ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾಗರ ಕ್ಷೇತ್ರಕ್ಕೆ ನೀವೇ ಅಭ್ಯರ್ಥಿ ಎಂದ ಬಿಎಸ್ ವೈ ಮಾತಿಗೆ ಹಾಲಪ್ಪ ಸಂತಸ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಫೆಬ್ರವರಿ 26 : ಸಾಗರ ಕ್ಷೇತ್ರಕ್ಕೆ ನನ್ನನ್ನು ಮತ್ತು ಸೊರಬ ಕ್ಷೇತ್ರಕ್ಕೆ ಕುಮಾರ್ ಬಂಗಾರಪ್ಪ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಆಯ್ಕೆ ಆಗಲಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆ ನನಗೆ ಖುಷಿ ತಂದಿದೆ ಎಂದು ಮಾಜಿ ಸಚಿವ ಹರತಾಳ್ ಹಾಲಪ್ಪ ಹೇಳಿದರು.

ಆನಂದಪುರದ ಮುರುಘಾ ಮಠಕ್ಕೆ ತೆರಳಿ ಶ್ರೀ ಜಗದ್ಗುರು ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಎಸ್ ಯಡಿಯೂರಪ್ಪ ಅವರು ಭಾನುವಾರ ಸಾಗರ ಕ್ಷೇತ್ರಕ್ಕೆ ನನ್ನನ್ನು ಮತ್ತು ಸೊರಬ ಕ್ಷೇತ್ರಕ್ಕೆ ಕುಮಾರ್ ಬಂಗಾರಪ್ಪ ಅವರನ್ನು ಬಿಜೆಪಿ ಅಭ್ಯರ್ಥಿಯನ್ನಾಗಿ ಆಯ್ಕೆ ಆಗಲಿದ್ದಾರೆ ಎಂದು ಹೇಳಿರುವ ಅವರ ಮಾತುಗಳು ಸಂತಸ ತಂದಿದೆ ಎಂದರು.

ಸಾಗರ, ಸೊರಬ ಟಿಕೆಟ್‌ ಗೊಂದಲಕ್ಕೆ ತೆರೆ ಎಳೆದ ಯಡಿಯೂರಪ್ಪ!ಸಾಗರ, ಸೊರಬ ಟಿಕೆಟ್‌ ಗೊಂದಲಕ್ಕೆ ತೆರೆ ಎಳೆದ ಯಡಿಯೂರಪ್ಪ!

ಕ್ಷೇತ್ರದ ಅಭಿವೃದ್ಧಿಗೆ ನಾನು ಪ್ರಾಮಾಣಿಕ ಪ್ರಯತ್ನವನ್ನು ಸಲ್ಲಿಸುತ್ತೇನೆ ಬಿಎಸ್ ಯಡಿಯೂರಪ್ಪನವರಿಗೆ ಮಂಗಳವಾರ ಹುಟ್ಟುಹಬ್ಬವಿದ್ದು ಮಂಗಳವಾರ ದಾವಣಗೆರೆಯಲ್ಲಿ ಆಚರಿಸಲಾಗುತ್ತಿದೆ. ಅವರು ಮುಖ್ಯಮಂತ್ರಿಯಾಗಿದ್ದಾಗ ಸಾಕಷ್ಟು ಜನಪರ ಯೋಜನೆಗಳನ್ನು ರೈತರಿಗಾಗಿ ಜಾರಿಗೆ ತಂದಿದ್ದರು. ಯೋಜನೆಗಳ ಕುರಿತಾಗಿ ದಾವಣಗೆರೆಯಲ್ಲಿ ರೈತ ಸಮಾವೇಶವನ್ನಾಗಿ ಮಾಡುತ್ತಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ ಎಂದು ತಿಳಿಸಿದರು.

Former minister Halappa ready to contest from Sagara Constituency

ಈ ಹಿನ್ನೆಲೆಯಲ್ಲಿ ನಮ್ಮ ಸಾಗರ ಕ್ಷೇತ್ರ ಹೊಸನಗರದಿಂದ ಅತಿ ಹೆಚ್ಚು ಕಾರ್ಯಕರ್ತರು ಅಲ್ಲಿಗೆ ತೆರಳಿದ್ದಾರೆ ಯಡಿಯೂರಪ್ಪನವರನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿ ಮಾಡಲು ನಾವು ಯಾವುದೇ ತ್ಯಾಗಕ್ಕೂ ಸಿದ್ಧವಿದ್ದೇವೆ ಸಾಗರ ಕ್ಷೇತ್ರದಲ್ಲಿ ಬಿಜೆಪಿ ಈ ಬಾರಿ ಜಯವನ್ನು ಗಳಿಸಲಿದೆ ಎಂದರು.

ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಯಾವುದೇ ಬಣಗಳು ಇಲ್ಲ ಎಲ್ಲರೂ ಬಿಜೆಪಿ ಎಂದು ಕೆಲಸವನ್ನು ಮಾಡಲಿದ್ದೇವೆ ಎಂದರು ಈಗಾಗಲೇ ಬೂತ್ ಮಟ್ಟದಲ್ಲಿ ಪ್ರವಾಸ ಕೈಗೊಂಡಿದ್ದು ಪಕ್ಷ ಸಂಘಟನೆಗೆ ಒತ್ತು ನೀಡಲಾಗುತ್ತಿದೆ.

ಸಾಗರದಿಂದ ಹಾಲಪ್ಪ ಸ್ಪರ್ಧೆ : ಬೇಳೂರು ಹೇಳುವುದೇನು?ಸಾಗರದಿಂದ ಹಾಲಪ್ಪ ಸ್ಪರ್ಧೆ : ಬೇಳೂರು ಹೇಳುವುದೇನು?

ಈ ಹಿಂದೆ ನಾನು ಹೊಸ ನಗರ ಕ್ಷೇತ್ರದಲ್ಲಿ ಶಾಸಕನಾಗಿದ್ದು ಸಾಗರ ಕ್ಷೇತ್ರದಲ್ಲಿ ಚುನಾವಣೆ ಮಾಡಲು ನನಗೇನು ಹೊಸದಲ್ಲ ನಮಗೆ ಸೊರಬ ಮತ್ತು ತೀರ್ಥಹಳ್ಳಿ ಎರಡು ಕ್ಷೇತ್ರಗಳು ಬಿಜೆಪಿ ಗೆಲ್ಲಬೇಕು ಈ ಹಿನ್ನೆಯಲ್ಲಿ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂದು ಈ ಸಂದರ್ಭದಲ್ಲಿ ಹೇಳಿದರು.

ಈ ಸಮಯದಲ್ಲಿ ಆನಂದಪುರ ಶಕ್ತಿ ಕೇಂದ್ರದ ಅಧ್ಯಕ್ಷರಾದ ಶಾಂತಕುಮಾರ ಜಿಲ್ಲಾ ಬಿಜೆಪಿ ಸೋಷಿಯಲ್ ಮೀಡಿಯಾ ಸಹ ಸಂಚಾಲಕ ಹೆಚ್ ಆರ್ .ತೀರ್ಥೇಶ್ .ಬಿಜೆಪಿ ಮುಖಂಡರಾದ ಹೂವಪ್ಪ ಮತ್ತು ಮೆಣಸೆ ಆನಂದ .ಹಾಲಪ್ಪ ಅವರು ಉಪಸ್ಥಿತರಿದ್ದರು.

English summary
Former minister and BJP leader Hartal Halappa accepted Yeddyurappa decision to contest from Sagara Constituency. Earlier he wad comtested from Sorabha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X