ಮಾಜಿ ಶಾಸಕ ಮಹಿಮಾ ಪಟೇಲ್ ಜೆಡಿಎಸ್ ಸೇರ್ಪಡೆ
ಬೆಂಗಳೂರು, ಮಾ.21: ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲ್ ಪುತ್ರ, ಚನ್ನಗಿರಿ ಕ್ಷೇತ್ರದ ಮಾಜಿ ಶಾಸಕ ಮಹಿಮಾ ಪಟೇಲ್ ಕಾಂಗ್ರೆಸ್ ತ್ಯಜಿಸಿ ತವರು ಪಕ್ಷ ಜೆಡಿಎಸ್ ಸೇರ್ಪಡೆಗೊಂಡಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ದಾವಣಗೆರೆಯಲ್ಲಿ ಎಸ್.ಎಸ್.ಮಲ್ಲಿಕಾರ್ಜುನ್ ಗೆ ಟಿಕೆಟ್ ನೀಡಿರುವುದರಿಂದ ಅಸಮಾಧಾನಗೊಂಡಿರುವ ಮಹಿಮಾ ಪಟೇಲ್ ಜೆಡಿಎಸ್ ಸೇರಲು ಆಸಕ್ತಿ ತೋರಿದರು. ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮಹಿಮಾ ಪಟೇಲ್ ಉತ್ಸುಕರಾಗಿದ್ದಾರೆ. [ಮೋದಿ ಮಾತನ್ನು ಕನ್ನಡದಲ್ಲಿ ಕೇಳಿರಿ]
ಶುಕ್ರವಾರ ಮಧ್ಯಾಹ್ನ ಬೆಂಗಳೂರಿನಲ್ಲಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಿವಾಸದಲ್ಲಿ ಅವರೊಂದಿಗೆ ಮಾತುಕತೆ ನಡೆಸಿದ ನಂತರ ಮಹಿಮಾ ಪಟೇಲ್ ಅವರು ಜೆಡಿಎಸ್ ತೆನೆ ಹೊತ್ತಿದ್ದಾರೆ. ಆದರೆ, ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಂಬಂಧ ಚರ್ಚೆ ಇನ್ನೂ ಮುಂದುವರೆದಿದೆ. ಸಂಜೆ ವೇಳೆಗೆ ಮಹಿಮಾ ಪಟೇಲ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಗಬಹುದು.

ರಾಹುಲ್ ಗಾಂಧಿಯವರ ಚಿಂತನೆ ಮೆಚ್ಚಿದ್ದೆ
ರಾಹುಲ್ ಗಾಂಧಿಯವರ ಚಿಂತನೆಯಿಂದ ಆಕರ್ಷಿತನಾಗಿ ಕಾಂಗ್ರೆಸ್ ಸೇರಿದ್ದೆ. ಆದರೆ ಕಾಂಗ್ರೆಸ್ ನಲ್ಲೀಗ ಟಿಕೆಟ್ ಗಾಗಿ ಮನೆ ಬಾಗಿಲು ಕಾಯುವ ಸ್ಥಿತಿ ಇದೆ. ಟಿಕೆಟ್ ಗಾಗಿ ಮನೆ ಬಾಗಿಲು ಕಾಯುವಂತಹ ಮನಸ್ಥಿತಿ ತಮ್ಮದಲ್ಲ. ಕಾಂಗ್ರೆಸ್ ಗೆ ಸೋಲಿನ ಭೀತಿ ಇರುವುದರಿಂದ ಹಣ ಇದ್ದವರಿಗೆ ಟಿಕೆಟ್ ನೀಡಲಾಗಿದೆ.

ಮನಸ್ಸಿಗೆ ತುಂಬಾ ನೋವಾಗಿದೆ
ಕಾಂಗ್ರೆಸ್ ನಲ್ಲಿ ನಡೆಸಿಕೊಂಡಿರುವ ರೀತಿಯಿಂದಾಗಿ ಮನಸ್ಸಿಗೆ ತುಂಬಾ ನೋವಾಗಿದೆ. ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಲ್ಲಿ ಉಳಿಯುವ ಸಾಧ್ಯತೆ ಕಡಿಮೆ. ತೃತೀಯ ರಂಗ ಸೇರುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದೇನೆ ಎಂದು ಮಹಿಮಾ ಪಟೇಲ್ ಇತ್ತೀಚೆಗೆ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯೆ
ಮಹಿಮಾ ಪಟೇಲ್ ಅವರು ಪಕ್ಷ ತೊರೆಯುತ್ತಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ ತೋಟಗಾರಿಕೆ ಸಚಿವ ಶಾಮನೂರು ಶಿವಶಂಕರಪ್ಪ ಅವರು ಇಚ್ಛೆ ಇದ್ದರೆ ಪಕ್ಷದಲ್ಲಿ ಇರಬಹುದು. ಇಲ್ಲವೇ ಬಿಡಬಹುದು ಎಂದಿದ್ದಾರೆ. ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮಹಿಮಾ ಪಟೇಲ್ ಅವರಿಗೆ ಪಕ್ಷ ಟಿಕೆಟ್ ನೀಡದೆ, ಶಾಮನೂರು ಶಿವಶಂಕರಪ್ಪ ಪುತ್ರ ಎಸ್ಎಸ್ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ನೀಡಿದೆ.

ಜೆಡಿಎಸ್ ಗೆ ಮತ್ತೆ ಮರಳಿದ್ದಾರೆ
2009ರಲ್ಲಿ ಮಾಜಿ ಮುಖ್ಯಮಂತ್ರಿ ಜೆ.ಎಚ್.ಪಟೇಲರ ಪುತ್ರರಾದ ಮಹಿಮಾ ಪಟೇಲ್ ಹಾಗೂ ತ್ರಿಶೂಲಪಾಣಿ ಪಟೇಲ್ ಅವರು ಕಾಂಗ್ರೆಸ್ ಸೇರಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಜೆಡಿಎಸ್ ತೊರೆದು ಸ್ವರ್ಣಯುಗ ಪಕ್ಷ ಸ್ಥಾಪಿಸಿದೆ. ಚುನಾವಣೆಗೂ ಸ್ಪರ್ಧಿಸಿದೆ. ಆದರೆ, ಯಶ ಸಿಗಲಿಲ್ಲ. ಈಗ ಕಾಂಗ್ರೆಸ್ ನಲ್ಲಿ ಸ್ವರ್ಣಯುಗ ವಿಲೀನಗೊಳಿಸಿದ್ದೇನೆ. ಕಾಂಗ್ರೆಸ್ ನಿಂದ ದೇಶಕ್ಕೆ ಉತ್ತಮ ಭವಿಷ್ಯವಿದೆ ಎಂದು ಮಹಿಮಾ ಅಂದು ಹೇಳಿದ್ದರು. ಇಂದು ಜೆಡಿಎಸ್ ಗೆ ಮತ್ತೆ ಮರಳಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications