Get Updates
Get notified of breaking news, exclusive insights, and must-see stories!

ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ಸಿದ್ದರಾಮಯ್ಯ ವಿರೋಧ

ಬೆಂಗಳೂರು, ಡಿಸೆಂಬರ್ 02: ಗೋ ಹತ್ಯೆ ವಿಚಾರದಲ್ಲಿ ಸರ್ಕಾರ ಕಾಯ್ದೆ ಜಾರಿಗೆ ತರಲು ಮುಂದಾದರೆ ನಾವು ಅದನ್ನು ವಿರೋಧಿಸುತ್ತೇವೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಗೋಹತ್ಯೆ ಕಾಯ್ದೆ ಜಾರಿಗೆ ತರುವುದಾಗಿ ಸರ್ಕಾರದ ಕೆಲ ಸಚಿವರು ಹಾಗೂ ಬಿಜೆಪಿಯ ಕೆಲ ನಾಯಕರು ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯದ ಹಲವು ಮುಖಂಡರು ಮಂಗಳವಾರ ವಿಧಾನಸೌಧದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಕರ್ನಾಟಕದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ಸಂಪುಟ ಅನುಮೋದನೆ ನೀಡಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಮತ್ತು ಸಂರಕ್ಷಣೆ ಮಸೂದೆಯನ್ನು ಡಿಸೆಂಬರ್ 7ರಿಂದ ಆರಂಭಗೊಳ್ಳುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂಬುದನ್ನು ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ತಿಳಿಸಿದ್ದಾರೆ.

Former CM Siddaramaiah Opposed To Karnataka Govts Stringent Anti-Cow Slaughter Law

ಜಾನುವಾರುಗಳ ಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಪರಿಷ್ಕೃತ ಮತ್ತು ಸಮಗ್ರ ಮಸೂದೆಯನ್ನು ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸುವುದಕ್ಕೆ ಸಂಪುಟ ಅನುಮೋದನೆ ನೀಡಿದೆ.

ಗೋಹತ್ಯೆ ನಿಷೇಧ ಮತ್ತು ಸಂರಕ್ಷಣೆ ಮಸೂದೆಯನ್ನು 2010ರಲ್ಲಿ ರಾಜ್ಯ ಸರ್ಕಾರ ಅಂಗೀಕರಿಸಿ ಒಪ್ಪಗೆಗಾಗಿ ಕೇಂದ್ರ ಸರ್ಕಾರಕ್ಕೆ ರವಾನಿಸಿತ್ತು. ಆದರೆ ಆಗಿನ ಯುಪಿಎ ಸರ್ಕಾರ ಮಸೂದೆಯನ್ನು ತಿರಸ್ಕರಿಸಿತ್ತು. ಈಗ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆ ಈಡೇರಿಸಲು ಸರ್ಕಾರ ಬದ್ಧವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+