D.V. Shylendra Kumar: ವಿಶ್ರಾಂತ ನ್ಯಾ. ಡಿ.ವಿ.ಶೈಲೇಂದ್ರ ಕುಮಾರ್ (72) ನಿಧನ
ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಡಿ.ವಿ.ಶೈಲೇಂದ್ರ ಕುಮಾರ್ (72) ಅವರು ಶುಕ್ರವಾರ ನಿಧನರಾದರು.
ಬೆಂಗಳೂರು, ಮಾರ್ಚ್ 03: ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಡಿ.ವಿ.ಶೈಲೇಂದ್ರ ಕುಮಾರ್ (72) ಅವರು ಶುಕ್ರವಾರ ನಿಧನರಾದರು.
ನಿವೃತ್ತ ನ್ಯಾಯಮೂರ್ತಿ ಡಿ.ವಿ.ಶೈಲೇಂದ್ರ ಕುಮಾರ್ ಅಕ್ರಮ ಗಣಿಗಾರಿಕೆ ವಿರುದ್ಧದ ಹೋರಾಟದಲ್ಲಿ ಗಮನ ಸೆಳೆದ ವ್ಯಕ್ತಿಯಾಗಿದ್ದರು. ಗಣಿಗಾರಿಕೆ ವಿರುದ್ಧ ಸಮರವನ್ನೇ ಸಾರಿದ್ದರು. ಅಷ್ಟೇ ಅಲ್ಲದೆ ಅವರು ಹೈಕೋರ್ಟ್ ನ್ಯಾಯಮೂರ್ತಿ ಸೇವೆಯಲ್ಲಿದ್ದಾಗ ಅನೇಕ ಮಹತ್ವದ ತೀರ್ಪುಗಳನ್ನು ನೀಡಿದ್ದರು.

1951ರ ಸೆಪ್ಟೆಂಬರ್ 5ರಂದು ಜನಿಸಿದ್ದ ಶೈಲೇಂದ್ರ ಕುಮಾರ್, 1976ನೇ ವರ್ಷದಲ್ಲಿ ಅವರು ವಕೀಲ ವೃತ್ತಿಯನ್ನು ಆರಂಭಿಸಿದ್ದರು. ನಂತರ ಅವರು ಕರ್ನಾಟಕ ಹೈಕೋರ್ಟ್ ಹಾಗೂ ಮದ್ರಾಸ್ ನಲ್ಲಿ ವಿಧ್ಯಾಭ್ಯಾಸ ನಡೆಸಿದರು. 2000ರ ಡಿಸೆಂಬರ್ ತಿಂಗಳಲ್ಲಿ ಶೈಲೇಂದ್ರ ಕುಮಾರ್ ಅವರು ಕರ್ನಾಟಕ ರಾಜ್ಯ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕವಾದರು.

ನ್ಯಾಯಾಂಗದಲ್ಲಿ ಅವರು ದಿಟ್ಟತನ ಪ್ರದರ್ಶಿಸಿದ್ದ ವ್ಯಕ್ತಿ. ನ್ಯಾಯಾಧೀಶರಾದವರು ಯಾವುದನ್ನು ಮುಚ್ಚಿಡಬಾರದು. ಯಾವುದಕ್ಕೂ ಹೆದರಬಾರದು ಎನ್ನುತ್ತಿದ್ದರು. ಅವರು ಅಂದಿನ ಕರ್ನಾಟಕ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿದ್ದ ಪಿ.ಡಿ ದಿನಕರನ್ ಅವರ ಆಡಳಿತಾತ್ಮಕ ತೀರ್ಮಾನಗಳ ವಿರುದ್ಧ ಸಿಡಿದಿದ್ದರು. ಮಾತ್ರವಲ್ಲ ನ್ಯಾಯಾಮೂರ್ತಿಗಳು ತಮ್ಮ ಆಸ್ತಿ ಘೋಷಣೆ ಮಾಡಬೇಕು ಎಂದು ಹೇಳಿದ್ದರಲ್ಲದೇ ತಮ್ಮ ಆಸ್ತಿ ಘೋಷಣೆ ಮಾಡಿದ್ದರು. ಇವರು ಇದೀಗ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.
-
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ












Click it and Unblock the Notifications