Manmohan Singh: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಯಲ್ಲಿ....
ಭಾರತದ ಆರ್ಥಿಕತೆಯ ಸುಧಾರಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಭಾರತ ಕಂಡ ಅತ್ಯಂತ ಶ್ರೇಷ್ಠ ಆಡಳಿತಗಾರ ಎಂಬ ಬಿರುದು ಕೂಡ ಪಡೆದಿದ್ದರು. ಆಧುನಿಕ ಭಾರತದ ಅಭಿವೃದ್ಧಿಗೆ ಮೂಲವಾದ ಖಾಸಗೀಕರಣ, ಉದಾರೀಕರಣ & ಜಾಗತೀಕರಣಕ್ಕೆ ಚಾಲನೆ ನೀಡಿದ್ದೇ ಮನಮೋಹನ್ ಸಿಂಗ್ ಅವರು.
ಹೀಗೆ 1992 ಸಮಯಕ್ಕೇ ಭಾರತ ಆರ್ಥಿಕತೆಗೆ ಭದ್ರ ಬುನಾದಿ ಹಾಕಿಕೊಟ್ಟಿದ್ದರು ಮನಮೋಹನ್ ಸಿಂಗ್ ಅವರು. ಭಾರತೀಯರ ಅಭಿವೃದ್ಧಿಗೆ ಶ್ರಮಿಸಿದ್ದ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 2004 ರಿಂದ 2014ರ ತನಕ ಭಾರತದ ಪ್ರಧಾನಿಯಾಗಿ ಕೂಡ ಕೆಲಸ ಮಾಡಿ ಸಾಕಷ್ಟು ಸುಧಾರಣೆ ತಂದಿದ್ದರು. ಭಾರತದ ಆರ್ಥಿಕ ಸ್ಥಿತಿ ಕೂಡ, ಮನಮೋಹನ್ ಸಿಂಗ್ರ ಕಾಲದಲ್ಲಿ ಸಾಕಷ್ಟು ದೊಡ್ಡ ಸುಧಾರಣೆ ಕಂಡಿತ್ತು. ಹೀಗಿದ್ದಾಗಲೇ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆಸ್ಪತ್ರೆಯಲ್ಲಿ....

ಮನಮೋಹನ್ ಸಿಂಗ್ ಅವರಿಗೆ ಏನಾಗಿತ್ತು?
ಭಾರತ ಕಂಡ ಶ್ರೇಷ್ಠ ನಾಯಕರ ಸಾಲಿಗೆ ಮನಮೋಹನ್ ಸಿಂಗ್ ಅವರು ಕೂಡ ಸೇರಿದ್ದು, ವಯೋ ಸಹಜ ಕಾಯಿಲೆಗಳಿಂದ ಅವರು ಬಳಲುತ್ತಿದ್ದರು. ಹಾಗೇ, ಮನಮೋಹನ್ ಸಿಂಗ್ ಅವರಿಗೆ ಸೂಕ್ತ ಚಿಕಿತ್ಸೆಯನ್ನು ಕೂಡ ನೀಡಲಾಗುತ್ತಿತ್ತು. ಆದರೆ ದಿಢೀರ್ ಇಂತಹ ಬೆಳವಣಿಗೆ ನಡೆದು ಹೋಗಿದೆ. ಮನಮೋಹನ್ ಸಿಂಗ್ ಅವರು ಇಂದು ಸಂಜೆ ದಿಢೀರ್ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಮಯದಲ್ಲಿ ಸಾಕಷ್ಟು ಆತಂಕ ನಿರ್ಮಾಣ ಆಗಿತ್ತು.
ತುರ್ತುನಿಗಾ ಘಟಕದಲ್ಲಿ ಸಂಜೆಯಿಂದಲೂ ಮನಮೋಹನ್ ಸಿಂಗ್ ಅವರಿಗೆ ಚಿಕಿತ್ಸೆಯನ್ನು ನೀಡಲಾಗಿತ್ತು. ಆದರೆ ಅಂತಿಮವಾಗಿ ಚಿಕಿತ್ಸೆ ಫಲಿಸದೆ ಮನಮೋಹನ್ ಸಿಂಗ್ ಅವರು ಕೆಲ ನಿಮಿಷಗಳ ಹಿಂದೆ ಕೊನೆಯುಸಿರು ಎಳೆದಿರುವ ಮಾಹಿತಿ ಹೊರಬಿದ್ದಿದೆ. ಈ ಸುದ್ದಿ ಇದೀಗ ಭಾರತದಲ್ಲಿ ಮಾತ್ರವಲ್ಲದೆ ಜಗತ್ತಿನಾದ್ಯಂತ ಸಂಚಲನ ಸೃಷ್ಟಿ ಮಾಡಿದೆ. ಯಾಕಂದ್ರೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಜಾಗತಿಕ ಆರ್ಥಿಕತೆ ಸುಧಾರಣೆಯಲ್ಲಿ ಕೂಡ ಭಾರಿ ದೊಡ್ಡ ಪಾತ್ರವನ್ನು ವಹಿಸಿದ್ದರು.
ಸತತ 10 ವರ್ಷ ಪ್ರಧಾನಿಯಾಗಿದ್ದರು
2004 ರಿಂದ 2014ರ ತನಕ ಭಾರತದ ಪ್ರಧಾನಿಯಾಗಿ ಕಾರ್ಯ ನಿರ್ವಹಿಸಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು, ಇಡೀ ಜಗತ್ತು ಕಂಡ ಅತ್ಯುತ್ತಮ ನಾಯಕರ ಪೈಕಿ ಒಬ್ಬರು ಎನ್ನಬಹುದು. ಆರ್ಥಿಕ ತಜ್ಞರಾಗಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಭಾರತ ಅಡಳಿತ ವ್ಯವಸ್ಥೆಯಲ್ಲಿ ಭಾರಿ ದೊಡ್ಡ ಬದಲಾವಣೆ ತಂದ ಅಧಿಕಾರಿ ಕೂಡ ಆಗಿದ್ದರು. ಈ ರೀತಿ ಮನಮೋಹನ್ ಸಿಂಗ್ ಅವರು ಅಧಿಕಾರಿಯಾಗಿ, ಭಾರತದ ಆಡಳಿತ ಸುಧಾರಣೆ ಮಾಡಿ ನಂತರ ಸತತ 10 ವರ್ಷಗಳ ಕಾಲ ಭಾರತದ ಪ್ರಧಾನಿಯಾಗಿಯೂ ಆಡಳಿತ ನಡೆಸಿದರು.
ಒಟ್ನಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಅಸುನೀಗಿರುವ ಸುದ್ದಿ ಪ್ರಪಂಚದ ಹಲವು ದೇಶಗಳಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಹಾಗೇ ಜಗತ್ತು ಕಂಡ ಅತ್ಯುತ್ತಮ ಆರ್ಥಿಕ ತಜ್ಞರ ಪೈಕಿ ಒಬ್ಬರಾಗಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಗಲಿಕೆ, ಇದೀಗ ಭಾರಿ ದೊಡ್ಡ ನಷ್ಟವನ್ನೂ ಉಂಟುಮಾಡಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications