CT Ravi Case: ಸಿಟಿ ರವಿ ಬಂಧನ ವಿಚಾರದಲ್ಲಿ ಸ್ಫೋಟಕ ತಿರುವು? ಸಿಐಡಿ ಎಂಟ್ರಿ ಬಗ್ಗೆ...
ಸಿಟಿ ರವಿ ಕೇಸ್ ಕರ್ನಾಟಕದಲ್ಲಿ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಒಂದು ಕಡೆ ನನಗೆ ಈ ವಿಚಾರದಲ್ಲಿ ನ್ಯಾಯ ಸಿಗಬೇಕು ಅಂತಾ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಆಗ್ರಹಿಸಿದ್ರೆ. ಇನ್ನೊಂದು ಕಡೆ ಸಿಟಿ ರವಿ ಅವರು ನನಗೇ ಅನ್ಯಾಯ ಆಗಿದೆ ಅಂತಾ ಆರೋಪ ಮಾಡ್ತಿದ್ದಾರೆ. ಹೀಗೆ ಈ ಪ್ರಕರಣ ಸಿದ್ದರಾಮಯ್ಯ ಅವರ ಸರ್ಕಾರಕ್ಕೂ ದೊಡ್ಡ ಸವಾಲು ತಂದೊಡ್ಡಿದ್ದು, ಭಾರಿ ಗಮನ ಸೆಳೆದಿದೆ. ಇಂತಹ ಸಮಯದಲ್ಲೇ, ಸಿಟಿ ರವಿ ಬಂಧನ ವಿಚಾರದಲ್ಲಿ ಸ್ಫೋಟಕ ತಿರುವು? ಸಿಐಡಿ ಎಂಟ್ರಿ ಬಗ್ಗೆ...
ಹೌದು, ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಸಿಟಿ ರವಿ ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ವಿಚಾರವು ಬೆಳಗಾವಿಯ ಚಳಿಗಾಲದ ಅಧಿವೇಶನ ಅಲ್ಲಾಡಿ ಹೋಗುವಂತೆ ಮಾಡಿತ್ತು. ಇಡೀ ಬೆಳಗಾವಿ ಮಾತ್ರವಲ್ಲ ಇಂಡಿಯಾದಲ್ಲೇ ಈ ಘಟನೆಯಿಂದ ಸಂಚಲನ ಸೃಷ್ಟಿ ಆಗಿತ್ತು. ಹಾಗೇ ಈ ಘಟನೆಯನ್ನ ಕರ್ನಾಟಕ ಸರ್ಕಾರ ಕೂಡ ಗಂಭೀರವಾಗಿ ಪರಿಗಣಿಸಿದೆ. ಇಷ್ಟೆಲ್ಲಾ ಬೆಳವಣಿಗೆ ನಡುವೆ, ಸಿಟಿ ರವಿ ಬಂಧನ ಪ್ರಕರಣದಲ್ಲಿ ಸಿಐಡಿ ಎಂಟ್ರಿ? ಮುಂದೆ ಓದಿ.

ಸಿಟಿ ರವಿ ಸಿಐಡಿ ಬಲೆಯಲ್ಲಿ?
ಅಂದಹಾಗೆ, ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಮಾಜಿ ಸಚಿವ ಸಿಟಿ ರವಿ ಅಶ್ಲೀಲ ಪದವನ್ನು ಬಳಕೆ ಮಾಡಿದ್ದಾರೆ ಎಂಬ ಗಂಭೀರ ಆರೋಪದ ಬಗ್ಗೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರತಿಕ್ರಿಯಿಸಿದ್ದಾರೆ. ಈ ಪ್ರಕರಣ ಸಿಐಡಿಗೆ ವರ್ಗಾವಣೆ ಮಾಡುವ ವಿಚಾರವಾಗಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದಿದ್ದಾರೆ. ಈ ಮೂಲಕ ಸಭಾಪತಿ ಬಸವರಾಜ ಹೊರಟ್ಟಿ ಹೇಳಿಕೆ ಭಾರಿ ಗಮನ ಸೆಳೆದಿದೆ. ಸಿದ್ದರಾಮಯ್ಯ ಅವರ ಸರ್ಕಾರ ಯಾವ ಕ್ರಮ ಕೈಗೊಳ್ಳಬಹುದು? ಎಂಬ ಕುತೂಹಲ ಕೆರಳಿದೆ.
7 ಪುಟದ ಪತ್ರ ಬರೆದಿದ್ದಾರೆ....
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿಟಿ ರವಿ ಅವರು ಕೂಡ 7 ಪುಟದ ಪತ್ರ ಬರೆದಿದ್ದಾರೆ. ಧರಣಿ ಮಾಡುವಾಗ ನಮ್ಮನ್ನು ಕರ್ಕೊಂಡು ಹೋಗಿ ರಾತ್ರಿ ಪೂರ್ತಿ ಸುತ್ತಾಡಿಸಿದ್ದು, ಹೀಗೆಲ್ಲಾ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಅಂತಾ ಪತ್ರದಲ್ಲಿ ಮನವಿ ಮಾಡಿದ್ದಾರೆ ಎಂದರು. ಹಾಗೇ ಈ ಸಮಯದಲ್ಲೇ ಸಿಐಡಿ ತನಿಖೆ ವಿಚಾರವಾಗಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಇದು ಸಾಕಷ್ಟು ಗಮನ ಸೆಳೆದಿದ್ದು, ಈ ಪ್ರಕರಣ ಮುಂದೆ ಏನಾಗುತ್ತೆ? ಅನ್ನೋದನ್ನ ಈಗ ಕಾದು ನೋಡಬೇಕಿದೆ.
ಒಟ್ನಲ್ಲಿ ಸಿಟಿ ರವಿ & ಲಕ್ಷ್ಮೀ ಹೆಬ್ಬಾಳ್ಕರ್ ಅವರ ನಡುವೆ ನಡೆಯುತ್ತಿರುವ ಈ ಯುದ್ಧವು, ಇದೀಗ ರೋಚಕ ಘಟ್ಟ ತಲುಪುವ ನಿರೀಕ್ಷೆ ಇದೆ. ಮತ್ತೊಂದು ಕಡೆ ಬಿಜೆಪಿ ನಾಯಕರು ಈ ವಿಚಾರವನ್ನೇ ಮುಂದೆ ಇಟ್ಟುಕೊಂಡು ದೊಡ್ಡ ಹೋರಾಟಕ್ಕೂ ಸಜ್ಜಾಗುತ್ತಿದ್ದು, ಸಿಟಿ ರವಿ ಕೂಡ ಇದೇ ಘಟನೆಯನ್ನ ಆಧಾರವಾಗಿಟ್ಟು ಸಿದ್ದರಾಮಯ್ಯ ಅವರ ಸರ್ಕಾರದ ವಿರುದ್ಧವೇ ಹರಿಹಾಯುತ್ತಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications