ಜಾಹೀರಾತು ಕೊಡುವ ಹಣದ ಅರ್ಧದಲ್ಲಿ ಸಬ್ಸಿಡಿಯನ್ನೇ ಕೊಡಬಹುದಿತ್ತು-ಸಿ.ಟಿ ರವಿ
ಚಿಕ್ಕಮಗಳೂರು, ಏಪ್ರಿಲ್ 28: ಬರ ಪರಿಹಾರ ವಿಚಾರದಲ್ಲಿ ಕೇಂದ್ರ ಸರ್ಕಾರ ವಿರುದ್ಧದ ಕರ್ನಾಟಕ ಸರ್ಕಾರದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ಬಳಿಕ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ. ಈ ಬಗ್ಗೆ ಮಾಜಿ ಸಚಿವ ಸಿ.ಟಿ ರವಿ ಪ್ರತಿಕ್ರಿಯಿಸಿದ್ದು, ಈಗ ಬಿಡುಗಡೆ ಮಾಡಿರುವ ಹಣವನ್ನಾದರೂ ಪ್ರಾಮಾಣಿಕವಾಗಿ ಜನರಿಗೆ ತಲುಪಿಸಿ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ತಿಳಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ರೈತರ ನೆರವಿಗೆ ಬರಬೇಕು ಎನ್ನುವ ಆಸಕ್ತಿ ಇಲ್ಲ. ರೈತರ ವಿಷಯದಲ್ಲಿ ರಾಜಕಾರಣ ಮಾಡಬೇಕೆಂಬುದರಲ್ಲೇ ಆಸಕ್ತಿ ಹೆಚ್ಚಾಗಿತ್ತು. ಈಗ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹಣವನ್ನಾದರೂ ಪ್ರಾಮಾಣಿಕವಾಗಿ ರೈತರಿಗೆ ತಲುಪಿಸಿ ಎಂದು ಹೇಳಿದರು.

600ಕ್ಕೂ ಹೆಚ್ಚು ಜನ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ಸಾಮಾನ್ಯ ಸಂಗತಿಯಲ್ಲ. ಹಿಂದೆ ನಿಮ್ಮ ಒಬ್ಬ ಸಚಿವ, ರೈತರುಸ ಹಣಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಹೇಳಿದ್ದರು. ಇದು ರೈತರ ಬಗ್ಗೆ ಇವರಿಗಿರುವ ಕಾಳಜಿಯನ್ನ ತೋರಿಸುತ್ತದೆ. ರೈತ ಸಂಕಷ್ಟಕ್ಕೆ ಒಳಗಾಗಿ ಹತಾಶೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಹಣಕ್ಕಾಗಿ ಯಾರಾದ್ರೂ ಆತ್ಮಹತ್ಯೆ ಮಾಡಿಕೊಳ್ಳುತ್ತಾರಾ..? ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿಯಾದಿಯಾಗಿ ಸಚಿವರು ಶಾಸಕರುಗಳೆಲ್ಲರೂ ಕೇವಲ ರಾಜಕಾರಣ ಮಾಡುವುದರಲ್ಲಿ ನಿರತರಾಗಿದ್ದಾರೆ. ರೈತರ ಸಂಕಷ್ಟಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಯಾವುದೇ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ. ಇದನ್ನು ಇಲ್ಲಿಗೆ ನಿಲ್ಲಿಸಿ ಇನ್ನು ಮುಂದೆಯಾದರೂ ಪ್ರಾಮಾಣಿಕವಾಗಿ ಪ್ರಯತ್ನಿಸಿ. ಮಹಾರಾಷ್ಟ್ರ ಸರ್ಕಾರದ ಮಾದರಿಯಲ್ಲಿ ಕಿಸಾನ್ ಸಮ್ಮಾನ್ ಯೋಜನೆಗೆ ಚಾಲನೆ ಕೊಡಿ. ತಕ್ಷಣ ಕೇಂದ್ರದ 6 ಸಾವಿರದ ಜೊತೆಗೆ ನೀವು 6 ಸಾವಿರ ಸೇರಿಸಿ 12, 000 ಕೊಡಿ ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು.
ಹಾಲು ಉತ್ಪಾದಕರ ಪ್ರೋತ್ಸಾಹ ಧನವನ್ನು ಕೂಡಲೇ ಬಿಡುಗಡೆ ಮಾಡಿ. ಜಾಹೀರಾತು ಕೊಡುವ ಹಣದ ಅರ್ಧದಲ್ಲಿ ಸಬ್ಸಿಡಿಯನ್ನೇ ಕೊಡಬಹುದಿತ್ತು. ನಿಮಗೆ ಜಾಹೀರಾತು ಕೊಡುವುದಕ್ಕೆ ಹಣ ಇದೆ. ಸಗಣಿ ಬಾಚಿ ಕಷ್ಟಪಡುವ ಮಹಿಳೆಗೆ ಸಬ್ಸಿಡಿ ಕೊಡದೆ ಇರುವುದು ದುರದೃಷ್ಟಕರ. ತಕ್ಷಣ ಹಾಲಿನ ಸಬ್ಸಿಡಿ ದರವನ್ನು ಬಿಡುಗಡೆ ಮಾಡಿ. ರೈತ ವಿದ್ಯಾನಿಧಿಸ್ತಗಿತಗೊಳಿಸಿದ್ದು ಯಾವ ರೀತಿಯ ನ್ಯಾಯ..? ನೀವು ನ್ಯಾಯದ ಮಾತಾಡ್ತೀರಿ, ನ್ಯಾಯದ ಮಾತಾಡುವ ಸಂದರ್ಭದಲ್ಲಿ ಇದು ಎಷ್ಟು ಸರಿ..? ಇದು ರೈತ ಮಕ್ಕಳಿಗೆ ಮಾಡುವ ಅನ್ಯಾಯ ಅಲ್ಲವೇ..? ಎಂದು ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು?










Click it and Unblock the Notifications