ಹಿರಿಯ ನಟ, ಮಾಜಿ ಸಚಿವ ಎಂ.ಎಚ್.ಅಂಬರೀಶ್ ಪರಿಚಯ
Recommended Video

ಬೆಂಗಳೂರು, ನವೆಂಬರ್ 24 : ಕನ್ನಡ ಚಿತ್ರರಂಗದ ಹಿರಿಯ ನಟ, ಮಾಜಿ ಸಚಿವ ಅಂಬರೀಶ್ ವಿಧಿವಶರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಅವರು ಶನಿವಾರ ಮೃತಪಟ್ಟಿದ್ದಾರೆ.
66 ವರ್ಷದ ಎಂ.ಎಚ್.ಅಂಬರೀಶ್ (ಮಳವಳ್ಳಿ ಹುಚ್ಚೇಗೌಡ ಅಮರನಾಥ್) ಶನಿವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದರು. ಕಿಡ್ನಿ, ಶ್ವಾಸಕೋಶದ ಸಮಸ್ಯೆ ಹಿನ್ನಲೆಯಲ್ಲಿ ಸಂಜೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರು.
ಖ್ಯಾತ ಪಿಟೀಲು ವಾದಾಕ ವಿದ್ವಾನ್ ದಿ.ಚೌಡಯ್ಯ ಅವರ ಮೊಮ್ಮಗ ಅಂಬರೀಶ್. ಚಿತ್ರರಂಗ ಮತ್ತು ರಾಜಕೀಯ ಎರಡರಲ್ಲೂ ಗುರುತಿಸಿಕೊಂಡಿದ್ದರು. ಚಿತ್ರರಂಗದಲ್ಲಿ ರೆಬೆಲ್ ಸ್ಟಾರ್ ಎಂದು ಖ್ಯಾತಿ ಪಡೆದಿದ್ದರು. ಸಾವಿರಾರು ಅಭಿಮಾನಿಗಳು ಅಂಬರೀಶ್ ನಿಧನಕ್ಕೆ ಕಣ್ಣೀರು ಹಾಕುತ್ತಿದ್ದಾರೆ.
'ಅಂಬಿ ನಿಂಗ್ ವಯಸ್ಸಾಯ್ತೋ' ಅಂಬರೀಶ್ ಅಭಿನಯದ ಕೊನೆಯ ಚಿತ್ರ. 2013ರ ವಿಧಾನಸಭೆ ಚುನಾವಣೆಯಲ್ಲಿ ಅವರು ಮಂಡ್ಯ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಅದೇ ಅವರ ಕೊನೆಯ ಚುನಾವಣೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪುಟದಲ್ಲಿ ಅವರು ವಸತಿ ಸಚಿವರಾಗಿದ್ದರು.

ರೆಬಲ್ ಸ್ಟಾರ್ ಪರಿಚಯ
* ಎಂ.ಎಚ್.ಅಂಬರೀಶ್ (66)
* ಮಳವಳ್ಳಿ ಹುಚ್ಚೇಗೌಡ ಅಮರನಾಥ್
* 1952, ಮೇ 29ರಂದು ಜನನ
* ಮಂಡ್ಯದ ದೊಡ್ಡರಸಿನಕೆರೆ ಗ್ರಾಮದಲ್ಲಿ ಜನನ

ಕುಟುಂಬದ ಪರಿಚಯ
* ಖ್ಯಾತ ಪಿಟೀಲು ವಿದ್ವಾನ್ ದಿ.ಟಿ.ಚೌಡಯ್ಯ ಅವರ ಮೊಮ್ಮಗ
* ಪತ್ನಿ : ಹಿರಿಯ ನಟಿ ಸುಮಲತಾ
* ಪುತ್ರ : ಅಭಿಷೇಕ್ ಗೌಡ

ನಾಗರಹಾವು ಮೊದಲ ಚಿತ್ರ
* 1973ರಲ್ಲಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ
* ಮೊದಲ ಚಿತ್ರ ನಾಗರಹಾವು (ಪುಟ್ಟಣ್ಣ ಕಣಗಾಲ್ ನಿರ್ದೇಶನ)
* ನಾಯಕನಾಗಿ ಮೊದಲ ಚಿತ್ರ ಅಂತ (ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನ)
* ಹಾಂಕಾಂಗ್ನಲ್ಲಿ ಏಜೆಂಟ್ ಅಮರ್ 100ನೇ ಚಿತ್ರ

ಮಾಜಿ ಸಚಿವ, ಸಂಸದ
* ಮಂಡ್ಯ ಕ್ಷೇತ್ರದಿಂದ ಸಂಸದರಾಗಿ ಆಯ್ಕೆ
* ಕೇಂದ್ರ ಸಚಿವರಾಗಿ ಕಾರ್ಯ ನಿರ್ವಹಣೆ
* ಮಂಡ್ಯ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆ
* ರಾಜ್ಯದಲ್ಲಿ ಸಚಿವರಾಗಿ ಕಾರ್ಯ ನಿರ್ವಹಣೆ
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Cylinder Shortage: ರಾಜ್ಯದಲ್ಲಿ ಅನಿಲ ಪೂರೈಕೆ ಸಮಸ್ಯೆಗೆ ಮುಕ್ತಿ? ಸಚಿವ ಮುನಿಯಪ್ಪ ಮಹತ್ವ ಮಾಹಿತಿ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು












Click it and Unblock the Notifications