HD Devegowda Health : ಮಾಜಿ ಪ್ರಧಾನಿ ಎಚ್ಡಿ ದೇವೇಗೌಡರು ಮಣಿಪಾಲ್ ಆಸ್ಪತ್ರೆಗೆ ದಾಖಲು
ಮಾಜಿ ಪ್ರಧಾನಮಂತ್ರಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರಿಗೆ ನಗರದ ಪ್ರತಿಷ್ಠಿತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರಣವೇಣು, ಏನು ಅವರಿಗಿದ್ದ ಸಮಸ್ಯೆ, ವೈದ್ಯರು ಹೇಳಿದ್ದೇನು? ಇಲ್ಲಿ ಸಂಪೂರ್ಣ ಮಾಹಿತಿ.
ಬೆಂಗಳೂರು, ಫೆಬ್ರವರಿ 28: ಮಾಜಿ ಪ್ರಧಾನಮಂತ್ರಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರಿಗೆ ನಗರದ ಪ್ರತಿಷ್ಠಿತ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಂಗಳವಾರ ಮೊಣಕಾಲು ನೋವಿನಿಂದಾಗಿ ಎಚ್.ಡಿ.ದೇವೇಗೌಡ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಗತ್ಯ ತಪಾಸಣೆ ನಡೆಸಿರುವ ವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ. ಫಿಜಿಯೋಥೆರಪಿ ಮಾಡುತ್ತಿದ್ದಾರೆ. ದೇವೇಗೌಡರ ಮೊಣಕಾಲಿನಲ್ಲಿ ವಿಪರೀತ ನೋವು ಕಂಡು ಬಂದಿದ್ದು, ಕಾಲು ಊದಿಕೊಂಡಿತ್ತು ಎಂದು ತಿಳಿದು ಬಂದಿದೆ.

ದೇವೇಗೌಡರು ಮಂಡಿ ನೋವಿನಿಂದ ಬಳಲುತ್ತಿದ್ದರು. ಮೊಣಕಾಲು ಊದಿಕೊಂಡು ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಅವರು ಬೆಳಗ್ಗೆ ಆಸ್ಪತ್ರೆಗೆ ತೆರಳಿದ್ದಾರೆ. ಮೊದಲು ವೈದ್ಯರು ಸಾಮಾನ್ಯ ತಪಾಸಣೆ ನಡೆಸಿದ್ದಾರೆ. ನಂತರ ಫಿಜಿಯೋಥೆರಪಿ ಸಹ ನಡೆಸಿದ್ದಾರೆ. ಜೊತೆಗೆ ಒಂದು ವಾರ ದೇವೇಗೌಡರಿಗೆ ವಿಶ್ರಾಂತಿ ಪಡೆಯುವಂತೆ ವೈದ್ಯರು ತಿಳಿಸಿದ್ದಾರೆ. ಹಲವು ದಿನಗಳಿಂದಲೂ ದೇವೇಗೌಡರು ಮನೆಯಲ್ಲಿ ರೆಗುಲರ್ ತಪಾಸಣೆ/ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.
ಆಸ್ಪತ್ರೆಯಲ್ಲೇ 7 ದಿನ ವಿಶ್ರಾಂತಿ
ಮನೆಯಲ್ಲೇ ಚಿಕಿತ್ಸೆ ಮಾಡುತ್ತಿದ್ದ ವೈದ್ಯರು ದೇವೇಗೌಡರಿಗೆ ಮೊಣಕಾಲಿನ ನೋವು ಜಾಸ್ತಿ ಆಗಿದ್ದರಿಂದ ಮಣಿಪಾಲ್ ಆಸ್ಪತ್ರೆಗೆ ಶಿಫಾರಸು ಮಾಡಿದರು. ಅದರಂತೆ ದೇವೇಗೌಡರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ವಿಷಯ ಗೊತ್ತಾಗುತ್ತಿದ್ದಂತೆ ದೇವೇಗೌಡರ ಕುಟುಂಬಸ್ಥರು ಮಣಿಪಾಲ್ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಸದ್ಯ ದೇವೇಗೌಡರಿಗೆ ಚಿಕಿತ್ಸೆ ನೀಡಲಾಗಿದೆ. ಆತಂಕ ಪಡುವ ಅವಶ್ಯಕತೆ ಇಲ್ಲ. ದೇವೇಡೌಡರು ಆರೋಗ್ಯವಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವೈದ್ಯರ ಸಲಹೆ ಮೆರೆಗೆ ಒಂದು ವಾರ ಕಾಲ ದೇವೇಗೌಡರು ಆಸ್ಪತ್ರೆಯಲ್ಲೇ ವಿಶ್ರಾಂತಿ ಪಡೆಯುವುದಾಗಿ ಮೂಲಗಳು ತಿಳಿಸಿವೆ. ಮನೆಯಲ್ಲಿ ಕಾರ್ಯಕರ್ತರು ಸೇರಿದಂತೆ ನಿತ್ಯ ನೂರಾರು ಮಂದಿ ಬರುತ್ತಾರೆ. ಹೀಗಾಗಿ ಅವರು ಆಸ್ಪತ್ರೆಯಲ್ಲೇ ಹೆಚ್ಚಿನ ಚಿಕಿತ್ಸೆ ಪಡೆಯಲು ಒಪ್ಪಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications