ಇನ್ನೂ ಐದಾರು ವಾರಗಳ ಕಾಲ ವಿಶ್ರಾಂತಿ ಪಡೆಯಬೇಕಿದೆ ಸೇಠ್!
ಬೆಂಗಳೂರು, ಜ. 16: ಮಾಜಿ ಸಚಿವ ತನ್ವೀರ್ ಸೇಠ್ ಅವರು ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಪತ್ರ ಬರೆದು ಧನ್ಯವಾದ ಹೇಳಿದ್ದಾರೆ. ಎರಡು ತಿಂಗಳುಗಳ ಹಿಂದೆ ದುಷ್ಕರ್ಮಿಯ ಕೊಲೆ ಯತ್ನದಿಂದ ಜೀವನ್ಮರಣ ಹೋರಾಟ ನಡೆಸಿದ್ದ ತನ್ವೀರ್ ಸೇಠ್ ಇದೀಗ ಸುಧಾರಿಸಿಕೊಳ್ಳುತ್ತಿದ್ದಾರೆ. ಇದೇ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರಿಗೆ ಪತ್ರ ಬರೆದಿದ್ದಾರೆ. ದುರ್ಘಟನೆಯಲ್ಲಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾಗ ಸಚಿವ ಶ್ರೀರಾಮುಲು ಭೇಟಿಯಾಗಿ ಧೈರ್ಯ ತುಂಬಿದ್ದನ್ನು ಸೇಠ್ ಸ್ಮರಿಸಿಕೊಂಡಿದ್ದಾರೆ.
Recommended Video
ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ತನ್ವೀರ್ ಸೇಠ್ ಬರೆದ ಪತ್ರ ಹೀಗಿದೆ, 'ಮಾನ್ಯ ಶ್ರೀರಾಮುಲು ಅವರೇ, ಸಾವಿರಾರು ಜನರ ಪ್ರೀತಿ, ಪ್ರಾರ್ಥನೆಗಳಿಂದ ನನಗೆ ಪುನರ್ಜನ್ಮ ಸಿಕ್ಕಿದೆ. ತಾವು ನನ್ನ ಆರೋಗ್ಯ ವಿಚಾರಿಸಲು ಆಸ್ಪತ್ರಗೆ ಬಂದಿದ್ದು, ದೂರವಾಣಿ ಕರೆ ಮಾಡಿ ನನ್ನಲ್ಲಿ ಹಾಗೂ ನನ್ನ ಕುಟುಂಬದವರಲ್ಲಿ ಆತ್ಮಸ್ಥೈರ್ಯ ತುಂಬಿದ್ದಕ್ಕೆ ನಾನು ವೈಯಕ್ತಿಕವಾಗಿ ಹಾಗೂ ನನ್ನ ಕುಟುಂಬದವರ ಪರವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇವೆ. ವೈದ್ಯರ ಸಲಹೆಯಂತೆ ಇನ್ನೂ 5 ರಿಂದ 6 ವಾರಗಳ ಕಾಲ ಸಂಪೂರ್ಣ ವಿಶ್ರಾಂತಿ ಪಡೆಯಬೇಕಾಗಿದೆ. ತಮ್ಮ ವಿಶ್ವಾಸ ಹಾಗೂ ಆಶೀರ್ವಾದ ಸದಾ ನನ್ನ ಮತ್ತು ನನ್ನ ಕುಟುಂಬವದರ ಮೇಲಿರಲೆಂದು ಕೋರುತ್ತೇವೆ' ಎಂದು ಪತ್ರ ಬರೆದು ಧನ್ಯವಾದ ಹೇಳಿದ್ದಾರೆ.
ಮೈಸೂರಿನಲ್ಲಿ ಮದುವೆ ಸಮಾರಂಭವೊಂದರಲ್ಲಿ ಭಾಘವಹಿಸಿದ್ದಾಗ ನವೆಂಬರ್ 17 ರಂದು ದುಷ್ಕರ್ಮಿಯೊಬ್ಬನಿಂದ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆಯಾಗಿತ್ತು. ಬಳಿಕ ವಿದೇಶದಲ್ಲಿ ಸೇರ್ಠ ವಿಶ್ರಾಂತಿ ಪಡೆಯುತ್ತಿದ್ದರು. ಇತ್ತೀಚಿಗಷ್ಟೆ ಪ್ರಕರಣದ ತನಿಖೆ ಹಿನ್ನೆಲೆಯಲ್ಲಿ ವಿದೇಶದಿಂದ ಮೈಸೂರಿಗೆ ಸೇಠ್ ಆಗಮಿಸಿದ್ದಾರೆ.

ಈ ಹಿಂದೆ ಸಿದ್ದರಾಮಯ್ಯ ಅವರು ಚಿಕಿತ್ಸೆ ಪಡೆದು ಆಸ್ಪತ್ರೆಯಲ್ಲಿದ್ದಾಗ ಬಿಜೆಪಿ ಸೇರಿದಂತೆ ಪಕ್ಷಬೇಧವಿಲ್ಲದೆ ಎಲ್ಲ ಪಕ್ಷಗಳ ನಾಯಕರು ಭೇಟಿಯಾಗಿದ್ದರು. ರಾಜ್ಯದ ರಾಜಕಾರಣಗಳು ಈ ಅನುಕರಣೀಯ ನಡೆ ಜನರ ಶ್ಲಾಘನೆಗೆ ಒಳಗಾಗಿತ್ತು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications