ಸಾಗರ ಕ್ಷೇತ್ರಕ್ಕೆ ನೀವೇ ಅಭ್ಯರ್ಥಿ ಎಂದ ಬಿಎಸ್ ವೈ ಮಾತಿಗೆ ಹಾಲಪ್ಪ ಸಂತಸ
ಶಿವಮೊಗ್ಗ, ಫೆಬ್ರವರಿ 26 : ಸಾಗರ ಕ್ಷೇತ್ರಕ್ಕೆ ನನ್ನನ್ನು ಮತ್ತು ಸೊರಬ ಕ್ಷೇತ್ರಕ್ಕೆ ಕುಮಾರ್ ಬಂಗಾರಪ್ಪ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಆಯ್ಕೆ ಆಗಲಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆ ನನಗೆ ಖುಷಿ ತಂದಿದೆ ಎಂದು ಮಾಜಿ ಸಚಿವ ಹರತಾಳ್ ಹಾಲಪ್ಪ ಹೇಳಿದರು.
ಆನಂದಪುರದ ಮುರುಘಾ ಮಠಕ್ಕೆ ತೆರಳಿ ಶ್ರೀ ಜಗದ್ಗುರು ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಎಸ್ ಯಡಿಯೂರಪ್ಪ ಅವರು ಭಾನುವಾರ ಸಾಗರ ಕ್ಷೇತ್ರಕ್ಕೆ ನನ್ನನ್ನು ಮತ್ತು ಸೊರಬ ಕ್ಷೇತ್ರಕ್ಕೆ ಕುಮಾರ್ ಬಂಗಾರಪ್ಪ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಆಯ್ಕೆ ಆಗಲಿದ್ದಾರೆ ಎಂದು ಹೇಳಿರುವ ಅವರ ಮಾತುಗಳು ಸಂತಸ ತಂದಿದೆ ಎಂದರು.
ಕ್ಷೇತ್ರದ ಅಭಿವೃದ್ಧಿಗೆ ನಾನು ಪ್ರಾಮಾಣಿಕ ಪ್ರಯತ್ನವನ್ನು ಸಲ್ಲಿಸುತ್ತೇನೆ ಬಿಎಸ್ ಯಡಿಯೂರಪ್ಪನವರಿಗೆ ಮಂಗಳವಾರ ಹುಟ್ಟುಹಬ್ಬವಿದ್ದು ಮಂಗಳವಾರ ದಾವಣಗೆರೆಯಲ್ಲಿ ಆಚರಿಸಲಾಗುತ್ತಿದೆ. ಅವರು ಮುಖ್ಯಮಂತ್ರಿಯಾಗಿದ್ದಾಗ ಸಾಕಷ್ಟು ಜನಪರ ಯೋಜನೆಗಳನ್ನು ರೈತರಿಗಾಗಿ ಜಾರಿಗೆ ತಂದಿದ್ದರು. ಯೋಜನೆಗಳ ಕುರಿತಾಗಿ ದಾವಣಗೆರೆಯಲ್ಲಿ ರೈತ ಸಮಾವೇಶವನ್ನಾಗಿ ಮಾಡುತ್ತಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಈ ಹಿನ್ನೆಲೆಯಲ್ಲಿ ನಮ್ಮ ಸಾಗರ ಕ್ಷೇತ್ರ ಹೊಸನಗರದಿಂದ ಅತಿ ಹೆಚ್ಚು ಕಾರ್ಯಕರ್ತರು ಅಲ್ಲಿಗೆ ತೆರಳಿದ್ದಾರೆ ಯಡಿಯೂರಪ್ಪನವರನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿ ಮಾಡಲು ನಾವು ಯಾವುದೇ ತ್ಯಾಗಕ್ಕೂ ಸಿದ್ಧವಿದ್ದೇವೆ ಸಾಗರ ಕ್ಷೇತ್ರದಲ್ಲಿ ಬಿಜೆಪಿ ಈ ಬಾರಿ ಜಯವನ್ನು ಗಳಿಸಲಿದೆ ಎಂದರು.
ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಯಾವುದೇ ಬಣಗಳು ಇಲ್ಲ ಎಲ್ಲರೂ ಬಿಜೆಪಿ ಎಂದು ಕೆಲಸವನ್ನು ಮಾಡಲಿದ್ದೇವೆ ಎಂದರು ಈಗಾಗಲೇ ಬೂತ್ ಮಟ್ಟದಲ್ಲಿ ಪ್ರವಾಸ ಕೈಗೊಂಡಿದ್ದು ಪಕ್ಷ ಸಂಘಟನೆಗೆ ಒತ್ತು ನೀಡಲಾಗುತ್ತಿದೆ.
ಈ ಹಿಂದೆ ನಾನು ಹೊಸ ನಗರ ಕ್ಷೇತ್ರದಲ್ಲಿ ಶಾಸಕನಾಗಿದ್ದು ಸಾಗರ ಕ್ಷೇತ್ರದಲ್ಲಿ ಚುನಾವಣೆ ಮಾಡಲು ನನಗೇನು ಹೊಸದಲ್ಲ ನಮಗೆ ಸೊರಬ ಮತ್ತು ತೀರ್ಥಹಳ್ಳಿ ಎರಡು ಕ್ಷೇತ್ರಗಳು ಬಿಜೆಪಿ ಗೆಲ್ಲಬೇಕು ಈ ಹಿನ್ನೆಯಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಈ ಸಮಯದಲ್ಲಿ ಆನಂದಪುರ ಶಕ್ತಿ ಕೇಂದ್ರದ ಅಧ್ಯಕ್ಷರಾದ ಶಾಂತಕುಮಾರ ಜಿಲ್ಲಾ ಬಿಜೆಪಿ ಸೋಷಿಯಲ್ ಮೀಡಿಯಾ ಸಹ ಸಂಚಾಲಕ ಹೆಚ್ ಆರ್ .ತೀರ್ಥೇಶ್ .ಬಿಜೆಪಿ ಮುಖಂಡರಾದ ಹೂವಪ್ಪ ಮತ್ತು ಮೆಣಸೆ ಆನಂದ .ಹಾಲಪ್ಪ ಅವರು ಉಪಸ್ಥಿತರಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications