ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಸೇರ್ಪಡೆ ಫಿಕ್ಸ್? ಯಾವ ಕ್ಷೇತ್ರದಿಂದ ಸ್ಪರ್ಧೆ ಗೊತ್ತಾ?
ಬೆಂಗಳೂರು, ನವೆಂಬರ್ 16: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡ ಬಳಿಕ ಮೈತ್ರಿ ಸರ್ಕಾರದ ವೇಳೆ ಬಿಜೆಪಿ ಸೇರಿದ್ದ ಹಲವು ನಾಯಕರು ಇದೀಗ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಬರಲಿದ್ದಾರೆ ಎನ್ನುವ ಚರ್ಚೆಗಳು ಶುರವಾಗಿದೆ.
ಈಗಾಗಲೇ ಮಾಜಿ ಸಚಿವ ವಿ ಸೋಮಣ್ಣ ಕಾಂಗ್ರೆಸ್ ನತ್ತ ಮುಖ ಮಾಡಿದ ಬೆನ್ನಲ್ಲೇ ಇದೀಗ ಇನ್ನೊಬ್ಬ ಮಾಜಿ ಸಚಿವ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎನ್ನುವ ಚರ್ಚೆ ಇದೀಗ ಮತ್ತೆ ಮುನ್ನಲೆಗೆ ಬಂದಿದೆ. ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವನ್ನ ಎಸ್ ಟಿ ಸೋಮಶೇಖರ್ ಹಾಡಿಹೊಗಳಿದ್ರು.

2013-18 ರ ಅವಧಿಯ ಸಿದ್ದರಾಮಯ್ಯ ಸರ್ಕಾರ ಕೊಟ್ಟ ಅನುದಾನ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳಿಂದ ನಾನು ಎರಡನೇ ಬಾರಿ ಶಾಸಕನಾಗಿ ಆಯ್ಕೆಯಾದೆ. . ಯಾವತ್ತೂ ದ್ವೇಷ ರಾಜಕಾರಣ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಿಷ್ಯ, ಅಭಿಮಾನಿ ನಾನು ಎಂದು ಎಸ್.ಟಿ.ಸೋಮಶೇಖರ್ ಹೇಳಿದ್ರು.
ಇನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಅವರನ್ನ ಕೆಲ ತಿಂಗಳ ಹಿಂದೆಯಷ್ಟೇ ಎಸ್ ಟಿ ಸೋಮಶೇಖರ್ ಭೇಟಿಯಾಗಿ ಪಕ್ಷ ಸೇರ್ಪಡೆ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಈಗಾಗಲೇ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲೂ ಕನಿಷ್ಠ 20 ಕ್ಕೂ ಹೆಚ್ಚು ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನ ಹಾಲಿ ಹಾಗೂ ಮಾಜಿ ಶಾಸಕರಿಗೆ ಕಾಂಗ್ರೆಸ್ ನಾಯಕರು ಗಾಳ ಹಾಕಿದ್ದು, ಬೆಂಗಳೂರು ವ್ಯಾಪ್ತಿಯಲ್ಲಿ ಕನಿಷ್ಠ ಎರಡು ಲೋಕಸಭಾ ಕ್ಷೇತ್ರಗಳನ್ನ ಗೆಲ್ಲುವ ಕಾಂಗ್ರೆಸ್ ಗಾಳ ಹಾಕಿದೆ.
ಈಗಾಗಲೇ ಮಾಜಿ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಂಸದ ಡಿ ವಿ ಸದಾನಂದಗೌಡ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದು, ಈ ಕ್ಷೇತ್ರವನ್ನ ಗೆಲ್ಲಲ್ಲು ಕಾಂಗ್ರೆಸ್ ಭರ್ಜರಿ ತಯಾರಿ ನಡೆಸಿದ್ದು, ಯಶವಂತಪುರ ಕ್ಷೇತ್ರದಲ್ಲಿ ಭರ್ಜರಿಯಾಗಿ ಗೆಲುವು ಸಾಧಿಸಿದ್ದು, ಹೆಚ್ಚು ವರ್ಚಸ್ಸನ್ನ ಹೊಂದಿರುವ ಎಸ್ ಟಿ ಸೋಮಶೇಖರ್ ಅವರನ್ನ ಕಾಂಗ್ರೆಸ್ ಕರೆತರುವ ಪ್ರಯತ್ನ ನಡೆದಿದ್ದು, ಎರಡು ಆಫರ್ ಗಳನ್ನ ಮುಂದಿಟ್ಟು ಕಾಂಗ್ರೆಸ್ ಗೆ ಕರೆತರುವ ಮಾತುಕತೆ ನಡೆದಿದೆ ಎಂದು ಹೇಳಲಾಗಿದೆ.
ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಶಾಸಕರಾಗಿರುವ ಎಸ್ ಟಿ ಸೋಮಶೇಖರ್ ಅವರನ್ನ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಕಾಂಗ್ರೆಸ್ ನಾಯಕರು ಲೆಕ್ಕಾಚಾರ ಹಾಕಿಕೊಂಡಿದ್ದಾರೆ. ಯಶವಂತಪುರ ವಿಧಾನಸಭೆ ಕ್ಷೇತ್ರ ಬೆಂಗಳೂರು ಉತ್ತರ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿದೆ. ಹೀಗಾಗಿ ಬೆಂಗಳೂರು ಉತ್ತರ ಕ್ಷೇತ್ರವನ್ನ ಸುಲಭವಾಗಿ ಗೆಲ್ಲಬಹುದು ಎಂಬ ಹಲವು ತಂತ್ರಗಾರಿಕೆಯನ್ನ ಕಾಂಗ್ರೆಸ್ ನಾಯಕರು ನಡೆಸಿದ್ದಾರೆ.
ಇನ್ನೂ ಕಾಂಗ್ರೆಸ್ ನಾಯಕರು ಕೇವಲ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಎಸ್ ಟಿ ಸೋಮಶೇಖರ್ ಅವರನ್ನ ಮತ್ತೆ ಪಕ್ಷಕ್ಕೆ ಕರೆದುಕೊಳ್ಳುತ್ತಿಲ್ಲ, ಬಿಬಿಎಂಪಿ ಚುನಾವಣೆಯ ದೃಷ್ಟಿಯಿಂದಲೂ ಮೂಲ ಕಾಂಗ್ರೆಸ್ಸಿಗರನ್ನ ಸೆಳೆಯಲು ಕೈ ನಾಯಕರು ಮುಂದಾಗಿದ್ದಾರೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಟಿಕೆಟ್ ನೀಡುವ ಚಿಂತನೆ ನಡೆದಿದ್ದು, ಯಶವಂತಪುರ ಕ್ಷೇತ್ರಕ್ಕೆ ಎಸ್ ಟಿ ಸೋಮಶೇಖರ್ ಪುತ್ರನಿಗೆ ಟಿಕೆಟ್ ನೀಡುವ ಆಫರ್ ನೀಡಿದ್ದಾರೆ ಎನ್ನಲಾಗಿದೆ
-
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ದಾವಣಗೆರೆ ಬೈಎಲೆಕ್ಷನ್ ಬೆನ್ನಲ್ಲೇ ಭಿನ್ನಮತ ಸ್ಫೋಟ: KPCC ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
ಏಪ್ರಿಲ್ 12ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
ಏಪ್ರಿಲ್ 11ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ












Click it and Unblock the Notifications