ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ ರತ್ನಪ್ರಭಾ ಬಿಜೆಪಿಗೆ ಸೇರ್ಪಡೆ?
ಬೆಂಗಳೂರು, ಏ.3: ಸರ್ಕಾರದ ನಿವೃತ್ತ ಕಾರ್ಯದರ್ಶಿ ಕೆ ರತ್ನಪ್ರಭಾ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎನ್ನವು ಸುದ್ದಿಗಳು ಹರಿದಾಡುತ್ತಿವೆ.
ಈ ಬಗ್ಗೆ ಬಿಜೆಪಿ ಮೂಲಗಳು ಮಾಹಿತಿ ನೀಡಿದ್ದು, ರಾಜ್ಯ ಕಾರ್ಯದರ್ಶಿಯಾಗಿ ಈ ಹಿಂದೆ ಕೆಲಸ ನಿರ್ವಹಿಸಿದ್ದ ಕೆ.ರತ್ನಪ್ರಭ ಬಿಜೆಪಿ ಸೇರ್ಪಡೆಗೊಳ್ಳುವುದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಸ್ವತಃ ಬಿಜೆಪಿಯ ಕಲಬುರ್ಗಿ ಲೋಕಸಭಾ ಅಭ್ಯರ್ಥಿ ಉಮೇಶ್ ಜಾಧವ್ ಅವರು ಮಾಹಿತಿ ನೀಡಿದ್ದು, ಕಲಬುರ್ಗಿಯಲ್ಲಿ ಉಮೇಶ್ ಜಾಧವ್ ತಮ್ಮ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಈ ಹಿಂದೆ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿಯಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿತ್ತು. ರತ್ನಪ್ರಭಾ ಅವರನ್ನು ಅಭ್ಯರ್ಥಿಯಾಗಿ ಮಾಡಿದರೆ ದಲಿತ ಸಮುದಾಯದ ಮತಗಳ ಜೊತೆಗೆ ಪ್ರಜ್ಞಾವಂತರ ಮತಗಳು ಸಹ ಬಿಜೆಪಿಗೆ ಬರುತ್ತದೆ ಎನ್ನುವುದು ಬಿಜೆಪಿಯ ಕಲ್ಪನೆಯಾಗಿದೆ.

ಇಂದು ಕಲಬುರ್ಗಿಯಲ್ಲಿ ಬೃಹತ್ ಮೆರವಣಿಗೆ ಮುಖಾಂತರ ಡಿಸಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸುವುದಾಗಿ ಹೇಳಿದ ಜಾಧವ್ ಅವರು, ಮೆರವಣಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಸಾಥ್ ನೀಡಲಿದ್ದಾರೆ. ಅಂತೆಯೇ ಇದೇ ಸಂದರ್ಭದಲ್ಲಿ ಕೆ. ರತ್ನಪ್ರಭ ಬಿಜೆಪಿ ಸೇರ್ಪಡೆ ಆಗಲಿದ್ದಾರೆ ಎಂದು ಜಾಧವ್ ಮಾಹಿತಿ ನೀಡಿದ್ದಾರೆ.
ರತ್ನಪ್ರಭಾ ಯಾರು:ಹೈದರಾಬಾದ್ ಮೂಲದ ರತ್ನಪ್ರಭಾ ಅವರು 1981ನೇ ಬ್ಯಾಚ್ ಐಎಎಸ್ ಅಧಿಕಾರಿ. ತಂದೆ ಸಿವಿಲ್ ಇಂಜಿನಿಯರ್ ಆಗಿದ್ದರು. ತಾಯಿ ವೈದ್ಯೆ. ರತ್ನಪ್ರಭಾ ಅವರ ಸಹೋದರ ಸಹ ನಾಗರಿಕಸೇವೆಯಲ್ಲಿದ್ದಾರೆ.
ಕರ್ನಾಟಕದ ಲೋಕಸಭಾ ಸದಸ್ಯರಲ್ಲಿ ಯಾರು ಎಷ್ಟು ಓದಿದ್ದಾರೆ?
ರತ್ನಪ್ರಭಾ ಸರಳ ಮತ್ತು ಸಜ್ಜನಿಕೆಯ ಅಧಿಕಾರಿ : ಸಿಎಂ ಕುಮಾರಸ್ವಾಮಿ 1981ರಲ್ಲಿ ಅಸಿಸ್ಟೆಂಟ್ ಕಮಿಷನರ್ ಆಗಿ ಬೀದರ್ನಲ್ಲಿ ರತ್ನಪ್ರಭಾ ಅವರು ಸೇವೆ ಆರಂಭಿಸಿದರು. ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications