ಸಚಿವ ಶಿವರಾಜ ತಂಗಡಗಿ ಕಪಾಳಕ್ಕೆ ಹೊಡೆಯುವುದು ಕೇವಲ ಒಂದು ನಿಮಿಷದ ಕೆಲಸ: ಜನಾರ್ದನ ರೆಡ್ಡಿ ಹೀಗೆ ಹೇಳಿದ್ಯಾಕೆ?
ಕೊಪ್ಪಳ, ಏಪ್ರಿಲ್ 09: ಮೋದಿ ಮೋದಿ ಎನ್ನುವವರ ಕಪಾಳಕ್ಕೆ ಹೊಡಿಯಿರಿ ಎನ್ನುವ ಸಚಿವ ಶಿವರಾಜ ತಂಗಡಗಿ ಕಪಾಳಕ್ಕೆ ಹೊಡೆಯುವುದು ಕೇವಲ ಒಂದು ನಿಮಿಷದ ಕೆಲಸ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದರು.
ಮೋದಿ ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡಿಯಿರಿ ಎನ್ನುವ ಸಚಿವ ಶಿವರಾಜ್ ತಂಗಡಗಿಗೆ ಬಹಿರಂಗ ಸಭೆಯಲ್ಲಿ ಸಚಿವ ಶಿವರಾಜ್ ತಂಗಡಗಿ ವಿರುದ್ದ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು, ಪ್ರತಿಯೊಬ್ಬರ ಮನೆಯಲ್ಲಿ ತಂಗಡಗಿ ಬಗ್ಗೆ ಕೆಟ್ಟ ಭಾವನೆ ಮೂಡಿದೆ. ಕನಕಗಿರಿ ಕ್ಷೇತ್ರದ ಗೌರವ ಹೋಗುವ ರೀತಿಯಲ್ಲಿ ತಂಗಡಗಿ ನಡೆದುಕೊಂಡಿದ್ದಾನೆ. ಅವನಿಗೆ ಬುದ್ದಿ ಕಲಿಸೋ ರೀತಿಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕಾಗಿದೆ ಎಂದರು.

ಅವನಿಗೆ ಕಪಾಳಕ್ಕೆ ಬಾರಿಸಲು ಎಲ್ಲರೂ ತೀರ್ಮಾನ ಮಾಡಿದ್ರೆ ಅದೇನು ದೊಡ್ಡ ವಿಚಾರವಲ್ಲ. ತಂಗಡಗಿಯ ದುರಂಹಕಾರ ಮಾತಿಗೆ ನಾವು ಮತಗಳ ಮುಖಾಂತರ ಉತ್ತರ ಕೊಡಬೇಕಿದೆ.ಮೋದಿ ಮೋದಿ ಸ್ಮರಣೆ ಮಾಡುವ ಮೂಲಕ ನಾವು ಮತಹಾಕಬೇಕಿದೆ.ಇದ್ರಿಂದ ತಂಗಡಗಿ ಗೌರವ ಹೋಗಿ, ಮಂತ್ರಿ ಸ್ಥಾನ ಕಳೆದುಕೊಂಡು ತಂಗಡಗಿ ಮನೆಗೆ ಹೋಗ್ತಾರೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ನಿಲ್ಲಿಸ್ತೇನೆ ಅಂದ್ರೆ ನಾವು ಸುಲಭವಾಗಿ ಬಿಡಲ್ಲಾ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಬೀದಿಗೆ ತಂದು ಕೇಳ್ತೇವೆ. ಮೊದಲು ನಾನು ಒಬ್ಬನೇ ಇದ್ದೆ, ಇದೀಗ ನಮ್ಮ ಬಲ ಹೆಚ್ಚಾಗಿದೆ. ಗ್ಯಾರಂಟಿ ಹೆಸರಲ್ಲಿಯೇ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಇದೀಗ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸ್ತೇನೆ ಅನ್ನೋಕೆ ಹೇಗೆ ಬರುತ್ತದೆ ಎಂದು ವಾಗ್ದಾಳಿ ನಡೆಸಿದರು.
ಇದು ಲೋಕಸಭಾ ಚುನಾವಣೆ ರಾಜ್ಯದ ಚುನಾವಣೆ ಅಲ್ಲ. ಸೋನಿಯಾ ಗಾಂಧಿ ಸೋಲ್ತೇನೆ ಅಂತ ತಿಳಿದು ರಾಜ್ಯಸಭೆಗೆ ಹೋಗಿದ್ದಾರೆ. ರಾಹುಲ್ ಗಾಂಧಿಗೆ ಕೂಡಾ ಮತ್ತೆ ಗೆಲ್ಲುತ್ತೇನೋ ಇಲ್ವೋ ಅನ್ನೋ ಗಾಬರಿ ಇದೆ. ಪಲ್ಲಕ್ಕಿಯಲ್ಲಿ ದೇವರ ಮೂರ್ತಿಯಿದ್ದರೆ ನಾವು ಕೈ ಮುಗಿತೇವೆ. ಬಿಜೆಪಿ ಪಲ್ಲಕ್ಕಿಯಲ್ಲಿ ಮೋದಿ ಅನ್ನೋ ಮೂರ್ತಿಯಿದೆ. ಆದರೆ, ಕಾಂಗ್ರೆಸ್ ಪಲ್ಲಕ್ಕಿಯಲ್ಲಿ ಯಾರ ಮೂರ್ತಿಯೂ ಇಲ್ಲ. ಕಾಂಗ್ರೆಸ್ ಗೆ ತಮ್ಮ ಪ್ರಧಾನಿ ಅಭ್ಯರ್ಥಿ ಅಂತ ಘೋಷಿಸಲು ಧೈರ್ಯವಿಲ್ಲ ಎಂದು ಜನಾರ್ದನ ರೆಡ್ಡಿ ಹೇಳಿದರು.
-
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಸರ್ಕಾರ ಸಾಲದ ಮೇಲೆ ನಡೆಯುತ್ತಿದೆ ಎಂಬುದು ಸುಳ್ಳು: ವಿರೋಧ ಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications