Get Updates
Get notified of breaking news, exclusive insights, and must-see stories!

HD Deve Gowda: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಆರೋಗ್ಯದಲ್ಲಿ ಏಕಾಏಕಿ ಏರುಪೇರು- ಆಸ್ಪತ್ರೆಗೆ ದಾಖಲು

ಬೆಂಗಳೂರು, ಫೆಬ್ರವರಿ 15: ತೀವ್ರ ಉಸಿರಾಟದ ತೊಂದರೆ ಹಿನ್ನೆಲೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠರಾದ ಹೆಚ್​.ಡಿ.ದೇವೇಗೌಡ್ರು ಇಂದು(ಗುರುವಾರ) ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಏಕಾಏಕಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಈಗಾಗಲೇ ಲೋಕಸಭಾ ಚುನಾವಣೆ ಹಿನ್ನಲೆ ಪಕ್ಷದ ಕಚೇರಿಯಲ್ಲಿ ಸರಣಿ ಸಭೆ ನಡೆಸಿದ್ದ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆ ಮಣಿಪಾಲ ಆಸ್ಪತ್ರೆಗೆ ಇಂದು ಬೆಳಿಗ್ಗೆ ದಾಖಲಾಗಿದ್ದು, ಡಾ‌. ಸತ್ಯನಾರಾಯಣ ನೇತೃತ್ವದಲ್ಲಿ ಚಿಕಿತ್ಸೆ ನಡೆದಿದ್ದು, ಆರೋಗ್‌ ಸ್ಥಿರವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

Former PM HD Deve Gowda Admitted To Hospital

ಇನ್ನೂ ಮಾಜಿ ಪ್ರಧಾನಿಗಳಾದ ಎಚ್‌ ಡಿ ದೇವೇಗೌಡ ಅವರಿಗೆ 90 ವರ್ಷ ಪೂರ್ಣಗೊಂಡಿವೆ. ಆದರೂ ಸಹ ಸಕ್ರಿಯ ರಾಜಕಾರಣದಲ್ಲಿದ್ದು, ರಾಜ್ಯ ಸಭೆ ಸದಸ್ಯರಾಗಿ, ಸದ್ಯ ಅವರು ಲೋಕಸಭೆ ಚುನಾವಣೆಯ ಪ್ರಚಾರ, ಸಭೆಗಳನ್ನು ನಡೆಸುತ್ತಿದ್ದಾರೆ. ಈ ಇಳಿವಯಸ್ಸಿನಲ್ಲೂ ಅಧಿವೇಶನದಲ್ಲಿ ಭಾಗವಹಿಸಲು ದೆಹಲಿ ಹಾಗೂ ಲೋಕಸಭಾ ಚುನಾವಣೆ ಸಂಬಂಧ ಬೆಂಗಳೂರಿನಿಂದ ಹಾಸನಕ್ಕೆ ಹೋಗಿದ್ದರು. ಇನ್ನೂ ಇತ್ತಿಚಿಗಷ್ಟೆ ಉದ್ಘಾಟನೆಯಾದ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕಾಗಿ ಅಯೋಧ್ಯೆಗೆ ದೇವೇಗೌಡ್ರು ಕುಟುಂಬ ಸಮೇತರಾಗಿ ಭಾಗವಹಿಸಿದ್ದರು.

ಮಂಡ್ಯ ನಾಯಕರ ಜೊತೆಗೆ ಸಭೆ ನಡೆಸಿದ್ದ ದೇವೇಗೌಡ್ರು

ಲೋಕಸಭಾ ಚುನಾವಣೆಗೆ ಬಿಜೆಪಿ ಜೊತೆಗೆ ಮೈತ್ರಿಯಾಗಿರುವ ಜೆಡಿಎಸ್‌ ಗೆ ಮತ್ತೆ ಮಂಡ್ಯ ಲೋಕಸಭಾ ಕ್ಷೇತ್ರವನ್ನ ವಶಪಡಿಸಿಕೊಳ್ಳಲು ದಳಪತಿಗಳು ಪ್ಲಾನ್‌ ನಡೆಸಿದ್ದಾರೆ. ಹೀಗಾಗಿ ಮಂಡ್ಯ ಜಿಲ್ಲೆಯ ನಾಯಕರು ಹಾಗೂ ಇನ್ನಿತರೆ ಹಿರಿಯ ನಾಯಕರ ಜತೆ ಸಮಾಲೋಚನೆ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ದೇವೇಗೌಡ್ರು, ಪಕ್ಷ ಸಂಘನೆ ದೃಷ್ಟಿಯಿಂದ ಮುಂದಿನ ವಾರದಿಂದ ಮಂಡ್ಯ ಜಿಲ್ಲೆಯ ಎಲ್ಲಾ 8 ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳುತ್ತೇವೆ. ಆಗ ಎಲ್ಲಾ ಕಾರ್ಯಕರ್ತರು, ಮುಖಂಡರು, ಸಂಘ ಸಂಸ್ಥೆಗಳ ಮುಖಂಡರ ಅಭಿಪ್ರಾಯ ಸಂಗ್ರಹ ಮಾಡುತ್ತೇವೆ. ಆಮೇಲೆ ಅಭ್ಯರ್ಥಿ ಬಗ್ಗೆ ನಮ್ಮ ಪಕ್ಷದ ನಾಯಕರೆಲ್ಲ ಸೇರಿ ಒಂದು ಅಭಿಪ್ರಾಯಕ್ಕೆ ಬರುತ್ತೇವೆ. ನಾವು ಎನ್ ಡಿಎ ಮೈತ್ರಿಕೂಟದಲ್ಲಿ ಇರುವುದರಿಂದ ನಮ್ಮ ನಿರ್ಧಾರವನ್ನು ಪ್ರಧಾನಿಗಳಾದ ನರೇಂದ್ರ ಮೋದಿ, ಅಮಿತ್ ಶಾ, ನಡ್ಡಾ ಹಾಗೂ ರಾಜ್ಯ ಬಿಜೆಪಿ ನಾಯಕರಿಗೆ ತಿಳಿಸುತ್ತೇವೆ. ಆಮೇಲೆ ಕುಮಾರಸ್ವಾಮಿ ಅವರು ಅವರೆಲ್ಲರ ಚರ್ಚೆ ಮಾಡಿ ನಿರ್ಧಾರ ಮಾಡುತ್ತಾರೆ ಎಂದು ತಿಳಿಸಿದರು.

ಕ್ಷೇತ್ರ ಹಂಚಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮಾಜಿ ಪ್ರಧಾನಿಗಳು, ಇಲ್ಲಿ ಜೆಡಿಎಸ್ - ಬಿಜೆಪಿ ಎನ್ನುವುದಲ್ಲ. ಎನ್ ಡಿಎ ಅಷ್ಟೇ ಮುಖ್ಯ. ಅಂತಿಮವಾಗಿ ಮೋದಿ ಅವರು, ಅಮಿತ್ ಶಾ, ನಡ್ಡಾ ಮತ್ತು ಕುಮಾರಸ್ವಾಮಿ, ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರು ಅಂತಿಮ ನಿರ್ಧಾರಕ್ಕೆ ಬರುತ್ತಾರೆ. ಈಗಾಗಲೇ ಬಿಜೆಪಿ ನಾಯಕರಿಗೆ ಕುಮಾರಸ್ವಾಮಿ ಅವರು ಎಲ್ಲಾ ಮಾಹಿತಿ ನೀಡಿದ್ದಾರೆ. ಬಹುಶಃ ಇನ್ನೊಂದು ವಾರದಲ್ಲಿ ತೀರ್ಮಾನ ಮಾಡುತ್ತಾರೆ ಎಂದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+