ರಮ್ಯಾಗೆ ದೊಡ್ಡ ಜವಾಬ್ದಾರಿ ನೀಡಿದ ರಾಹುಲ್ ಗಾಂಧಿ!
ಮಂಡ್ಯದ ಮಾಜಿ ಸಂಸದೆ ರಮ್ಯಾ ಅಲಿಯಾಸ್ ದಿವ್ಯ ಸ್ಪಂದನ ಅವರ ಮೇಲೆ ದೊಡ್ಡ ಮಟ್ಟದ ಜವಾಬ್ದಾರಿಯನ್ನು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ವಹಿಸಿದ್ದಾರೆ. ಮುಂದಿನ ಚುನಾವಣೆಗೆ ಇದು ಹೇಗೆ ಸಹಕಾರಿಯಾಗಲಿದೆ ಕಾದು ನೋಡೋಣ..
ಬೆಂಗಳೂರು, ಮೇ 10: ಮಂಡ್ಯದ ಮಾಜಿ ಸಂಸದೆ, ಲಕ್ಕಿ ಸ್ಟಾರ್ ರಮ್ಯಾ ಅಲಿಯಾಸ್ ದಿವ್ಯಸ್ಪಂದನ ಅವರ ಮೇಲೆ ಭಾರಿ ವಿಶ್ವಾಸವಿಟ್ಟು, ದೊಡ್ಡಮಟ್ಟದ ಜವಾಬ್ದಾರಿಯನ್ನು ಕಾಂಗ್ರೆಸ್ ಹೊರೆಸಿದೆ. ಕಾಂಗ್ರೆಸ್ ಪಕ್ಷದ ಸೋಷಿಯಲ್ ಮೀಡಿಯಾ ಘಟಕದ ಮುಖ್ಯಸ್ಥರಾಗಿ ರಮ್ಯಾರನ್ನು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ನೇಮಿಸಿದ್ದಾರೆ.
ಸತತ ಚುನಾವಣೆಗಳಲ್ಲಿನ ಸೋಲಿನ ಬಳಿಕ ಕಾಂಗ್ರೆಸ್ ಪಕ್ಷದ ಪ್ರಮುಖ ಹುದ್ದೆಗಳಲ್ಲಿ ಭಾರಿ ಬದಲಾವಣೆ ಕಂಡು ಬಂದಿದೆ. ಕರ್ನಾಟಕದ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರ ಬದಲಿಗೆ ಕೆಸಿ ವೇಣುಗೋಪಾಲ್ ಈಗ ಕಾರ್ಯನಿರ್ವಹಿಸುತ್ತಿದ್ದಾರೆ. ರಮ್ಯಾ ಅವರು ರೋಹ್ಟಕ್ ನ ಲೋಕಸಭಾ ಸಂಸದ ದೀಪೇಂದ್ರ ಹೂಡಾ ಅವರ ಸ್ಥಾನದಲ್ಲಿ ರಮ್ಯಾ ಅವರನ್ನು ಕೂರಿಸಲಾಗಿದೆ.[ಮೋದಿ ಸರ್ಕಾರದಲ್ಲಿ ಯಾರು ಸೇಫ್ ಇಲ್ಲ: ರಮ್ಯಾ]

ರಮ್ಯಾ ಅವರ ನೇಮಕಾತಿಗೆ ಮುಖ್ಯವಾಗಿ ಕಾರಣವಾಗಿದ್ದು ಅವರ ಟ್ವಿಟ್ಟರ್ ಚಟುವಟಿಕೆ. ಟ್ವಿಟ್ಟರ್ ನಲ್ಲಿ ಸಕ್ರಿಯವಾಗಿರುವ ರಮ್ಯಾ ಅವರು ಮೋದಿ ಸರ್ಕಾರದ ವಿರುದ್ಧ ಸಾಕಷ್ಟು ಬಾರಿ ಸತತ ದಾಳಿ ನಡೆಸಿದ್ದಾರೆ. ನೋಟ್ ಬ್ಯಾನ್ ಇರಬಹುದು ಅಥವಾ ಸರ್ಜಿಕಲ್ ಸ್ಟ್ರೈಕ್ ಇರಬಹುದು, ನಕ್ಸಲರಿಂದ ಯೋಧರ ಹತ್ಯೆ ಪ್ರಕರಣ ಇರಬಹುದು ರಮ್ಯಾ ಅವರು ಬಲವಾಗಿ ದನಿ ಎತ್ತಿದ್ದಾರೆ.[ರಮ್ಯಾ ಟ್ವಿಟ್ಟರಲ್ಲಿ ನಡೆಯುತ್ತಿದೆ ಹೊಸ ಕರೆನ್ಸಿ ನೋಟು ಪರೀಕ್ಷೆ!]
ಮುಂಬರುವ ಚುನಾವಣೆಗಳಲ್ಲಿ ಸಾಮಾಜಿಕ ಜಾಲ ತಾಣ ತಂಡ ಮಹತ್ವದ ಪಾತ್ರ ವಹಿಸಲಿದ್ದು, ಈ ಸ್ಥಾನಕ್ಕೆ ಸಮರ್ಥರನ್ನು ನೇಮಿಸಲು ಬಯಸಿದ್ದ ರಾಹುಲ್ ಗಾಂಧಿ ಅವರು ರಮ್ಯಾ ಅವರನ್ನು ನೇಮಿಸಿದ್ದಾರೆ.
ಹಲವು ಚುನಾವಣೆ ಸೋಲಿನ ಬಳಿಕ ಹೊಸ ತಂಡವನ್ನು ಕಟ್ಟಿಕೊಂಡು ಮುಂದಿನ ಸವಾಲು ಎದುರಿಸಲು ಕಾಂಗ್ರೆಸ್ ಸಜ್ಜಾಗುತ್ತಿದೆ. ಸರಿ ಸುಮಾರು 17 ಕಾರ್ಯದರ್ಶಿಗಳನ್ನು ಬದಲಾಯಿಸಲಾಗಿದೆ. ರಾಜಸ್ಥಾನ ಹಾಗೂ ಗುಜರಾತಿನ ಪ್ರಧಾನ ಕಾರ್ಯದರ್ಶಿಗಳನ್ನು ಬದಲಾಯಿಸಲಾಗಿದೆ.[ನೀರಿನ ಸಮಸ್ಯೆಗೆ 'ದಿವ್ಯ' ಉಪಾಯ ನೀಡಿದ ರಮ್ಯಾ]
ಉತ್ತರಾಖಂಡ್ ಹಾಗೂ ಪಂಜಾಬಿನ ಕಾಂಗ್ರೆಸ್ ಘಟಕಕ್ಕೆ ಹೊಸಬರನ್ನು ನೇಮಿಸಲಾಗಿದೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೆಪ್ಟೆಂಬರ್ 15 ರಿಂದ ಅಕ್ಟೋಬರ್ 15ರ ಅವಧಿಯಲ್ಲಿ ನಡೆಯಲಿದೆ. ಸದಸ್ಯತ್ವ ಅಭಿಯಾನವನ್ನು ಮೇ 15ರೊಳಗೆ ಮುಕ್ತಾಯಗೊಳಿಸಲಾಗುತ್ತದೆ.(ಒನ್ಇಂಡಿಯಾ ಸುದ್ದಿ)
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications