ಚಿಕ್ಕಮಗಳೂರಿನಲ್ಲಿ ನಾಲ್ವರು ನಕ್ಸಲರು ಶರಣಾಗತಿ
ಕೋಮುಸೌಹಾರ್ದ ವೇದಿಕೆಯ ಮುಖ್ಯಸ್ಥೆ ಮತ್ತು ಪತ್ರಕರ್ತೆ ಗೌರಿಲಂಕೇಶ್ ಅವರ ಉಪಸ್ಥಿತಿಯಲ್ಲಿ ನಾಲ್ವರು ಶರಣಾಗತರಾಗಿದ್ದಾರೆ.
ಚಿಕ್ಕಮಗಳೂರು, ಜೂನ್ 05: ನಾಲ್ವರು ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಶಾಂತಿಗಾಗಿ ನಾಗರಿಕ ವೇದಿಕೆ ಮತ್ತೊಮ್ಮೆ ಯಶಸ್ವಿಯಾಗಿದೆ. ಮಾವೋವಾದಿ ಸಿಪಿಐ ಸಂಘಟನೆಯ ನಾಲ್ವರು ಮಾಜಿ ಕಾಮ್ರೇಡ್ ಗಳು ಸೋಮವಾರ (ಜೂನ್ 05) ರಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶರಣಾಗತರಾಗಿದ್ದಾರೆ.
ದಕ್ಷಿಣ ಕನ್ನಡ ಉಸ್ತುವಾರಿ ವಿಕ್ರಮ್ ಗೌಡ, ಕನ್ಯಾಕುಮಾರಿ ಅಲಿಯಾಸ್ ಸುವರ್ಣ(30), ಚಿಕ್ಕಮಗಳೂರಿನ ಕಳಸ ಬಳಿಯ ಹಳುವಳ್ಳಿ.
ಚೆನ್ನಮ್ಮ ಅಲಿಯಾಸ್ ಸುಮಾ(32), ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮ, ಶಿವು ಅಲಿಯಾಸ್ ಜ್ಞಾನದೇವ್ (31), ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ಶರಣಾಗತರಾದ ನಕ್ಸಲರು.

ಕೋಮುಸೌಹಾರ್ದ ವೇದಿಕೆಯ ಮುಖ್ಯಸ್ಥೆ ಮತ್ತು ಪತ್ರಕರ್ತೆ ಗೌರಿಲಂಕೇಶ್ ಅವರ ಉಪಸ್ಥಿತಿಯಲ್ಲಿ ಈ ನಾಲ್ವರು ಶರಣಾಗತರಾಗಲಿದ್ದಾರೆ. ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
2014ರಲ್ಲಿ ನೂರ್ ಜುಲ್ಫಿಕಾರ್(ನೂರ್ ಶ್ರೀಧರ್) ಹಾಗೂ ಸಿರಿಮನೆ ನಾಗರಾಜ್ ಅವರು ಕೂಡ ನಕ್ಸಲ್ ಹೋರಾಟ ತ್ಯಜಿಸಿ ಜಿಲ್ಲಾಡಳಿತಕ್ಕೆ ಶರಣಾಗತರಾಗಿ ಸಮಾಜದ ಮುಖ್ಯವಾಹಿನಿಯನ್ನು ಸೇರಿದ್ದರು.ರಾಯಚೂರು ಮೂಲದ ರಿಜ್ವಾನ್ ಬೇಗಂ ಹಾಗೂ ಚಿಕ್ಕಮಗಳೂರು ಜಿಲ್ಲೆಯ ರಾಜು, ಭಾರತಿ ಹಾಗೂ ನೀಲಗುಳಿ ಪದ್ಮನಾಭ್ ಅವರು ಶರಣಾದ ನಕ್ಸಲರು 2016ರಲ್ಲಿ ಶರಣಾಗಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications