Get Updates
Get notified of breaking news, exclusive insights, and must-see stories!

ಮಾಜಿ ಶಾಸಕ ಮಹಿಮಾ ಪಟೇಲ್ ಜೆಡಿಎಸ್ ಸೇರ್ಪಡೆ

ಬೆಂಗಳೂರು, ಮಾ.21: ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಪುತ್ರ, ಚನ್ನಗಿರಿ ಕ್ಷೇತ್ರದ ಮಾಜಿ ಶಾಸಕ ಮಹಿಮಾ ಪಟೇಲ್ ಕಾಂಗ್ರೆಸ್ ತ್ಯಜಿಸಿ ತವರು ಪಕ್ಷ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ದಾವಣಗೆರೆಯಲ್ಲಿ ಎಸ್.ಎಸ್.ಮಲ್ಲಿಕಾರ್ಜುನ್ ಗೆ ಟಿಕೆಟ್ ನೀಡಿರುವುದರಿಂದ ಅಸಮಾಧಾನಗೊಂಡಿರುವ ಮಹಿಮಾ ಪಟೇಲ್ ಜೆಡಿಎಸ್ ಸೇರಲು ಆಸಕ್ತಿ ತೋರಿದರು. ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮಹಿಮಾ ಪಟೇಲ್ ಉತ್ಸುಕರಾಗಿದ್ದಾರೆ. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]

ಶುಕ್ರವಾರ ಮಧ್ಯಾಹ್ನ ಬೆಂಗಳೂರಿನಲ್ಲಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿವಾಸದಲ್ಲಿ ಅವರೊಂದಿಗೆ ಮಾತುಕತೆ ನಡೆಸಿದ ನಂತರ ಮಹಿಮಾ ಪಟೇಲ್ ಅವರು ಜೆಡಿಎಸ್ ತೆನೆ ಹೊತ್ತಿದ್ದಾರೆ. ಆದರೆ, ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಂಬಂಧ ಚರ್ಚೆ ಇನ್ನೂ ಮುಂದುವರೆದಿದೆ. ಸಂಜೆ ವೇಳೆಗೆ ಮಹಿಮಾ ಪಟೇಲ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಗಬಹುದು.

ರಾಹುಲ್ ‌ ಗಾಂಧಿಯವರ ಚಿಂತನೆ ಮೆಚ್ಚಿದ್ದೆ

ರಾಹುಲ್ ‌ ಗಾಂಧಿಯವರ ಚಿಂತನೆ ಮೆಚ್ಚಿದ್ದೆ

ರಾಹುಲ್ ‌ ಗಾಂಧಿಯವರ ಚಿಂತನೆಯಿಂದ ಆಕರ್ಷಿತನಾಗಿ ಕಾಂಗ್ರೆಸ್ ‌ ಸೇರಿದ್ದೆ. ಆದರೆ ಕಾಂಗ್ರೆಸ್ ‌ನಲ್ಲೀಗ ಟಿಕೆಟ್ ‌ಗಾಗಿ ಮನೆ ಬಾಗಿಲು ಕಾಯುವ ಸ್ಥಿತಿ ಇದೆ. ಟಿಕೆಟ್ ‌ಗಾಗಿ ಮನೆ ಬಾಗಿಲು ಕಾಯುವಂತಹ ಮನಸ್ಥಿತಿ ತಮ್ಮದಲ್ಲ. ಕಾಂಗ್ರೆಸ್ ‌ಗೆ ಸೋಲಿನ ಭೀತಿ ಇರುವುದರಿಂದ ಹಣ ಇದ್ದವರಿಗೆ ಟಿಕೆಟ್ ‌ ನೀಡಲಾಗಿದೆ.

ಮನಸ್ಸಿಗೆ ತುಂಬಾ ನೋವಾಗಿದೆ

ಮನಸ್ಸಿಗೆ ತುಂಬಾ ನೋವಾಗಿದೆ

ಕಾಂಗ್ರೆಸ್ ‌ನಲ್ಲಿ ನಡೆಸಿಕೊಂಡಿರುವ ರೀತಿಯಿಂದಾಗಿ ಮನಸ್ಸಿಗೆ ತುಂಬಾ ನೋವಾಗಿದೆ. ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ‌ನಲ್ಲಿ ಉಳಿಯುವ ಸಾಧ್ಯತೆ ಕಡಿಮೆ. ತೃತೀಯ ರಂಗ ಸೇರುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದೇನೆ ಎಂದು ಮಹಿಮಾ ಪಟೇಲ್ ಇತ್ತೀಚೆಗೆ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯೆ

ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯೆ

ಮಹಿಮಾ ಪಟೇಲ್ ಅವರು ಪಕ್ಷ ತೊರೆಯುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ತೋಟಗಾರಿಕೆ ಸಚಿವ ಶಾಮನೂರು ಶಿವಶಂಕರಪ್ಪ ಅವರು ಇಚ್ಛೆ ಇದ್ದರೆ ಪಕ್ಷದಲ್ಲಿ ಇರಬಹುದು. ಇಲ್ಲವೇ ಬಿಡಬಹುದು ಎಂದಿದ್ದಾರೆ. ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಹಿಮಾ ಪಟೇಲ್ ಅವರಿಗೆ ಪಕ್ಷ ಟಿಕೆಟ್ ನೀಡದೆ, ಶಾಮನೂರು ಶಿವಶಂಕರಪ್ಪ ಪುತ್ರ ಎಸ್ಎಸ್ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ನೀಡಿದೆ.

ಜೆಡಿಎಸ್ ಗೆ ಮತ್ತೆ ಮರಳಿದ್ದಾರೆ

ಜೆಡಿಎಸ್ ಗೆ ಮತ್ತೆ ಮರಳಿದ್ದಾರೆ

2009ರಲ್ಲಿ ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲರ ಪುತ್ರರಾದ ಮಹಿಮಾ ಪಟೇಲ್ ಹಾಗೂ ತ್ರಿಶೂಲಪಾಣಿ ಪಟೇಲ್ ಅವರು ಕಾಂಗ್ರೆಸ್ ಸೇರಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಜೆಡಿಎಸ್ ತೊರೆದು ಸ್ವರ್ಣಯುಗ ಪಕ್ಷ ಸ್ಥಾಪಿಸಿದೆ. ಚುನಾವಣೆಗೂ ಸ್ಪರ್ಧಿಸಿದೆ. ಆದರೆ, ಯಶ ಸಿಗಲಿಲ್ಲ. ಈಗ ಕಾಂಗ್ರೆಸ್ ‌ನಲ್ಲಿ ಸ್ವರ್ಣಯುಗ ವಿಲೀನಗೊಳಿಸಿದ್ದೇನೆ. ಕಾಂಗ್ರೆಸ್ ‌ನಿಂದ ದೇಶಕ್ಕೆ ಉತ್ತಮ ಭವಿಷ್ಯವಿದೆ ಎಂದು ಮಹಿಮಾ ಅಂದು ಹೇಳಿದ್ದರು. ಇಂದು ಜೆಡಿಎಸ್ ಗೆ ಮತ್ತೆ ಮರಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+