ರಾಜಹಂಸಗಡದಲ್ಲಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆ: ರಮೇಶ್ ಜಾರಕಿಹೊಳಿ V/S ಲಕ್ಷ್ಮಿ ಹೆಬ್ಬಾಳ್ಕರ್
ಶಿಷ್ಟಾಚಾರ ಪಾಲಿಸುವುದಾದರೆ ರಾಜಹಂಸಗಡದಲ್ಲಿ ನಾಳೆಯೇ ಶಿವಾಜಿ ಮಹಾರಾಜರ ಮೂರ್ತಿ ಉದ್ಘಾಟನೆ ಮಾಡಲಿ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಬಹಿರಂಗವಾಗಿ ಸವಾಲ್ ಹಾಕಿದ್ದಾರೆ.
ಬೆಳಗಾವಿ,ಫೆಬ್ರವರಿ18: ಚುನಾವಣೆ ಹತ್ತಿರವಾಗುತ್ತಿದ್ದಂತೆ ಒಂದಲ್ಲ ಒಂದು ವಿಚಾರದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಸಾಕಷ್ಟು ವಾಕ್ಸಮಗಳು ನಡೆಯಿತ್ತಿದ್ದು, ಇದೀಗ ಯಳ್ಳೂರು ರಾಜಹಂಸಗಡ ಕೋಟೆಯಲ್ಲಿ ಪ್ರತಿಷ್ಠಾಪಿಸಲು ಹೊರಟಿರುವ ಬೃಹತ್ ಶಿವಾಜಿ ಮೂರ್ತಿ ವಿಚಾರ ಈಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.
ಹೌದು, ಶನಿವಾರ ಮೂರ್ತಿ ಸ್ಥಳಕ್ಕೆ ಸ್ಥಳೀಯ ಬಿಜೆಪಿ ಮುಖಂಡರೊಂದಿಗೆ ಭೇಟಿ ನೀಡಿದ ಶಾಸಕ ರಮೇಶ್ ಜಾರಕಿಹೊಳಿ ಅವರು, ಶಿಷ್ಟಾಚಾರ ಪಾಲಿಸುವುದಾದರೆ ರಾಜಹಂಸಗಡದಲ್ಲಿ ನಾಳೆಯೇ ಶಿವಾಜಿ ಮಹಾರಾಜರ ಮೂರ್ತಿ ಉದ್ಘಾಟನೆ ಮಾಡಲಿ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಬಹಿರಂಗವಾಗಿ ಸವಾಲ್ ಹಾಕಿದ್ದಾರೆ.
ಈ ಕುರಿತು ಪತ್ರಿಕೆಯಲ್ಲಿ ಬಂದ ನಂತರ ನಮಗೆ ಕಾರ್ಯಕ್ರಮದ ಕುರಿತು ಗೊತ್ತಾಗಿದೆ. 2010ರಿಂದ ಕೋಟೆ ಅಭಿವೃದ್ಧಿಯಾಗುತ್ತಿದೆ. ಅಭಿವೃದ್ಧಿ ವಿಚಾರದಲ್ಲಿ ನಮಗೆ ಯಾವುದೇ ಅಭ್ಯಂತರ ಇಲ್ಲ. ಆದರೆ ಇದನ್ನು ಪಕ್ಷದ ಕಾರ್ಯಕ್ರಮ ಮಾಡುವುದಕ್ಕೆ ನಮ್ಮ ವಿರೋಧವಿದೆ. ಇದು ಸರಕಾರಿ ಕಾರ್ಯಕ್ರಮ ಆಗಬೇಕು. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮತ್ತು ಜಿಲ್ಲಾಧಿಕಾರಿ ಜತೆಗೆ ಚರ್ಚಿಸುತ್ತೇನೆ ಎಂದು ಹೇಳಿದರು.

ಇನ್ನೂ ಬಹಿರಂಗ ಚರ್ಚೆಗೆ ಬರುವಂತೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿ, ಬಾಗಿಲು ಕಾಯುವ ಅವನ ಜತೆ ಚರ್ಚೆ ಮಾಡಲ್ಲ. ಬೇಕಾದರೆ ಡಿ.ಕೆ.ಶಿವಕುಮಾರ್ ಜತೆ ನಾನು ಬಹಿರಂಗ ಚರ್ಚೆಗೆ ಸಿದ್ಧ. ಚನ್ನರಾಜ ಹಟ್ಟಿಹೊಳಿ ಅವರ ಬಗ್ಗೆ ಮಾತಾಡುವಷ್ಟು ಸಣ್ಣವನು ನಾನಲ್ಲ ಎಂದು ವ್ಯಂಗ್ಯವಾಡಿದರು.
ಮೋಸದ ಎರಡನೇ ಹೆಸರು ಲಕ್ಷ್ಮೀ ಹೆಬ್ಬಾಳ್ಕರ್: ಸಂಜಯ ಪಾಟೀಲ
ಈ ವೇಳೆ ಮಾಜಿ ಶಾಸಕ ಸಂಜಯ ಪಾಟೀಲ ಮಾತನಾಡಿ, ಛತ್ರಪತಿ ಶಿವಾಜಿ ಮಹಾರಾಜರನ್ನು ದೇವರಂತೆ ನಾವು ಪೂಜಿಸುತ್ತೇವೆ. ಇದಕ್ಕೆ ತಡೆಯೊಡ್ಡುವುದು ನಮ್ಮ ಉದ್ದೇಶ ಇಲ್ಲ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕರನ್ನು ಕರೆಸುತ್ತಿದ್ದಾರೆ. ಪ್ರೋಟೋಕಾಲ್ ಪ್ರಕಾರ ಕಾರ್ಯಕ್ರಮ ಮಾಡುತ್ತಿಲ್ಲ ಎಂದು ಹೇಳಿದರು.

ಈ ಹಿಂದೆ ನಾನು ಶಾಸಕನಾಗಿದ್ದಾಗ ಅಂದಿನ ಸಚಿವ ಜನಾರ್ದನ ರೆಡ್ಡಿ ಅವರನ್ನು ಕರೆದುಕೊಂಡು ಬಂದಿದ್ದೆ. ಆಗ ಅವರು 4 ಕೋಟಿ ರೂ.ಬಿಡುಗಡೆ ಮಾಡಿದ್ದರು. ಇಲ್ಲಿ ನಡೆದುಕೊಂಡು ಬರಲು ಆಗುತ್ತಿರಲಿಲ್ಲ. ಈಗ ಗಾಡಿಗಳು ಬರುವಂತೆ ಆಗಿದೆ. ಇಲ್ಲಿ ಒಂದು ನೀರಿನ ಘಟಕ ನಿರ್ಮಿಸಿದ್ದೇವೆ. ಸಿದ್ದೇಶ್ವರ ದೇವಸ್ಥಾನ ಅಭಿವೃದ್ಧಿ ಪಡಿಸಿದ್ದೇನೆ. ಇದು ನನ್ನ ಕನಸು ಎನ್ನುತ್ತಿರುವ ಶಾಸಕಿಗೆ 2013 ರಿಂದ 2018ರಲ್ಲಿ ಅವರದ್ದೇ ಸರಕಾರ ಇದ್ದಾಗ ಕನಸು ಇರಲಿಲ್ಲವೇ. ಈಗ ಎಲ್ಲಿಂದ ಇವರಿಗೆ ಕನಸು ಬಂತು?" ಎಂದು ಪ್ರಶ್ನಿಸಿದರು.
ಈ ಹಿಂದೆ ಪ್ರವಾಸೋದ್ಯಮ ಸಚಿವರಾಗಿದ್ದ ಸಿ.ಟಿ.ರವಿ ಅವರ ಬಳಿ ನಾನು ಪ್ರಸ್ತಾವನೆ ಸಲ್ಲಿಸಿದ್ದೆ. ಸಿ.ಟಿ.ರವಿ ಅವರು ಮೂರೂವರೆ ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದರು. ಕಾಂಗ್ರೆಸ್ ಸರಕಾರ ಏನೂ ಅನುದಾನ ಕೊಟ್ಟಿಲ್ಲ" ಎಂದರು.
ಒಂದೇ ಒಂದು ರೂ. ಅನುದಾನ ಬಿಡುಗಡೆ ಆಗಿದ್ದರೆ ಅದು ಬಿಜೆಪಿ ಸರಕಾರದಲ್ಲಿಯೇ. ಕಾಂಗ್ರೆಸ್ ಸರಕಾರದಲ್ಲಿ ಯಾವುದೇ ರೀತಿ ಹಣ ಬಿಡುಗಡೆ ಮಾಡಿಲ್ಲ. ಅವರ ಸರಕಾರ ಇದ್ದಾಗ ಅನುದಾನ ಬಿಡುಗಡೆ ಮಾಡಿಸಿಲ್ಲ. ಅವರಂತೆ ನಾನು ಸೆಗಣಿ ತಿನ್ನುವುದಿಲ್ಲ, ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ನಾನು ವಿರೋಧ ಪಡಿಸಿಲ್ಲ. ಮೋಸದ ಎರಡನೇ ಹೆಸರು ಲಕ್ಷ್ಮೀ ಹೆಬ್ಬಾಳ್ಕರ್. ಗ್ರಾಮೀಣ ಕ್ಷೇತ್ರದಲ್ಲಿ ಗಡದೇವರಮಠಗೆ ಟಿಕೆಟ್ ತಪ್ಪಿಸಿ ಅವರಿಗೂ ಮತ್ತು ರಮೇಶ ಜಾರಕಿಹೊಳಿ ಅವರಿಗೂ ಲಕ್ಷ್ಮೀ ಹೆಬ್ಬಾಳ್ಕರ ಮೋಸ ಮಾಡಿದ್ದಾರೆಎಂದು ಸಂಜಯ ಪಾಟೀಲ ಆರೋಪಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications