ಕಳೆದ ವಾರದಿಂದ ಕೊರೊನಾ ಸೋಂಕಿತರು ಹೆಚ್ಚಾಗಿದ್ದು ನನ್ನನ್ನು ಚಿಂತೆಗೀಡು ಮಾಡಿದೆ!
ಬೆಂಗಳೂರು, ಮೇ 16: ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಕಳೆದೊಂದು ವಾರದಿಂದ ಹೆಚ್ಚಳವಾಗಿರುವುದು ನನ್ನನ್ನು ಮತ್ತಷ್ಟು ಚಿಂತೆಗೀಡು ಮಾಡಿದೆ. ಪರಿಸ್ಥಿತಿ ಎಲ್ಲಿಗೆ ತಲುಪುತ್ತದೋ ಎಂಬ ಆತಂಕ ನನ್ನನ್ನು ಕಾಡುತ್ತಿದೆ. ಆದರಿಂದ ನನ್ನ ಎಲ್ಲ ಅಭಿಮಾನಿಗಳು, ಕಾರ್ಯಕರ್ತರು ಹಾಗೂ ನಾಯಕರು ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಮೇ 18ರಂದು ನೀವು ಇದ್ದಲ್ಲಿಂದಲೇ ಶುಭಾಶಯಗಳನ್ನು ಕೋರಬೇಕೆಂದು ಮನವಿ ಮಾಡುತ್ತೇನೆಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮನವಿ ಮಾಡಿದ್ದಾರೆ.
Recommended Video
ಇದೇ ಮೇ 18ರಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರು 87ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಯಾರೂ ಭೇಟಿಯಾಗಿ ಶುಭಾಶಯಗಳನ್ನು ಹೇಳಲು ಮುಂದಾಗಬಾರದು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ಹಿಂದಿನ ವರ್ಷಗಳೇ ಬೇರೆ, ಈಗಿನ ಪರಿಸ್ಥಿತಿಯೇ ಬೇರೆ. ಹೀಗಾಗಿ ಅಭಿಮಾನಿಗಳು ಅರ್ಥ ಮಾಡಿಕೊಳ್ಳಬೇಕು. ಪ್ರತಿವರ್ಷ ಬರುವಂತೆ ಈ ವರ್ಷ ಮನೆಯ ಬಳಿ ಬಂದು ಸೇರಿದರೆ ಲಾಕ್ಡೌನ್ ಉಲ್ಲಂಘನೆ ಆಗುತ್ತದೆ. ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಅದು ತೀವ್ರ ತೊಂದರೆಯನ್ನುಂಟು ಮಾಡುತ್ತದೆ. ದೇವಸ್ಥಾನಗಳಿಂದ ಹಿಡಿದು ಚಿತ್ರಮಂದಿರಗಳವರೆಗೆ, ಮದುವೆ ಸಮಾರಂಭಗಳಿಂದ ಹಿಡಿದು ಅಂತ್ಯಕ್ರಿಯೆವರೆಗೆ ನಿರ್ಬಂಧಗಳು ಹೇರಲ್ಪಟ್ಟಿವೆ. ಹೀಗಾಗಿ ನನ್ನ ಹುಟ್ಟುಹಬ್ಬದಿಂದ ಲಾಕ್ಡೌನ್ ಆದೇಶಗಳ ಉಲ್ಲಂಘನೆ ಆಗಬಾರದು.

ಮೇ 18ರಂದು ಹೂಗುಚ್ಛಗಳೊಂದಿಗೆ ಬಂದು ಶುಭ ಹಾರೈಸುವ ಬದಲು ಕೊರೊನಾ ಸಂಕಷ್ಟ ಪೀಡಿತರಿಗೆ ತಮ್ಮ ಕೈಲಾದ ಸಹಾಯ ಮಾಡಬೇಕೆಂದು ನಮ್ಮ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಈ ಮೂಲಕ ಮನವಿ ಮಾಡಿಕೊಳ್ಳುತ್ತಿದ್ದೇನೆ. ಎಲ್ಲರೂ ಸರ್ಕಾರದ ನಿರ್ದೇಶನದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಸುರಕ್ಷಿತರಾಗಿರೋಣ ಎಂದು ದೇವೇಗೌಡರು ಮನವಿ ಮಾಡಿಕೊಂಡಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications