ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೆಗೌಡರ ಮಗನೇ ಅಲ್ಲ: ಹೆಚ್ ಡಿ ರೇವಣ್ಣ ಸವಾಲು ಹಾಕಿದ್ದು ಯಾರಿಗೆ ?
ಹಾಸನ, ಸೆಪ್ಟೆಂಬರ್ 21: ಲೋಕಸಭಾ ಚುನಾವಣೆಯಲ್ಲಿ 2 ಲಕ್ಷ ಅಂತರದಿಂದ ಪ್ರಜ್ವಲ್ ರೇವಣ್ಣ ಗೆಲ್ಲಬೇಕಿತ್ತು ಆದರೆ ಕೆಲವರ ಕುತಂತ್ರದಿಂದ ಸೋಲು ಅನುಭವಿಸಬೇಕಾಯಿತು ಮುಂದಿನ ದಿನಗಳಲ್ಲಿ ಬಡ್ಡಿ ಸಮೇತ ತೀರಿಸುವ ಕಾಲ ಹತ್ತಿರದಲ್ಲಿದೆ ಎಂದು ಎದುರಾಳಿಗೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಟಾಂಗ್ ನೀಡಿದರು.
ಹಾಸನ ಜಿಲ್ಲೆಯ ಆಲೂರಿನಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಇನ್ನೂ ಮೂರು ವರ್ಷ ಸ್ವಲ್ಪ ಸುಮ್ಮನಿರಿ, ನನಗೆ ಕೊಟ್ಟಿದ್ದನ್ನ ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗನೇ ಅಲ್ಲ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಿಡಿಕಾರಿದ್ದಾರೆ.

ದೇವೇಗೌಡರ ಕುಟುಂಬ ಇಂತಹ ನೂರಾರು ತನಿಖೆ ಎದುರಿಸಿದೆ ಗೆದ್ದಿದ್ದೀವಿ.ದೇವೇಗೌಡರು ನಂಬಿದ ಕೆಲವು ಮುಖಂಡರು ಬೆನ್ನಿಗೆ ಚಾಕು ಹಾಕಿದ್ದಾರೆ ಅದರಲ್ಲಿ ಸಣ್ಣದೊಂದು ಚುನಾವಣೆ ಎದುರಿಸದ ಹೆಚ್. ಕೆ. ಜವರೇಗೌಡ ಅವರನ್ನು ರಾಜ್ಯಸಭೆ ಸದಸ್ಯರಾಗಿ ಮಾಡಲಾಗಿತ್ತು. ಅವರು ಏನು ಮಾಡಿದರು ಈಗ ಎಲ್ಲಿದ್ದಾರೆ ಇರುವ ಪಕ್ಷದಲ್ಲಿ ಏನು ಮಾಡ್ತಿದ್ದಾರೆ ಎಂದು ನಿಮಗೆ ಗೊತ್ತಿದೆ ಎಂದರು.
ಇನ್ನು 15-20 ವರ್ಷಗಳಿಂದ ನೆನ್ನೆ ಮೊನ್ನೆವರೆಗೂ ನಮ್ಮ ಜೊತೆ ಇದ್ದು ಈಗ ಗಿರಾಕಿ ಬೇರೆ ಪಕ್ಷಕ್ಕಾಗಿ ನಮ್ಮ ಬಗ್ಗೆ ಮಾತನಾಡುತ್ತಿವೆ ಮುಂದಿನ ಮೂರು ವರ್ಷ ಕಳೆಯಲಿ ಅವರು ಯಾವ ಸ್ಥಿತಿಗೆ ಕಳುಹಿಸುತ್ತೇನೆಂದು ನೀವೇ ನೋಡುತ್ತೀರಿ ಎಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದ್ರು.
ಹಾಸನದಲ್ಲಿ ಹೆಚ್.ಎಸ್ ಪ್ರಕಾಶನನ್ನು ನಾಲ್ಕು ಬಾರಿ ಗೆಲ್ಲಿಸಿದ್ದರು. 2013ರಲ್ಲಿ ಪ್ರಕಾಶ್ಗೆ ಸೀಟ್ ಕೊಡಿಸಿಕೊಂಡು ಬಂದೆ, ಅಲ್ಪಸಂಖ್ಯಾತರಿಂದಾಗಿ ಪ್ರಕಾಶ್ ಸೋತರು ಎಂದು ಹೇಳಿದ್ದಾರೆ. 2023ರ ಚುನಾವಣೆಯಲ್ಲಿ ಹಾಸನದಲ್ಲಿ ಐವತ್ತು ಸಾವಿರ ವೋಟಿಗೆ ಒಂದು ವೋಟು ಕಡಿಮೆಯಾದರೆ ರಾಜೀನಾಮೆ ಕೊಡ್ತಿನಿ ಅಂಥ ಚಾಲೆಂಜ್ ಹಾಕಿದ್ದರು. ಆ ಚುನಾವಣೆಗೆ ಸ್ವರೂಪ್ ನಿಲ್ಲಲು ಪ್ರಯತ್ನಪಟ್ಟ, ಆ ಚುನಾವಣೆಯಲ್ಲಿ ನನ್ನ ಹೆಂಡತಿಯನ್ನು ನಿಲ್ಲಿಸಲು ನಾನೇನು ದಡ್ಡನಲ್ಲ. ನಾನೇ ಅವರನ್ನು ಬಿಟ್ಟಿದ್ದೆ, ರೇವಣ್ಣನೇ ಬಂದು ನಿಲ್ಲಲಿ ಎಂದಾಗ ಯಾರನ್ನಾದರೂ ಬಿಡಬೇಕಲ್ಲ. ಅದಕ್ಕೆ ಸ್ವರೂಪ್ ಅವರನ್ನೇ ನಿಲ್ಲಿಸಬೇಕಾಯಿತು ಎಂದಿದ್ದಾರೆ.
ಹಾಸನ ಕ್ಷೇತ್ರದ ಗೆಲುವಿನ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿದ್ದರಿಂದ ಸಕಲೇಶಪುರದಲ್ಲಿ ಸೋಲಬೇಕಾಯಿತು. ದೇವೇಗೌಡರು, ಕುಮಾರಣ್ಣ, ರೇವಣ್ಣ ನಿಮ್ಮಂತಹ ಪುಣ್ಯಾತ್ಮರಿಂದ ಉಳಿದಿದ್ದಾರೆ. ಪಾಪ ಪ್ರಜ್ವಲ್ಗೂ ಗೊತ್ತಾಗಲ್ಲ, ಅವನು ಒಳ್ಳೆಯ ಹುಡುಗ. ನಮ್ಮ ದುಡ್ಡು ತಗೊಂಡು ಅದನ್ನು ತಗೊಂಡು ಬೇರೆ ಎಲ್ಲೋ ಹಾಕಿದ್ದರು. ಅವರೆಲ್ಲಾ ನನ್ನ ಕೈಗೆ ಸಿಗದೇ ಎಲ್ಲಿಗೆ ಹೋಗುತ್ತಾರೆ. ಇನ್ನೂ ಮೂರು ವರ್ಷ ಸ್ವಲ್ಪ ಸುಮ್ಮನಿರಿ. ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೆಗೌಡರ ಮಗನೇ ಅಲ್ಲ ಎಂದು ತಿರುಗೇಟು ನೀಡಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications