ಮಾಜಿ ಮುಖ್ಯಮಂತ್ರಿ ಎನ್.ಧರಂ ಸಿಂಗ್ ನಿಧನ
ಬೆಂಗಳೂರು, ಜುಲೈ 27: ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಎನ್.ಧರಂ ಸಿಂಗ್ ಗುರುವಾರ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ಎಂಬತ್ತು ವರ್ಷ ವಯಸ್ಸಾಗಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಮೂವರು ಮಕ್ಕಳಿದ್ದಾರೆ.
ತೀವೃ ಹೃದಯ ಸ್ತಂಭನದಿಂದ ಧರಂಸಿಂಗ್ ಮೃತಪಟ್ಟಿದ್ದಾರೆ. ಡಿಸೆಂಬರ್ 25, 1936ರಲ್ಲಿ ಗುಲ್ಬರ್ಗಾದ ಜೇವರ್ಗಿಯಲ್ಲಿ ಜನಿಸಿದ ಧರಂ ಸಿಂಗ್, ಕರ್ನಾಟಕದ ಹದಿನೇಳನೇ ಮುಖ್ಯಮಂತ್ರಿ ಆಗಿದ್ದರು. ಮೇ 28, 2004ರಿಂದ ಫೆಬ್ರವರಿ 3,2006ರವರೆಗೆ ಅವಧಿ ಮಧ್ಯೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕೂಟ ಸರಕಾರದಲ್ಲಿ ಮುಖ್ಯಮಂತ್ರಿ ಹುದ್ದೆ ನಿಭಾಯಿಸಿದ್ದರು.

ಬೆಂಗಳೂರಿನ ಆರ್ ಟಿ ನಗರದ ಮನೆಯಲ್ಲಿ ಗುರುವಾರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಇಡಲಾಗುತ್ತದೆ. ಆ ನಂತರ ಅಂದರೆ ಶುಕ್ರವಾರ ಜೇವರ್ಗಿಗೆ ತೆಗೆದುಕೊಂಡು ಹೋಗಿ ಅಲ್ಲೇ ಅಂತಿಮ ಸಂಸ್ಕಾರ ನಡೆಸಲಾಗುತ್ತದೆ ಎಂದು ಸಿಂಗ್ ಅವರ ಮಗ ಡಾ.ಅಜಯ್ ಸಿಂಗ್ ಮಾಹಿತಿ ನೀಡಿದ್ದಾರೆ.
ಸತತವಾಗಿ ಏಳು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದ ಧರಂ ಸಿಂಗ್, ಅಜಾತಶತ್ರು ಎಂದೇ ಹೆಸರಾಗಿದ್ದವರು. ಧರಂ ಸಿಂಗ್ ನಿಧನಕ್ಕೆ ವಿವಿಧ ಪಕ್ಷಗಳ ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications