂಟುಮಾಡಿದೆ. ಸರ್ವಮಂಗಳ ಅವರು ಪಟೇಲರ ರಾಜಕೀಯ ಜೀವನದ ಆಧಾರಸ್ಥಂಭವಾಗಿದ್ದರು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
-
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC












Click it and Unblock the Notifications