ಕುತೂಹಲ ಮೂಡಿಸಿದ ಎಸ್.ಎಂ.ಕೃಷ್ಣ, ರಮೇಶ್ ಜಾರಕಿಹೊಳಿ ಭೇಟಿ
Recommended Video
ಬೆಂಗಳೂರು, ಮೇ 26 : ಮಹತ್ವದ ಬೆಳವಣಿಗೆಯೊಂದರಲ್ಲಿ ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಅವರು ಎಸ್.ಎಂ.ಕೃಷ್ಣ ಅವರನ್ನು ಭೇಟಿಯಾದರು. ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್ ಅವರು ಸಹ ಆಗ ಎಸ್.ಎಂ.ಕೃಷ್ಣ ನಿವಾಸದಲ್ಲಿದ್ದರು.
ಭಾನುವಾರ ಸದಾಶಿವ ನಗರದ ನಿವಾಸದಲ್ಲಿ ರಮೇಶ್ ಜಾರಕಿಹೊಳಿ ಅವರು ಎಸ್.ಎಂ.ಕೃಷ್ಣ ಭೇಟಿ ಮಾಡಿದರು. ಕಾಂಗ್ರೆಸ್ ನಾಯಕರ ಮೇಲೆ ಅಸಮಾಧಾನಗೊಂಡಿರುವ ಅವರು, ಎಸ್.ಎಂ.ಕೃಷ್ಣ ಭೇಟಿ ಮಾಡಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ರಮೇಶ್ ಜಾರಕಿಹೊಳಿ ತಂತ್ರದಿಂದಾಗಿ ಕಾಂಗ್ರೆಸ್ಗೆ ಹಿನ್ನಡೆ?
ರಮೇಶ್ ಜಾರಕಿಹೊಳಿ ಅವರ ಜೊತೆ ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಸುಧಾಕರ್ ಅವರು ಸಹ ಎಸ್.ಎಂ.ಕೃಷ್ಣ ಭೇಟಿಯಾದರು. ಭೇಟಿಯ ಹಿಂದೆ ಯಾವುದೇ ರಾಜಕೀಯ ಕಾರಣಗಳಿಲ್ಲ ಎಂದು ಉಭಯ ಶಾಸಕರು ಸ್ಪಷ್ಟಪಡಿಸಿದರು.
ಜಾರಕಿಹೊಳಿ ನೇತೃತ್ವದ ಅತೃಪ್ತರ ಸಭೆ: ಸಾಮೂಹಿಕ ರಾಜೀನಾಮೆಗೆ ರೆಡಿ?
ಮಾಧ್ಯಮಗಳ ಜೊತೆ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು, 'ಇದು ರಾಜಕೀಯ ಭೇಟಿಯಲ್ಲ. ಕರ್ನಾಟಕದಲ್ಲಿ ಬಿಜೆಪಿ 25 ಸ್ಥಾನಗಳಲ್ಲಿ ಜಯಗಳಿಸಿದ್ದಕ್ಕೆ ಅಭಿನಂದನೆ ಸಲ್ಲಿಸಲು ಬಂದಿದ್ದೇವೆ' ಎಂದು ಹೇಳಿದರು.
#Bengaluru- BJP leader R Ashok: I came to meet SM Krishna Ji to discuss party matters. I have no friendship with Congress leaders Ramesh Jarkiholi & Dr Sudhakar. pic.twitter.com/tkqjG1Wl31
— ANI (@ANI) May 26, 2019
ಆರ್.ಅಶೋಕ್ ಅವರು ಮಾತನಾಡಿ, 'ಪಕ್ಷದ ವಿಚಾರವನ್ನು ಮಾತನಾಡಲು ನಾನು ಆಗಮಿಸಿದ್ದೆ. ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ, ಡಾ.ಸುಧಾಕರ್ ಅವರ ಜೊತೆ ಯಾವುದೇ ಸ್ನೇಹವಿಲ್ಲ' ಎಂದು ಸ್ಪಷ್ಟಪಡಿಸಿದರು.