HD Deve Gowda: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಆರೋಗ್ಯದಲ್ಲಿ ಏಕಾಏಕಿ ಏರುಪೇರು- ಆಸ್ಪತ್ರೆಗೆ ದಾಖಲು
ಬೆಂಗಳೂರು, ಫೆಬ್ರವರಿ 15: ತೀವ್ರ ಉಸಿರಾಟದ ತೊಂದರೆ ಹಿನ್ನೆಲೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡ್ರು ಇಂದು(ಗುರುವಾರ) ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಏಕಾಏಕಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಈಗಾಗಲೇ ಲೋಕಸಭಾ ಚುನಾವಣೆ ಹಿನ್ನಲೆ ಪಕ್ಷದ ಕಚೇರಿಯಲ್ಲಿ ಸರಣಿ ಸಭೆ ನಡೆಸಿದ್ದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆ ಮಣಿಪಾಲ ಆಸ್ಪತ್ರೆಗೆ ಇಂದು ಬೆಳಿಗ್ಗೆ ದಾಖಲಾಗಿದ್ದು, ಡಾ. ಸತ್ಯನಾರಾಯಣ ನೇತೃತ್ವದಲ್ಲಿ ಚಿಕಿತ್ಸೆ ನಡೆದಿದ್ದು, ಆರೋಗ್ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಇನ್ನೂ ಮಾಜಿ ಪ್ರಧಾನಿಗಳಾದ ಎಚ್ ಡಿ ದೇವೇಗೌಡ ಅವರಿಗೆ 90 ವರ್ಷ ಪೂರ್ಣಗೊಂಡಿವೆ. ಆದರೂ ಸಹ ಸಕ್ರಿಯ ರಾಜಕಾರಣದಲ್ಲಿದ್ದು, ರಾಜ್ಯ ಸಭೆ ಸದಸ್ಯರಾಗಿ, ಸದ್ಯ ಅವರು ಲೋಕಸಭೆ ಚುನಾವಣೆಯ ಪ್ರಚಾರ, ಸಭೆಗಳನ್ನು ನಡೆಸುತ್ತಿದ್ದಾರೆ. ಈ ಇಳಿವಯಸ್ಸಿನಲ್ಲೂ ಅಧಿವೇಶನದಲ್ಲಿ ಭಾಗವಹಿಸಲು ದೆಹಲಿ ಹಾಗೂ ಲೋಕಸಭಾ ಚುನಾವಣೆ ಸಂಬಂಧ ಬೆಂಗಳೂರಿನಿಂದ ಹಾಸನಕ್ಕೆ ಹೋಗಿದ್ದರು. ಇನ್ನೂ ಇತ್ತಿಚಿಗಷ್ಟೆ ಉದ್ಘಾಟನೆಯಾದ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕಾಗಿ ಅಯೋಧ್ಯೆಗೆ ದೇವೇಗೌಡ್ರು ಕುಟುಂಬ ಸಮೇತರಾಗಿ ಭಾಗವಹಿಸಿದ್ದರು.
ಮಂಡ್ಯ ನಾಯಕರ ಜೊತೆಗೆ ಸಭೆ ನಡೆಸಿದ್ದ ದೇವೇಗೌಡ್ರು
ಲೋಕಸಭಾ ಚುನಾವಣೆಗೆ ಬಿಜೆಪಿ ಜೊತೆಗೆ ಮೈತ್ರಿಯಾಗಿರುವ ಜೆಡಿಎಸ್ ಗೆ ಮತ್ತೆ ಮಂಡ್ಯ ಲೋಕಸಭಾ ಕ್ಷೇತ್ರವನ್ನ ವಶಪಡಿಸಿಕೊಳ್ಳಲು ದಳಪತಿಗಳು ಪ್ಲಾನ್ ನಡೆಸಿದ್ದಾರೆ. ಹೀಗಾಗಿ ಮಂಡ್ಯ ಜಿಲ್ಲೆಯ ನಾಯಕರು ಹಾಗೂ ಇನ್ನಿತರೆ ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸಿದ್ದಾರೆ.
ಈ ಕುರಿತು ಮಾತನಾಡಿದ ದೇವೇಗೌಡ್ರು, ಪಕ್ಷ ಸಂಘನೆ ದೃಷ್ಟಿಯಿಂದ ಮುಂದಿನ ವಾರದಿಂದ ಮಂಡ್ಯ ಜಿಲ್ಲೆಯ ಎಲ್ಲಾ 8 ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳುತ್ತೇವೆ. ಆಗ ಎಲ್ಲಾ ಕಾರ್ಯಕರ್ತರು, ಮುಖಂಡರು, ಸಂಘ ಸಂಸ್ಥೆಗಳ ಮುಖಂಡರ ಅಭಿಪ್ರಾಯ ಸಂಗ್ರಹ ಮಾಡುತ್ತೇವೆ. ಆಮೇಲೆ ಅಭ್ಯರ್ಥಿ ಬಗ್ಗೆ ನಮ್ಮ ಪಕ್ಷದ ನಾಯಕರೆಲ್ಲ ಸೇರಿ ಒಂದು ಅಭಿಪ್ರಾಯಕ್ಕೆ ಬರುತ್ತೇವೆ. ನಾವು ಎನ್ ಡಿಎ ಮೈತ್ರಿಕೂಟದಲ್ಲಿ ಇರುವುದರಿಂದ ನಮ್ಮ ನಿರ್ಧಾರವನ್ನು ಪ್ರಧಾನಿಗಳಾದ ನರೇಂದ್ರ ಮೋದಿ, ಅಮಿತ್ ಶಾ, ನಡ್ಡಾ ಹಾಗೂ ರಾಜ್ಯ ಬಿಜೆಪಿ ನಾಯಕರಿಗೆ ತಿಳಿಸುತ್ತೇವೆ. ಆಮೇಲೆ ಕುಮಾರಸ್ವಾಮಿ ಅವರು ಅವರೆಲ್ಲರ ಚರ್ಚೆ ಮಾಡಿ ನಿರ್ಧಾರ ಮಾಡುತ್ತಾರೆ ಎಂದು ತಿಳಿಸಿದರು.
ಕ್ಷೇತ್ರ ಹಂಚಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮಾಜಿ ಪ್ರಧಾನಿಗಳು, ಇಲ್ಲಿ ಜೆಡಿಎಸ್ - ಬಿಜೆಪಿ ಎನ್ನುವುದಲ್ಲ. ಎನ್ ಡಿಎ ಅಷ್ಟೇ ಮುಖ್ಯ. ಅಂತಿಮವಾಗಿ ಮೋದಿ ಅವರು, ಅಮಿತ್ ಶಾ, ನಡ್ಡಾ ಮತ್ತು ಕುಮಾರಸ್ವಾಮಿ, ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರು ಅಂತಿಮ ನಿರ್ಧಾರಕ್ಕೆ ಬರುತ್ತಾರೆ. ಈಗಾಗಲೇ ಬಿಜೆಪಿ ನಾಯಕರಿಗೆ ಕುಮಾರಸ್ವಾಮಿ ಅವರು ಎಲ್ಲಾ ಮಾಹಿತಿ ನೀಡಿದ್ದಾರೆ. ಬಹುಶಃ ಇನ್ನೊಂದು ವಾರದಲ್ಲಿ ತೀರ್ಮಾನ ಮಾಡುತ್ತಾರೆ ಎಂದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications