ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುತೂಹಲ ಮೂಡಿಸಿದ ಎಸ್‌.ಎಂ.ಕೃಷ್ಣ, ರಮೇಶ್ ಜಾರಕಿಹೊಳಿ ಭೇಟಿ

|
Google Oneindia Kannada News

Recommended Video

ಯಡಿಯೂರಪ್ಪನನ್ನು ಬಿಟ್ಟು S M ಕೃಷ್ಣ ಹಿಂದೆ ಬಿದ್ದ ರಮೇಶ್ ಜಾರಕಿಹೊಳಿ..!

ಬೆಂಗಳೂರು, ಮೇ 26 : ಮಹತ್ವದ ಬೆಳವಣಿಗೆಯೊಂದರಲ್ಲಿ ಗೋಕಾಕ್ ಕ್ಷೇತ್ರದ ಕಾಂಗ್ರೆಸ್‌ ಶಾಸಕ ರಮೇಶ್ ಜಾರಕಿಹೊಳಿ ಅವರು ಎಸ್‌.ಎಂ.ಕೃಷ್ಣ ಅವರನ್ನು ಭೇಟಿಯಾದರು. ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಅವರು ಸಹ ಆಗ ಎಸ್‌.ಎಂ.ಕೃಷ್ಣ ನಿವಾಸದಲ್ಲಿದ್ದರು.

ಭಾನುವಾರ ಸದಾಶಿವ ನಗರದ ನಿವಾಸದಲ್ಲಿ ರಮೇಶ್ ಜಾರಕಿಹೊಳಿ ಅವರು ಎಸ್.ಎಂ.ಕೃಷ್ಣ ಭೇಟಿ ಮಾಡಿದರು. ಕಾಂಗ್ರೆಸ್ ನಾಯಕರ ಮೇಲೆ ಅಸಮಾಧಾನಗೊಂಡಿರುವ ಅವರು, ಎಸ್.ಎಂ.ಕೃಷ್ಣ ಭೇಟಿ ಮಾಡಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ರಮೇಶ್ ಜಾರಕಿಹೊಳಿ ತಂತ್ರದಿಂದಾಗಿ ಕಾಂಗ್ರೆಸ್‌ಗೆ ಹಿನ್ನಡೆ?ರಮೇಶ್ ಜಾರಕಿಹೊಳಿ ತಂತ್ರದಿಂದಾಗಿ ಕಾಂಗ್ರೆಸ್‌ಗೆ ಹಿನ್ನಡೆ?

Former minister Ramesh Jarakiholi meets SM Krinshna

ರಮೇಶ್ ಜಾರಕಿಹೊಳಿ ಅವರ ಜೊತೆ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಸುಧಾಕರ್ ಅವರು ಸಹ ಎಸ್.ಎಂ.ಕೃಷ್ಣ ಭೇಟಿಯಾದರು. ಭೇಟಿಯ ಹಿಂದೆ ಯಾವುದೇ ರಾಜಕೀಯ ಕಾರಣಗಳಿಲ್ಲ ಎಂದು ಉಭಯ ಶಾಸಕರು ಸ್ಪಷ್ಟಪಡಿಸಿದರು.

ಜಾರಕಿಹೊಳಿ ನೇತೃತ್ವದ ಅತೃಪ್ತರ ಸಭೆ: ಸಾಮೂಹಿಕ ರಾಜೀನಾಮೆಗೆ ರೆಡಿ?ಜಾರಕಿಹೊಳಿ ನೇತೃತ್ವದ ಅತೃಪ್ತರ ಸಭೆ: ಸಾಮೂಹಿಕ ರಾಜೀನಾಮೆಗೆ ರೆಡಿ?

ಮಾಧ್ಯಮಗಳ ಜೊತೆ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು, 'ಇದು ರಾಜಕೀಯ ಭೇಟಿಯಲ್ಲ. ಕರ್ನಾಟಕದಲ್ಲಿ ಬಿಜೆಪಿ 25 ಸ್ಥಾನಗಳಲ್ಲಿ ಜಯಗಳಿಸಿದ್ದಕ್ಕೆ ಅಭಿನಂದನೆ ಸಲ್ಲಿಸಲು ಬಂದಿದ್ದೇವೆ' ಎಂದು ಹೇಳಿದರು.

ಆರ್.ಅಶೋಕ್ ಅವರು ಮಾತನಾಡಿ, 'ಪಕ್ಷದ ವಿಚಾರವನ್ನು ಮಾತನಾಡಲು ನಾನು ಆಗಮಿಸಿದ್ದೆ. ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ, ಡಾ.ಸುಧಾಕರ್ ಅವರ ಜೊತೆ ಯಾವುದೇ ಸ್ನೇಹವಿಲ್ಲ' ಎಂದು ಸ್ಪಷ್ಟಪಡಿಸಿದರು.

English summary
Gokak Congress MLA Ramesh Jarakiholi met the former union minister S.M.Krishna. Ramesh Jarakiholi upset with party leaders after dropping him from H.D.Kumaraswamy cabinet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X