ಉಪ ಚುನಾವಣೆ ಹಿನ್ನೆಲೆ: ನಾಲ್ವರು ಕೆಎಎಸ್ ಅಧಿಕಾರಿಗಳ ಎತ್ತಂಗಡಿ
ಬೆಂಗಳೂರು, ಅಕ್ಟೋಬರ್ 12: ರಾಜ್ಯದ ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆಗೆ ಹಲವಾರು ಕ್ಷೇತ್ರಗಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ನಿರ್ದೇಶನದ ಅನ್ವಯ ನಾಲ್ವರು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
8 KAS ಅಧಿಕಾರಿಗಳ ವರ್ಗಾವಣೆ, ಎಸ್ಐ ಗಳ ವರ್ಗಾವಣೆಗೆ ಬ್ರೇಕ್
ಚಿತ್ರದುರ್ಗ ಅಪರ ಜಿಲ್ಲಾಧಿಕಾರಿಯಾಗಿದ್ದ ಸಂಗಪ್ಪ ಅವರನ್ನು ಶಿವಮೊಗ್ಗ ಜಿಲ್ಲಾ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಹುದ್ದೆಯ ನಿರೀಕ್ಷೆಯಲ್ಲಿದ್ದ ಡಾ ರಾಜೇಂದ್ರ ಪ್ರಸಾದ್ ಅವರನ್ನು ಮಳವಳ್ಳಿ ಭೂಸ್ವಾಧೀನಾಧಿಕಾರಿಯಾಗಿ ಮತ್ತು ಎಂ ಸಿದ್ದೇಶ್ವರ ಅವರನ್ನು ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರನ್ನಾಗಿ ಹಾಗೂ ಕಾವೇರಿ ನಿಗಮದ ಮುಖ್ಯ ಅಧಿಕಾರಿಯಾಗಿದ್ದ ಆರ್ .ರಂಗಸ್ವಾಮಿ ಅವರನ್ನು ಮಂಡ್ಯ ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿಯಾಗಿ ವರ್ಗಾವಣೆಗೊಳಿಸಿದೆ.
ಧಾರವಾಡದಲ್ಲಿ ಕೆಎಎಸ್ ಪರೀಕ್ಷೆಯಲ್ಲಿ ನಕಲು: ಓರ್ವ ಡಿಬಾರ್
ಈ ಮಧ್ಯೆ ಐಎಎಸ್ ಅಧಿಕಾರಿಯಾಗಿರುವ ಡಾ. ಅಜಯ್ ನಾಗಭೂಷಣ್ ಅವರನ್ನು ಸಕ್ಕರೆ ನಿರ್ದೇಶನಾಲಯದ ಆಯುಕ್ತ ಹುದ್ದೆಯಿಂದ ಎತ್ತಂಗಡಿ ಮಾಡಿ, ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿಯಾಗಿ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ವ್ಯಾಪ್ತಿಗೆ ವರ್ಗಾವಣೆಗೊಳಿಸಲಾಗಿದೆ.