ಹಿರಿಯ ನಟ, ಮಾಜಿ ಸಚಿವ ಎಂ.ಎಚ್.ಅಂಬರೀಶ್ ಪರಿಚಯ
Recommended Video

ಬೆಂಗಳೂರು, ನವೆಂಬರ್ 24 : ಕನ್ನಡ ಚಿತ್ರರಂಗದ ಹಿರಿಯ ನಟ, ಮಾಜಿ ಸಚಿವ ಅಂಬರೀಶ್ ವಿಧಿವಶರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಅವರು ಶನಿವಾರ ಮೃತಪಟ್ಟಿದ್ದಾರೆ.
66 ವರ್ಷದ ಎಂ.ಎಚ್.ಅಂಬರೀಶ್ (ಮಳವಳ್ಳಿ ಹುಚ್ಚೇಗೌಡ ಅಮರನಾಥ್) ಶನಿವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದರು. ಕಿಡ್ನಿ, ಶ್ವಾಸಕೋಶದ ಸಮಸ್ಯೆ ಹಿನ್ನಲೆಯಲ್ಲಿ ಸಂಜೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು.
ಖ್ಯಾತ ಪಿಟೀಲು ವಾದಾಕ ವಿದ್ವಾನ್ ದಿ.ಚೌಡಯ್ಯ ಅವರ ಮೊಮ್ಮಗ ಅಂಬರೀಶ್. ಚಿತ್ರರಂಗ ಮತ್ತು ರಾಜಕೀಯ ಎರಡರಲ್ಲೂ ಗುರುತಿಸಿಕೊಂಡಿದ್ದರು. ಚಿತ್ರರಂಗದಲ್ಲಿ ರೆಬೆಲ್ ಸ್ಟಾರ್ ಎಂದು ಖ್ಯಾತಿ ಪಡೆದಿದ್ದರು. ಸಾವಿರಾರು ಅಭಿಮಾನಿಗಳು ಅಂಬರೀಶ್ ನಿಧನಕ್ಕೆ ಕಣ್ಣೀರು ಹಾಕುತ್ತಿದ್ದಾರೆ.
'ಅಂಬಿ ನಿಂಗ್ ವಯಸ್ಸಾಯ್ತೋ' ಅಂಬರೀಶ್ ಅಭಿನಯದ ಕೊನೆಯ ಚಿತ್ರ. 2013ರ ವಿಧಾನಸಭೆ ಚುನಾವಣೆಯಲ್ಲಿ ಅವರು ಮಂಡ್ಯ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಅದೇ ಅವರ ಕೊನೆಯ ಚುನಾವಣೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟದಲ್ಲಿ ಅವರು ವಸತಿ ಸಚಿವರಾಗಿದ್ದರು.

ರೆಬಲ್ ಸ್ಟಾರ್ ಪರಿಚಯ
* ಎಂ.ಎಚ್.ಅಂಬರೀಶ್ (66)
* ಮಳವಳ್ಳಿ ಹುಚ್ಚೇಗೌಡ ಅಮರನಾಥ್
* 1952, ಮೇ 29ರಂದು ಜನನ
* ಮಂಡ್ಯದ ದೊಡ್ಡರಸಿನಕೆರೆ ಗ್ರಾಮದಲ್ಲಿ ಜನನ

ಕುಟುಂಬದ ಪರಿಚಯ
* ಖ್ಯಾತ ಪಿಟೀಲು ವಿದ್ವಾನ್ ದಿ.ಟಿ.ಚೌಡಯ್ಯ ಅವರ ಮೊಮ್ಮಗ
* ಪತ್ನಿ : ಹಿರಿಯ ನಟಿ ಸುಮಲತಾ
* ಪುತ್ರ : ಅಭಿಷೇಕ್ ಗೌಡ

ನಾಗರಹಾವು ಮೊದಲ ಚಿತ್ರ
* 1973ರಲ್ಲಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ
* ಮೊದಲ ಚಿತ್ರ ನಾಗರಹಾವು (ಪುಟ್ಟಣ್ಣ ಕಣಗಾಲ್ ನಿರ್ದೇಶನ)
* ನಾಯಕನಾಗಿ ಮೊದಲ ಚಿತ್ರ ಅಂತ (ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನ)
* ಹಾಂಕಾಂಗ್ನಲ್ಲಿ ಏಜೆಂಟ್ ಅಮರ್ 100ನೇ ಚಿತ್ರ

ಮಾಜಿ ಸಚಿವ, ಸಂಸದ
* ಮಂಡ್ಯ ಕ್ಷೇತ್ರದಿಂದ ಸಂಸದರಾಗಿ ಆಯ್ಕೆ
* ಕೇಂದ್ರ ಸಚಿವರಾಗಿ ಕಾರ್ಯ ನಿರ್ವಹಣೆ
* ಮಂಡ್ಯ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆ
* ರಾಜ್ಯದಲ್ಲಿ ಸಚಿವರಾಗಿ ಕಾರ್ಯ ನಿರ್ವಹಣೆ
-
Bengaluru: ನಸುಕಿನ ಜಾವ 3 ಗಂಟೆಗೆ ರಾಪಿಡೋ ರೈಡರ್ ತೋರಿದ ಮಾನವೀಯತೆಗೆ ಮಹಿಳೆ ಫಿದಾ, Video Viral -
ಧನುಷ್ ಜೊತೆ ಸ್ನೇಹ ಕಳೆದುಕೊಂಡಿದ್ದು ನನ್ನ ಜೀವನದ ದೊಡ್ಡ ನಷ್ಟ: ಪತ್ನಿ ನಯನತಾರ ಜೊತೆಗಿನ ಮನಸ್ತಾಪಕ್ಕೆ ವಿಘ್ನೇಶ್ ಶಿವನ್ ಬೇಸರ -
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
Darshan: ನಟ ದರ್ಶನ್ ಕಾನೂನು ಹೋರಾಟಕ್ಕೆ ಗೆಲುವು: 'ಬಾಸ್' ಸಿನಿಮಾ ಬಿಡುಗಡೆಗೆ ಕೋರ್ಟ್ ತಡೆ -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
ವಾರ ಭವಿಷ್ಯ: ಈ ರಾಶಿಯ ಪ್ರೇಮಿಗಳು ಮತ್ತೆ ಒಂದಾಗುತ್ತಾರೆ! ಸೂರ್ಯನಿಗೆ ಅರ್ಘ್ಯದಿಂದ ಭಾಗ್ಯ ಬದಲಾವಣೆ -
ಹುಡುಗಿಯರೇ ಎಚ್ಚರ: ಟಾಕ್ಸಿಕ್ ಗಂಡಸರ ಲಕ್ಷಣಗಳಿವು, ಮೆಚ್ಚಿ ಒಲಿದರೆ ಬಲಿಯಾಗುವಿರಿ -ಡಾ ರೂಪಾ ರಾವ್ ಬರಹ -
Ragi Ambli: ಬೇಸಿಗೆಯ ಬಿಸಿಲಿಗೆ ತಂಪೆರೆಯುವ 'ರಾಗಿ ಅಂಬಲಿ'; ಮನೆಯಲ್ಲೇ ಮಾಡುವ ಸುಲಭ ವಿಧಾನ ಇಲ್ಲಿದೆ -
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
Jowar Price: ಕರ್ನಾಟಕದ ಮಾರುಕಟ್ಟೆಗಳಲ್ಲಿ ಜೋಳದ ದರ ಏರಿಳಿತ; ಇಲ್ಲಿದೆ ಜಿಲ್ಲಾವಾರು ಬೆಲೆ ಪಟ್ಟಿ -
April 7 Horoscope: ಸ್ಪರ್ಧೆಯಲ್ಲಿ ಜಯ ಮತ್ತು ಹೊಸ ಉದ್ಯೋಗ ಅವಕಾಶಗಳು












Click it and Unblock the Notifications