ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಹುಲ್ ಗಾಂಧಿ ಭೇಟಿಯಾದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ

By Gururaj
|
Google Oneindia Kannada News

Recommended Video

ರಾಹುಲ್ ಗಾಂಧಿ ಹಾಗು ಸಿದ್ದರಾಮಯ್ಯ ಭೇಟಿ | Oneindia Kannada

ಬೆಂಗಳೂರು, ಜುಲೈ 23 : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದರು. ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸದಸ್ಯರಾಗಿ ನೇಮಕವಾದ ಬಳಿಕ ಮೊದಲ ಬಾರಿಗೆ ಸಿದ್ದರಾಮಯ್ಯ ರಾಹುಲ್ ಗಾಂಧಿ ಭೇಟಿಯಾಗಿದ್ದಾರೆ.

ಸೋಮವಾರ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಭೇಟಿಯಾದರು. ಕರ್ನಾಟಕದ ಕಾಂಗ್ರೆಸ್‌-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರು ಆಗಿರುವ ಸಿದ್ದರಾಮಯ್ಯ ರಾಜ್ಯದ ವಿದ್ಯಮಾನಗಳ ಕುರಿತು ಮಾಹಿತಿ ನೀಡಿದರು.

ಪಕ್ಷದ ಕಾರ್ಯಕರ್ತರಿಗೆ ಧೃತಿಗೆಡಬೇಡಿ ಎಂದ ಸಿದ್ದರಾಮಯ್ಯ ಪಕ್ಷದ ಕಾರ್ಯಕರ್ತರಿಗೆ ಧೃತಿಗೆಡಬೇಡಿ ಎಂದ ಸಿದ್ದರಾಮಯ್ಯ

ಸುಮಾರು 30 ನಿಮಿಷಗಳ ಕಾಲ ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ನಿಗಮ-ಮಂಡಳಿಗಳ ನೇಮಕ, ಸಚಿವ ಸಂಪುಟದಲ್ಲಿ ಬಾಕಿ ಉಳಿದಿರುವ ಸ್ಥಾನಗಳನ್ನು ಭರ್ತಿ ಮಾಡುವ ಬಗ್ಗೆಯೂ ಮಾತುಕತೆ ನಡೆಸಿದ್ದಾರೆ.

Former CM Siddaramaiah meets Rahul Gandhi

ಕರ್ನಾಟಕದಲ್ಲಿ ಕಾಂಗ್ರೆಸ್‌-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಾದ ಬಳಿನ ನಡೆಯುತ್ತಿರುವ ವಿದ್ಯಮಾನ, ಪಕ್ಷಸಂಘಟನೆಗಳ ಬಗ್ಗೆಯೂ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರಿಗೆ ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್‌-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆ ಬಳಿಕ ಹಲವು ಜಿಲ್ಲೆಗಳಲ್ಲಿ ಪಕ್ಷದ ನಾಯಕರು ಅಸಮಾಧಾನಗೊಂಡಿದ್ದಾರೆ. ರಾಜ್ಯದ ನಾಯಕರಿಗೆ ಈ ಕುರಿತು ಮಾಹಿತಿ ನೀಡಿದ್ದರು. ಈ ವಿಚಾರವನ್ನು ಸಹ ಸಿದ್ದರಾಮಯ್ಯ ಚರ್ಚೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

English summary
Former Chief Minister of Karnataka and Co-ordination committee president Siddaramaiah met Congress president Rahul Gandhi in New Delhi on July 23, 2018 and discussed political developments in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X