ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆ 21ರಿಂದ ಅಸೆಂಬ್ಲಿ ಅಧಿವೇಶನ: ಈ ನಾಲ್ವರು ಸಚಿವರು ಗೈರು ಸಾಧ್ಯತೆ

|
Google Oneindia Kannada News

ಬೆಂಗಳೂರು, ಸೆ 17: ಸೋಮವಾರದಿಂದ (ಸೆ 21) ಆರಂಭವಾಗಲಿರುವ ವಿಧಾನ ಮಂಡಲದ ಅಧಿವೇಶನದಲ್ಲಿ ಯಡಿಯೂರಪ್ಪ ಸರಕಾರದ ನಾಲ್ವರು ಸಚಿವರು ದೂರವುಳಿಯುವ ಸಾಧ್ಯತೆಯಿದೆ.

ನಾಲ್ವರು ಸಚಿವರಿಗೆ ಕೋವಿಡ್ 19 ಸೋಂಕು ತಗಲಿರುವುದರಿಂದ, ಅವರೆಲ್ಲರೂ ಕ್ವಾರಂಟೈನ್ ಗೆ ಒಳಪಟ್ಟಿದ್ದಾರೆ. ಕಳೆದ ಒಂದು ವಾರದಲ್ಲಿ ನಾಲ್ವರು ಸಚಿವರಿಗೆ ಸೋಂಕು ತಗಲಿದೆ.

ಶಾಸಕ ಜಮೀರ್ ಅಹ್ಮದ್ ವಿಚಾರಕ್ಕೆ ಬೊಮ್ಮಾಯಿ ಪ್ರತಿಕ್ರಿಯೆ! ಶಾಸಕ ಜಮೀರ್ ಅಹ್ಮದ್ ವಿಚಾರಕ್ಕೆ ಬೊಮ್ಮಾಯಿ ಪ್ರತಿಕ್ರಿಯೆ!

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್, ನಗರಾಭಿವೃದ್ದಿ ಖಾತೆಯ ಸಚಿವ ಬೈರತಿ ಬಸವರಾಜ್ ಮತ್ತು ಆಹಾರ, ನಾಗರೀಕ ಪೂರೈಕೆ ಖಾತೆಯ ಕೆ.ಗೋಪಾಲಯ್ಯ, ಈ ನಾಲ್ವರು ಸಚಿವರು ಅಧಿವೇಶನಕ್ಕೆ ಗೈರಾಗುವ ಸಾಧ್ಯತೆಯಿದೆ.

Four Ministers Of Yediyurappa Government May Not Attend The Assembly Session Due To Covid 19

ಕೊರೊನಾ ಹಾವಳಿಯ ನಡುವೆ, ಹಲವು ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಂಡು ಅಧಿವೇಶನ ಆರಂಭಿಸಲು ಸಕಲ ಸಿದ್ದತೆಗಳನ್ನು ಸರಕಾರ ನಡೆಸಿದೆ. ಲೋಕಸಭಾ ಅಧಿವೇಶನ ಆರಂಭವಾದ ಮೊದಲ ದಿನವೇ ಹಲವು ಸಂಸದಿರಿಗೆ ಕೊರೊನಾ ಪಾಸಿಟೀವ್ ಬಂದಿತ್ತು.

ವಿಧಾನ ಮಂಡಲ ಅಧಿವೇಶನಕ್ಕೆ ಕೊನೆಗೂ ದಿನಾಂಕ ನಿಗದಿವಿಧಾನ ಮಂಡಲ ಅಧಿವೇಶನಕ್ಕೆ ಕೊನೆಗೂ ದಿನಾಂಕ ನಿಗದಿ

ನಾಲ್ವರೂ ಸಚಿವರು ಸಂಪೂರ್ಣ ಗುಣಮುಖರಾದ ನಂತರವೂ ಒಂದು ವಾರ ಐಸೋಲೇಷನ್ ನಲ್ಲಿ ಇರಬೇಕಾಗಿರುವುದರಿಂದ, ಇವರೆಲ್ಲಾ ಸದನದ ಕಲಾಪದಲ್ಲಿ ಭಾಗವಹಿಸುವ ಸಾಧ್ಯತೆ ಕಮ್ಮಿ. ಈ ಬಗ್ಗೆ, ಸಚಿವರಿಂದ ಅಧಿಕೃತ ಹೇಳಿಕೆ ಬಂದಿಲ್ಲ.

Recommended Video

BSY ಪುತ್ರನಿಗೆ ರಾಜ್ಯ ರಾಜಕೀಯದಲ್ಲಿ ಏನು ಕೆಲಸ | Vijayendra | Oneindia Kannada

ಕೊರೊನಾ ನಿರ್ವಹಣೆ, ನೆರೆ ಪರಿಹಾರ, ಡಿ ಜೆ ಹಳ್ಳಿ ಘಟನೆ, ಡ್ರಗ್ಸ್ ಮುಂತಾದ ವಿಚಾರದಲ್ಲಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿರೋಧ ಪಕ್ಷಗಳು ತಂತ್ರಗಾರಿಕೆ ರೂಪಿಸುತ್ತಿವೆ. ಈ ವೇಳೆ, ನಾಲ್ವರು ಸಚಿವರ ಗೈರು, ಯಡಿಯೂರಪ್ಪನವರಿಗೆ ತಲೆನೋವಾಗಿ ಪರಿಣಮಿಸಬಹುದು. ಸೆಪ್ಟಂಬರ್ 21ರಿಂದ ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದೆ.

English summary
Four Ministers Of Yediyurappa Government May Not Attend The Assembly Session Due To Covid 19,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X