ಬಿಜೆಪಿ-ಜೆಡಿಎಸ್ ಮೈತ್ರಿ ನೋಡಿ ಕಾಂಗ್ರೆಸ್ಗೆ ನಡುಕ- ಅಶ್ವತ್ಥ್ ನಾರಾಯಣ್
ಬೆಂಗಳೂರು, ಏಪ್ರಿಲ್ 10: ರಾಜ್ಯದ ಮೊದಲ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದ ಎನ್.ಡಿ.ಎ ಅಭ್ಯರ್ಥಿಗಳು ಇಂದು ವಿಜಯನಗರದ ಆದಿಚುಂಚನಗರಿ ಮಠಕ್ಕೆ ಭೇಟಿ ನೀಡಿ ಡಾ. ನಿರ್ಮಲಾನಂದ ಸ್ವಾಮೀಜಿ ಅವರ ಆಶೀರ್ವಾದ ಪಡೆದು ಒಗ್ಗಟ್ಟಿನ ಸಂದೇಶವನ್ನು ಕೊಟ್ಟಿದ್ದೇವೆ. ಈ ಒಗ್ಗಟ್ಟಿನ ಸಂದೇಶ ನೋಡಿ ಕಾಂಗ್ರೆಸ್ಸಿನವರಿಗೆ ಆತಂಕ ಮತ್ತು ನಡುಕ ಉಂಟಾಗಿದೆ ಎಂದು ಮಾಜಿ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಶ್ನೆಗಳಿಗೆ ಉತ್ತರ ಕೊಟ್ಟರು. ಕಾಂಗ್ರೆಸ್ಸಿನವರಿಗೆ ಪ್ರತಿಪಕ್ಷದ ಸ್ಥಾನವನ್ನೂ ಪಡೆಯಲಾಗುತ್ತಿಲ್ಲ. ಆದ್ದರಿಂದ ಅವರಿಗೆ ಮತ ಹಾಕುವುದರಿಂದ ಯಾವುದೇ ಪ್ರಯೋಜನ ಇಲ್ಲ. ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರಕಾರವನ್ನು ಈ ಹಿಂದೆ ಬೀಳಿಸಿದ್ದು ಯಾರೆಂದು ಕುಮಾರಣ್ಣನವರು ಈಗಾಗಲೇ ಹೇಳಿದ್ದಾರೆ. ಕಾಂಗ್ರೆಸ್ಸಿನ ವರಿಷ್ಠರು ಜೊತೆಗಿದ್ದೇ ಕುತ್ತಿಗೆ ಕೊಯ್ದರು ಎಂದು ಅವರು ಹೇಳಿದ್ದಾರೆ ಎಂದು ವಿವರಿಸಿದರು.

ಪಾಪ, ಅವರಿಗೆ ಬೇಸಿಗೆ ಬಿಸಿ, ರಾಜಕೀಯ ಬಿಸಿ ತಡಕೊಳ್ಳಲು ಆಗುತ್ತಿಲ್ಲ ಎಂದು ಟೀಕಿಸಿದರು. ಸೋಲಿನ ಆತಂಕ ಕಾಂಗ್ರೆಸ್ಸಿನವರನ್ನು ಕಾಡುತ್ತಿದ್ದು, ಏನೇನೋ ಹೇಳಿಕೆ ಕೊಡುತ್ತಿದ್ದಾರೆ. ಏನೇ ಆದರೂ ಈ ಬಾರಿ ಬಿಜೆಪಿ- ಜೆಡಿಎಸ್ ಮೈತ್ರಿ ಮೂಲಕ ನಮ್ಮ 28 ಅಭ್ಯರ್ಥಿಗಳೂ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಡಿ.ಕೆ.ಸುರೇಶ್ ಅವರು ಆ ಭಾಗದಲ್ಲಿ ಏನೇನೂ ಕೆಲಸ ಮಾಡಿಲ್ಲ. ಅಲ್ಲಿ ಭಯದ ವಾತಾವರಣ ಇತ್ತು. ಅಲ್ಲಿ ಪ್ರೀತಿಯ ವಾತಾವರಣ ಬೇಕಿದೆ. ಅದಕ್ಕೆ ಅರ್ಹ ವ್ಯಕ್ತಿ ಬೇಕು. ಬೆಂಗಳೂರು ಪ್ರಗತಿದಾಯಕ, ಭರವಸೆದಾಯಕ ನಗರ. ಡಾ. ಮಂಜುನಾಥ್ ಅವರ ಗೆಲುವು ಅತ್ಯಂತ ಸ್ಪಷ್ಟ. ಸುರೇಶ್ ಜನಕ್ಕೆ ಬೇಡವಾಗಿದ್ದಾರೆ. ಮೋದಿಯವರು ಬೇಕು ಎಂಬ ಮನಸ್ಥಿತಿ ಜನರದು ಎಂದು ಬೆಂಗಳೂರು ಗ್ರಾಮಾಂತರದ ಪರಿಸ್ಥಿತಿ ಹೀಗಿದೆ ಎಂದು ವಿವರಿಸಿದರು.

ನಮ್ಮೆಲ್ಲರಿಗೂ ಒಂದೇ ಗುರಿ ಇದೆ-ಯದುವೀರ್ ಒಡೆಯರ್
ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪರ ಒಂದು ಒಳ್ಳೆಯ ವಾತಾವರಣ ಸೃಷ್ಟಿಸಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ತಕ್ಕಂತೆ ಚುನಾವಣಾ ಉತ್ಸವದಲ್ಲಿ ಎಲ್ಲರೂ ಭಾಗಿಯಾಗುತ್ತಿದ್ದಾರೆ. ಫಲಿತಾಂಶ ನಮ್ಮ ಪರವಾಗಿಯೇ ಬರುತ್ತದೆ ಎನ್ನುವ ಸಂಪೂರ್ಣ ವಿಶ್ವಾಸ ನಮಗಿದೆ ಎಂದು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ನವರು ಅವರ ತಂತ್ರಗಾರಿಕೆ ಮೇಲೆ ಕೆಲಸ ಮಾಡುತ್ತಿದ್ದಾರೆ. ನಾವು ನಮ್ಮ ತಂತ್ರಗಾರಿಕೆ, ನಮ್ಮ ಕೆಲಸ ಮೇಲೆ ನಂಬಿಕೆಯಿಟ್ಟು ನಾವು ಮುಂದುವರಿಯುತ್ತಿದ್ದೇವೆ. ಸದ್ಯ ಮೈಸೂರು ಬಿಜೆಪಿಯಲ್ಲಿದ್ದ ಎಲ್ಲಾ ಅಸಮಧಾನಗಳು ಶಮನ ಆಗಿದೆ. ಈಗ ಎಲ್ಲರಿಗೂ ಒಂದೇ ಗುರಿ ಇದೆ. ಪ್ರಧಾನ ಮಂತ್ರಿ ಅವರೇ ಮತ್ತೆ ಪ್ರಧಾನಿಯಾಗಬೇಕು ಎನ್ನುವುದು ನಮ್ಮ ಗುರಿ ಎಂದರು.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications