ರಮೇಶ್ ಜಾರಕಿಹೊಳಿ 'ಸಿಡಿ' ಪ್ರಕರಣಕ್ಕೆ ತುಮಕೂರಿನಲ್ಲಿ ಬಿಗ್ ಟ್ವಿಸ್ಟ್
ಮಾಜಿ ರಾಜ್ಯ ಜಲ ಸಂಪನ್ಮೂಲ ಖಾತೆಯ ಸಚಿವ ರಮೇಶ್ ಜಾರಕಿಹೊಳಿ ಪ್ರಕರಣ ಭಾನುವಾರ (ಜುಲೈ 18) ಹೊಸ ತಿರುವನ್ನು ಪಡೆದುಕೊಂಡಿದೆ. ಈ ವಿದ್ಯಮಾನ ಇಡೀ ಪ್ರಕರಣಕ್ಕೆ ರಾಜಕೀಯ ಬಣ್ಣ ಪಡೆದುಕೊಳ್ಳುವ ಸಾಧ್ಯತೆಯಿಲ್ಲದಿಲ್ಲ.
Recommended Video
ತಮ್ಮ ಈ ಸಿಡಿ ಪ್ರಕರಣದ ಹಿಂದೆ ಬರೀ ರಾಜಕೀಯವೇ ತುಂಬಿದೆ ಎಂದು ರಮೇಶ್ ಜಾರಕಿಹೊಳಿ ಹಲವು ಬಾರಿ ಹೇಳಿದ್ದರು. ಬಿಜೆಪಿ ಮುಖಂಡರ ವಿರುದ್ದವೇ ಜಾರಕಿಹೊಳಿ ಅಸಮಾಧಾನ ವ್ಯಕ್ತ ಪಡಿಸಿದ್ದರು.
ಒಂದು ಹಂತದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲೂ ಚಿಂತನೆ ನಡೆಸಿದ್ದ ಜಾರಕಿಹೊಳಿ, ಎರಡೆರಡು ಬಾರಿ ಮುಂಬೈನಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿದ್ದರು.
ಇದೀಗ, ಭಾನುವಾರ ನಡೆದ ಬೆಳವಣಿಗೆಯೊಂದರಲ್ಲಿ ಸಿಡಿ ಕೇಸಿನಲ್ಲಿ ಪ್ರಮುಖವಾಗಿ ಕೇಳಿ ಬರುತ್ತಿದ್ದ ಹೆಸರು ಶ್ರವಣ್ ಮತ್ತು ನರೇಶ್ ಗೌಡ ಅವರದ್ದು. ಅದರಲ್ಲಿ ನರೇಶ್ ಗೌಡ ಅವರು ಕಾಂಗ್ರೆಸ್ಸಿಗೆ ಸೇರ್ಪಡೆಯಾದ ವಿದ್ಯಮಾನ ನಡೆದಿದೆ.

ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ನಡುವೆ ಕಂದಕವನ್ನೇ ಸೃಷ್ಟಿಸಿತ್ತು
ಬೆಳಗಾವಿಯ ಪಿಎಲ್ಡಿ ಬ್ಯಾಂಕ್ ಚುನಾವಣೆಯ ಸುತ್ತಮುತ್ತ ನಡೆದ ರಾಜಕೀಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ನಡುವೆ ಕಂದಕವನ್ನೇ ಸೃಷ್ಟಿಸಿತ್ತು. ತದನಂತರ, ಇಬ್ಬರು ನಾಯಕರು ಜಿದ್ದಿಗೆ ಬಿದ್ದ ನಂತರ, ಕುಮಾರಸ್ವಾಮಿ ಸರಕಾರದ ಪತನವೂ ಆಯಿತು, ಬಿಎಸ್ವೈ ಸರಕಾರ ಅಧಿಕಾರಕ್ಕೂ ಬಂತು. ಈ ವೇಳೆ, ಜಾರಕಿಹೊಳಿ ಸಿಡಿ ಪ್ರಕರಣ ರಾಜ್ಯ ರಾಜಕೀಯದಲ್ಲಿ ತಲ್ಲಣವನ್ನು ಮೂಡಿಸಿತ್ತು.

ಮಹಾನ್ ನಾಯಕರೊಬ್ಬರ ಕೈವಾಡವಿದೆ ಎಂದು ಡಿಕೆಶಿ ಹೆಸರು ಹೇಳದೇ, ಜಾರಕಿಹೊಳಿ ಆರೋಪ
ಈ ಸಿಡಿ ಪ್ರಕರಣದಲ್ಲಿ ಮಹಾನ್ ನಾಯಕರೊಬ್ಬರ ಕೈವಾಡವಿದೆ ಎಂದು ಡಿಕೆಶಿ ಹೆಸರು ಹೇಳದೇ, ಜಾರಕಿಹೊಳಿ ಗಂಭೀರ ಆರೋಪವನ್ನು ಮಾಡಿದ್ದರು. ಸಿಡಿಯಲ್ಲಿ ಇದ್ದರು ಎನ್ನಲಾಗುತ್ತಿರುವ ಮಹಿಳೆ ಮತ್ತು ಇದರ ಜೊತೆಗೆ ಶ್ರವಣ್ ಮತ್ತು ನರೇಶ್ ಗೌಡ ಅವರ ಹೆಸರು ತುಳುಕು ಹಾಕಲಾಗುತ್ತಿತ್ತು. ಪೊಲೀಸರ ಹರಸಾಹಸ ಪಟ್ಟರೂ, ನರೇಶ್ ಗೌಡ್ ಅವರನ್ನು ಟ್ರೇಸ್ ಮಾಡಲು ಆಗಿರಲಿಲ್ಲ.

ತುಮಕೂರಿನ ಶಿರಾದ ಭುವನಹಳ್ಳಿಯಲ್ಲಿ ನರೇಶ್ ಗೌಡ ಪ್ರತ್ಯಕ್ಷರಾಗಿದ್ದಾರೆ
ಭಾನುವಾರ, ತಮ್ಮ ಸ್ವಂತ ಊರಾದ ತುಮಕೂರಿನ ಶಿರಾದ ಭುವನಹಳ್ಳಿಯಲ್ಲಿ ನರೇಶ್ ಗೌಡ ಪ್ರತ್ಯಕ್ಷರಾಗಿದ್ದಾರೆ. ಇವರು ಗ್ರಾಮಕ್ಕೆ ಆಗಮಿಸುತ್ತಿದ್ದಂತೆಯೇ ಅವರಿಗೆ ಗ್ರಾಮಸ್ಥರಿಂದ ಅದ್ದೂರಿ ಸ್ವಾಗತ ದೊರಕಿದೆ. ಭುವನಹಳ್ಳಿಯಲ್ಲಿ ತಳಿರು ತೋರಟ ಕಟ್ಟಿ, ಪಟಾಕಿ ಸಿಡಿಸಿ, ಯುವ ಕಾಂಗ್ರೆಸ್ ಮುಖಂಡ ಎಂದು ಬ್ಯಾನರ್ ಹಾಕಿ ಅವರನ್ನು ಸ್ವಾಗತಿಸಲಾಗಿದೆ.

ಮುಂದಿನ ದಿನಗಳಲ್ಲಿ ಇದು ರಾಜಕೀಯ ಟ್ವಿಸ್ಟ್ ಪಡೆದುಕೊಳ್ಳುವ ಸಾಧ್ಯತೆ
ಯುವ ಕಾಂಗ್ರೆಸ್ ಮುಖಂಡ ಎಂದು ಹಾಕಿರುವ ಬ್ಯಾನರಿನಲ್ಲಿ ಸಿದ್ದರಾಮಯ್ಯ, ಡಿಕೆಶಿ ಮತ್ತು ಟಿ.ಬಿ.ಜಯಚಂದ್ರ ಅವರ ಭಾವಚಿತ್ರ ಕೂಡಾ ಇದೆ. ಸಿಡಿ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡರ ಕೈವಾಡವಿದೆ ಎಂದು ರಮೇಶ್ ಜಾರಕಿಹೊಳಿ ಆರೋಪವನ್ನು ಮಾಡುತ್ತಲೇ ಇದ್ದರು. ಈಗ, ನರೇಶ್ ಗೌಡ ಅವರು ಕಾಂಗ್ರೆಸ್ ಯುವ ಮುಖಂಡ ಎಂದು ಅವರನ್ನು ಸ್ವಾಗತಿಸಿದ್ದು, ಮುಂದಿನ ದಿನಗಳಲ್ಲಿ ಇದು ರಾಜಕೀಯ ಟ್ವಿಸ್ಟ್ ಪಡೆದುಕೊಳ್ಳುವ ಸಾಧ್ಯತೆಯಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications