ಇನ್ನೇನಿದ್ದರೂ ಆಪರೇಷನ್ ಕಮಲ ಖಚಿತ: ಮುರುಗೇಶ್ ನಿರಾಣಿ
ಬೆಂಗಳೂರು, ಅಕ್ಟೋಬರ್ 25: ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಿಜೆಪಿ ಇದೀಗ ಲೋಕಸಭಾ ಚುನಾವಣೆಗೆ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಠಕ್ಕರ್ ಕೊಡಲು ಬಿಜೆಪಿ ಮುಂದಾಗಿದೆ.
ಹೌದು, ಈ ಕುರಿತು ಮಾಜಿ ಸಚಿವ ಮುರುಗೇಶ್ ನಿರಾಣಿ ಮಾತನಾಡಿ, ಆಪರೇಷನ್ ಹಸ್ತ ಎಂದು ಕೆಲ ಕಾಂಗ್ರೆಸ್ ನಾಯಕರು ಹೇಳುತ್ತಿರುವುದು ಹಾಸ್ಯಾಸ್ಪದವಾಗಿದ್ದು, ಇನ್ನೇನಿದ್ದರೂ ಆಪರೇಷನ್ ಕಮಲ ಖಚಿತ ಎಂದು ಆಪರೇಚನ್ ಕಮಲದ ಕುರಿತು ಸೂಚನೆ ನೀಡಿದ್ದಾರೆ.

ಇನ್ನೂ 2024 ರ ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿವೆ. ಕಾಂಗ್ರೆಸ್ ನಲ್ಲಿ ಈಗಾಗಲೇ ಅಸಮಾಧಾನ ಸ್ಟೋಟಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಐದು ವರ್ಷ ಇರಲೆಂಬುದು ನಮ್ಮ ಆಶಯ. ಆದರೆ, ಬಿಟ್ಟಿ ಭಾಗ್ಯಗಳನ್ನು ನೀಡಿ ತಮ್ಮ ತಮ್ಮೊಳಗೆ ಕಚ್ಚಾಡುತ್ತಿರುವ ಕಾಂಗ್ರೆಸ್ ಮುಖಂಡರಿಂದಲೇ ಸರ್ಕಾರ ನೆಲಕಚ್ಚುವ ಸಮಯ ದೂರವಿಲ್ಲ ಎಂದು ಸರ್ಕಾರ ಪತನಗೊಳಲಿದೆ ಎಂದು ಹೇಳಿದ್ದಾರೆ.
ಇನ್ನೂ ರಾಜ್ಯ ಸರ್ಕಾರದ ಗ್ಯಾರಂಟಿ ಘೋಷಣೆಯ ವಿರುದ್ದ ವಾಗ್ದಾಳಿ ನಡೆಸಿದ ಅವರು, ಸರ್ಕಾರ ಚುನಾವಣೆಗೂ ಮುನ್ನ ಘೋಷಿಸಿದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ವಿಷಯದಲ್ಲಿ ಸಹ ಸಾಕಷ್ಟುಗೊಂದಲ ಸೃಷ್ಟಿಸಿದೆ. ಹಣವನ್ನು ಗ್ಯಾರಂಟಿಗೆ ಕ್ರೋಢೀಕರಿಸುವ ಭರದಲ್ಲಿ ಜನಸಾಮಾನ್ಯರಿಗೆ ಆರ್ಥಿಕ ಹೊರೆ ಹಾಕಿದೆ. ಅಬಕಾರಿ ಶುಲ್ಕ, ವಿದ್ಯುತ್ ಬಿಲ್ ಏರಿಕೆ ಸೇರಿದಂತೆ ಇತರೆ ರೀತಿಯಲ್ಲಿ ತೆರಿಗೆ ಹಾಕಿ ಒಂದು ರೀತಿಯಲ್ಲಿ ಎಡಗೈಯಿಂದ ಕಸಿದುಕೊಂಡು ಬಲಗೈಗೆ ಕೊಡುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
-
ಸಿದ್ದರಾಮಯ್ಯ ಬಜೆಟ್; ಹಣಕಾಸು ಶಿಸ್ತು, AI ಉತ್ತೇಜನ ಸ್ವಾಗತಾರ್ಹ:ರಂಗಸ್ವಾಮಿ ಮೂಕನಹಳ್ಳಿ -
ಯಾವ ಧರ್ಮವೂ ಧ್ವೇಷ ಬೋಧಿಸಲ್ಲ: ಸಮಾನತೆ ಸ್ಥಾಪಿಸುವುದೇ ಯೋಜನೆಗಳ ಗುರಿ: ಸಿದ್ದರಾಮಯ್ಯ -
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ












Click it and Unblock the Notifications