ಕದ್ದುಮುಚ್ಚಿ ತಮಿಳುನಾಡಿಗೆ ನೀರು: ರೈತರ ಪ್ರತಿಭಟನೆ
ಮಂಡ್ಯ,ಜು. 17: ಕೆಆರ್ಎಸ್ ಜಲಾಶಯ ಭರ್ತಿಯಾಗುವ ಮುನ್ನವೇ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿರುವ ಕ್ರಮ ಖಂಡಿಸಿ ರೈತ ಸಂಘದ ಕಾರ್ಯಕರ್ತರು ಕೆಆರ್ಎಸ್ ಬಳಿ ಇರುವ ಕಾವೇರಿ ನೀರಾವರಿ ನಿಗಮದ ಎದುರು ಪ್ರತಿಭಟನೆ ನಡೆಸಿದರು.
ಕಳೆದ ಎರಡು ದಿನಗಳಿಂದ ತಮಿಳುನಾಡಿಗೆ 8ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಸುತ್ತಿದ್ದರೆ, ಬುಧವಾರದಿಂದ ಸಂಜೆ 6 ಗಂಟೆಯಿಂದ 10 ಸಾವಿರ ಕ್ಯೂಸೆಕ್ಸ್ ನೀರನ್ನು ಜಲಾಶಯದಿಂದ ಹೊರ ಬಿಡುತ್ತಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಜುಲೈ 31 ರವರೆಗೆ ಕೆಆರ್ಎಸ್ ಅಚ್ಚುಕಟ್ಟು ಪ್ರದೇಶದ ರೈತರ ನಾಲೆಗಳಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ನೀರಾವರಿ ಇಲಾಖೆಯ ಅಧಿಕಾರಿಗಳು ಈ ಹಿಂದೆ ಹೇಳಿದ್ದರು. ಆದರೀಗ ಜಿಲ್ಲೆಯ ರೈತರಿಗೆ ನೀರು ನೀಡದೆ ನೆರೆಯ ತಮಿಳುನಾಡಿಗೆ ನೀರು ಬಿಡುತ್ತಿರುವ ಸರ್ಕಾರದ ಕ್ರಮವನ್ನು ಖಂಡಿಸಿ ನಿಗಮದ ಫಲಕವನ್ನು ಕಿತ್ತುಹಾಕಿ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಹೆದ್ದಾರಿಯನ್ನು ಬಂದ್ ಮಾಡಿ ಪ್ರತಿಭಟನೆ: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ತೀವ್ರವಾಗಿ ಖಂಡಿಸಿರುವ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ, ಸರ್ಕಾರ ಕೂಡಲೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸದಿದ್ದರೆ ಮಂಡ್ಯ-ಬೆಂಗಳೂರು ಹೆದ್ದಾರಿಯನ್ನು ಬಂದ್ ಮಾಡಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಕಾವೇರಿ ನ್ಯಾಯಾಧಿಕರಣ ತೀರ್ಪಿನ ಪ್ರಕಾರ ತಮಿಳುನಾಡಿಗೆ ಜೂನ್ನಲ್ಲಿ 30 ಟಿಎಂಸಿ ಹಾಗೂ ಜುಲೈನಲ್ಲಿ 50-60 ಟಿಎಂಸಿ ನೀರನ್ನು ಕೆಆರ್ಎಸ್ನಿಂದ ಬಿಡಬೇಕಾಗಿತ್ತು. ಆದರೆ, ಜೂನ್ನಲ್ಲಿ ಮುಂಗಾರು ಕೈ ಕೊಟ್ಟಿದ್ದರಿಂದ ತಮಿಳುನಾಡಿಗೆ ನಿಗದಿತ ನೀರನ್ನು ಬಿಡಲಾಗಿರಲಿಲ್ಲ. ಈಗ ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಕೆಆರ್ಎಸ್ಗೆ ಈಗ ಎರಡು ದಿನಗಳಿಂದ ಅಂದಾಜು 20 ಸಾವಿರ ಅಧಿಕ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ನ್ಯಾಯಾಧಿಕರಣದ ತೂಗು ಕತ್ತಿಯಿಂದ ತಪ್ಪಿಸಿಕೊಳ್ಳಲು ಇದೀಗ ರಾಜ್ಯ ಸರ್ಕಾರ ಬರುತ್ತಿರುವ ನೀರಿನಲ್ಲಿ ತಮಿಳುನಾಡಿಗೆ 10 ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಸುತ್ತಿದೆ.
ನೀರು ಎಷ್ಟಿದೆ? ಗರಿಷ್ಠ 124 ಅಡಿಯ ಜಲಾಶಯದಲ್ಲಿ ಪ್ರಸ್ತುತ 90.40 ಅಡಿ ನೀರು ಸಂಗ್ರಹವಾಗಿದೆ. 24829 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದರೆ, 9871 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications