ಕದ್ದುಮುಚ್ಚಿ ತಮಿಳುನಾಡಿಗೆ ನೀರು: ರೈತರ ಪ್ರತಿಭಟನೆ
ಮಂಡ್ಯ,ಜು. 17: ಕೆಆರ್ಎಸ್ ಜಲಾಶಯ ಭರ್ತಿಯಾಗುವ ಮುನ್ನವೇ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿರುವ ಕ್ರಮ ಖಂಡಿಸಿ ರೈತ ಸಂಘದ ಕಾರ್ಯಕರ್ತರು ಕೆಆರ್ಎಸ್ ಬಳಿ ಇರುವ ಕಾವೇರಿ ನೀರಾವರಿ ನಿಗಮದ ಎದುರು ಪ್ರತಿಭಟನೆ ನಡೆಸಿದರು.
ಕಳೆದ ಎರಡು ದಿನಗಳಿಂದ ತಮಿಳುನಾಡಿಗೆ 8ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಸುತ್ತಿದ್ದರೆ, ಬುಧವಾರದಿಂದ ಸಂಜೆ 6 ಗಂಟೆಯಿಂದ 10 ಸಾವಿರ ಕ್ಯೂಸೆಕ್ಸ್ ನೀರನ್ನು ಜಲಾಶಯದಿಂದ ಹೊರ ಬಿಡುತ್ತಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.
ಜುಲೈ 31 ರವರೆಗೆ ಕೆಆರ್ಎಸ್ ಅಚ್ಚುಕಟ್ಟು ಪ್ರದೇಶದ ರೈತರ ನಾಲೆಗಳಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ನೀರಾವರಿ ಇಲಾಖೆಯ ಅಧಿಕಾರಿಗಳು ಈ ಹಿಂದೆ ಹೇಳಿದ್ದರು. ಆದರೀಗ ಜಿಲ್ಲೆಯ ರೈತರಿಗೆ ನೀರು ನೀಡದೆ ನೆರೆಯ ತಮಿಳುನಾಡಿಗೆ ನೀರು ಬಿಡುತ್ತಿರುವ ಸರ್ಕಾರದ ಕ್ರಮವನ್ನು ಖಂಡಿಸಿ ನಿಗಮದ ಫಲಕವನ್ನು ಕಿತ್ತುಹಾಕಿ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಹೆದ್ದಾರಿಯನ್ನು ಬಂದ್ ಮಾಡಿ ಪ್ರತಿಭಟನೆ: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ತೀವ್ರವಾಗಿ ಖಂಡಿಸಿರುವ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ, ಸರ್ಕಾರ ಕೂಡಲೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸದಿದ್ದರೆ ಮಂಡ್ಯ-ಬೆಂಗಳೂರು ಹೆದ್ದಾರಿಯನ್ನು ಬಂದ್ ಮಾಡಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಕಾವೇರಿ ನ್ಯಾಯಾಧಿಕರಣ ತೀರ್ಪಿನ ಪ್ರಕಾರ ತಮಿಳುನಾಡಿಗೆ ಜೂನ್ನಲ್ಲಿ 30 ಟಿಎಂಸಿ ಹಾಗೂ ಜುಲೈನಲ್ಲಿ 50-60 ಟಿಎಂಸಿ ನೀರನ್ನು ಕೆಆರ್ಎಸ್ನಿಂದ ಬಿಡಬೇಕಾಗಿತ್ತು. ಆದರೆ, ಜೂನ್ನಲ್ಲಿ ಮುಂಗಾರು ಕೈ ಕೊಟ್ಟಿದ್ದರಿಂದ ತಮಿಳುನಾಡಿಗೆ ನಿಗದಿತ ನೀರನ್ನು ಬಿಡಲಾಗಿರಲಿಲ್ಲ. ಈಗ ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಕೆಆರ್ಎಸ್ಗೆ ಈಗ ಎರಡು ದಿನಗಳಿಂದ ಅಂದಾಜು 20 ಸಾವಿರ ಅಧಿಕ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ನ್ಯಾಯಾಧಿಕರಣದ ತೂಗು ಕತ್ತಿಯಿಂದ ತಪ್ಪಿಸಿಕೊಳ್ಳಲು ಇದೀಗ ರಾಜ್ಯ ಸರ್ಕಾರ ಬರುತ್ತಿರುವ ನೀರಿನಲ್ಲಿ ತಮಿಳುನಾಡಿಗೆ 10 ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಸುತ್ತಿದೆ.
ನೀರು ಎಷ್ಟಿದೆ? ಗರಿಷ್ಠ 124 ಅಡಿಯ ಜಲಾಶಯದಲ್ಲಿ ಪ್ರಸ್ತುತ 90.40 ಅಡಿ ನೀರು ಸಂಗ್ರಹವಾಗಿದೆ. 24829 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದರೆ, 9871 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ.
-
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?












Click it and Unblock the Notifications