ಸುವರ್ಣ ಸೌಧದ ಆವಣದಲ್ಲಿ ರಾಣಿ ಚೆನ್ನಮ್ಮ, ರಾಯಣ್ಣ, ಗಾಂಧೀಜಿ, ಅಂಬೇಡ್ಕರ್ ಪ್ರತಿಮೆಗೆ ಶಂಕುಸ್ಥಾಪನೆ
ಬೆಳಗಾವಿ, ಡಿಸೆಂಬರ್ 28: ನಾಳೆ (ಡಿಸೆಂಬರ್ 29 ರಂದು) ಬೆಳಿಗ್ಗೆ 10.15 ಗಂಟೆಗೆ ಸುವರ್ಣ ಸೌಧದ ಆವರಣದಲ್ಲಿ ಕಿತ್ತೂರ ರಾಣಿ ಚೆನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮಹಾತ್ಮಾ ಗಾಂಧಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುದ್ದಲಿಪೂಜೆ ನೆರವೇರಿಸುವರು.
ಕಳೆದ ವರ್ಷದ ಬೆಳಗಾವಿ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ಈ ಪ್ರತಿಮೆಗಳನ್ನು ಸ್ಥಾಪಿಸಲಾಗುತ್ತಿದೆ. ಕರ್ನಾಟಕ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಭಯ ಸದನಗಳ ಪ್ರತಿ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್, ಸಚಿವ ಸಂಪುಟದ ಸದಸ್ಯರು ಹಾಗೂ ಶಾಸಕರು, ಸರ್ಕಾರದ ಹಿರಿಯ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಇನ್ನೂ ಚಳಿಗಾಲದ ಅಧಿವೇಶನ ಆರಂಭವಾದ ಮೊದಲ ದಿನ ಸುವರ್ಣ ಸೌಧದ ಅಧಿವೇಶನದ ಸಭಾಂಗಣದಲ್ಲಿ ವಿರೋಧ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆಯದೆ ಸುವರ್ಣಸೌಧದ ವಿಧಾನಸಭೆ ಸಭಾಂಗಣದಲ್ಲಿ ಏಕಾಏಕಿ ವೀರ ಸಾವರ್ಕರ್ ಸೇರಿದಂತೆ ಹಲವು ಗಣ್ಯರ ಭಾವಚಿತ್ರಗಳನ್ನು ಅನಾವರಣಗೊಳಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಧೋರಣೆಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ಸುವರ್ಣಸೌಧದ ಮೆಟ್ಟಿಲುಗಳ ಬಳಿ ಧರಣಿ ಹಾಗೂ ಕಲಾಪ ಸಲಹಾ ಸಮಿತಿ ಬಹಿಷ್ಕಾರದ ಮೂಲಕ ಪ್ರತಿಭಟಿಸಿತ್ತು. ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಧರಣಿ ನಡೆಸಿದ ಕಾಂಗ್ರೆಸ್ ಶಾಸಕರು, ವೀರ್ ಸಾವರ್ಕರ್ ಸೇರಿದಂತೆ ಯಾರೊಬ್ಬರ ಫೋಟೊ ಅಳವಡಿಕೆಗೂ ನಮ್ಮ ವಿರೋಧವಿಲ್ಲ. ಆದರೆ, ಶಿಷ್ಟಾಚಾರ ಉಲ್ಲಂಘನೆ ಮಾಡಿ ಯಾವುದೇ ಚರ್ಚೆಯಿಲ್ಲದೆ ಭ್ರಷ್ಟಾಚಾರ ಹಾಗೂ ಹಗರಣಗಳಿಂದ ಗಮನ ಬೇರೆಡೆ ಸೆಳೆಯಲು ಇದನ್ನು ಬಳಸಿಕೊಳ್ಳುತ್ತಿರುವುದಕ್ಕೆ ನಮ್ಮ ಆಕ್ಷೇಪವಿದೆ ಎಂದು ತಿಳಿಸಿದ್ದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications